41-42 ಹೇಮಾನ್ ಮತ್ತು ಯೆದುತೂನ್ ಅವರೊಂದಿಗಿದ್ದು ತುತ್ತೂರಿಯನ್ನೂದುತ್ತಾ ತಾಳ ಬಾರಿಸುತ್ತಾ ಇತರ ವಾದ್ಯಗಳನ್ನು ನುಡಿಸುತ್ತಾ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿದರು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿದ್ದರು.
ಆಮೇಲೆ ಅವನು ಜನರ ಸಮ್ಮತಿಯಿಂದ ಯೆಹೋವನಿಗೋಸ್ಕರ ಗಾಯನಮಾಡುವದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ - ಪರಿಶುದ್ಧತ್ವವೆಂಬ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂದು ಭಜಿಸಿರಿ ಎಂಬದಾಗಿ ಆಜ್ಞಾಪಿಸಿದನು.
ಇಸ್ರಾಯೇಲ್ಯರೆಲ್ಲರೂ ಬೆಂಕಿ ಇಳಿದುಬರುವದನ್ನೂ ಯೆಹೋವನ ತೇಜಸ್ಸು ಆಲಯದಲ್ಲಿರುವದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿ - ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿದೆ ಎಂದು ಕೃತಜ್ಞತಾಸ್ತುತಿಮಾಡಿದರು.
ಆಮೇಲೆ ಅವನು ನನ್ನನ್ನು ಒಳಗಣ ಪ್ರಾಕಾರಕ್ಕೆ ಕರತಂದನು; ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು; ಬಡಗಣ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ತೆಂಕಲಿಗೆ ಅಭಿಮುಖವಾಗಿತ್ತು; ತೆಂಕಣ ಹೆಬ್ಬಾಗಿಲ ಪಕ್ಕದಲ್ಲಿ ಇನ್ನೊಂದು ಕೋಣೆಯು ಬಡಗಲಿಗೆ ಅಭಿಮುಖವಾಗಿತ್ತು.