Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:1 - ಕನ್ನಡ ಸತ್ಯವೇದವು J.V. (BSI)

1 ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ಯೆಹೋವನ ನಿಬಂಧನ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ಅರಸ ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನು ತನ್ನ ಮನೆಗೆ ಹಿಂತಿರುಗಿದ ಬಳಿಕ ಪ್ರವಾದಿಯಾದ ನಾತಾನನಿಗೆ, “ನಾನು ದೇವದಾರು ಮರಗಳಿಂದ ಮಾಡಿದ ಮನೆಯಲ್ಲಿ ವಾಸಮಾಡುತ್ತಿರುವಾಗ ದೇವರ ಒಡಂಬಡಿಕೆಯ ಪೆಟ್ಟಿಗೆಯು ಗುಡಾರದೊಳಗೆ ಇಡಲ್ಪಟ್ಟಿದೆ. ದೇವರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿರುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ, ಒಂದು ದಿನ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:1
28 ತಿಳಿವುಗಳ ಹೋಲಿಕೆ  

ನಾನು ಇಸ್ರಾಯೇಲ್ಯರನ್ನು [ಐಗುಪ್ತ ದೇಶದಿಂದ] ಬರ ಮಾಡಿದಂದಿನಿಂದ ಇಂದಿನವರೆಗೂ ಮನೆಯಲ್ಲಿ ವಾಸಮಾಡಲಿಲ್ಲ; ಗುಡಾರಗಳಲ್ಲಿ ವಾಸಿಸುತ್ತಾ ಇದ್ದೆನು.


ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವಮಂಜೂಷಕ್ಕೋಸ್ಕರವೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು.


ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆಹಾ, ಸ್ವಲ್ಪ ಮಾತ್ರ ಸಿಕ್ಕಿತು; ನೀವು ಮನೆಗೆ ತೆಗೆದುಕೊಂಡು ಬಂದಾಗ ನಾನು ಅದರ ಮೇಲೆ ಉಸುರುಬಿಟ್ಟೆನು. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಹಾಳುಬಿದ್ದಿದೆ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.


ಈ ಆಲಯವು ಹಾಳುಬಿದ್ದಿದೆಯಲ್ಲಾ; ನೀವು ಒಳಗೋಡೆಗೆಲ್ಲಾ ಹಲಿಗೆಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವದಕ್ಕೆ ಈ ಸಮಯವು ತಕ್ಕದ್ದೋ?


ನೆಬೂಕದ್ನೆಚ್ಚರನಾದ ನಾನು ನನ್ನ ಆಲಯದಲ್ಲಿ ಹಾಯಾಗಿದ್ದೆನು, ಹೌದು ನನ್ನ ಅರಮನೆಯಲ್ಲಿ ಸೊಂಪಾಗಿದ್ದೆನು.


ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧೆಯುಳ್ಳವನಾಗಿರುವದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು;


ಅವನು ಯಾಕೋಬ್ಯರ ಶೂರನಾದ ಯೆಹೋವನಿಗೆ ಪ್ರಮಾಣದಿಂದ ಹರಕೆಮಾಡಿಕೊಂಡನಲ್ಲಾ.


ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀವಿುನಿಂದ ತಾನು ಯೆರೂಸಲೇವಿುನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿಟ್ಟ ಡೇರೆಗೆ ತೆಗೆದುಕೊಂಡು ಬಂದಿದ್ದರೂ


ದಾವೀದನ ಪೂರ್ವೋತ್ತರ ಚರಿತ್ರೆಯೂ ಅವನ ಆಳಿಕೆ, ಪರಾಕ್ರಮ, ಅವನಿಗೂ ಇಸ್ರಾಯೇಲ್ಯರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತವೂ


ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿಸಿದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವದಕ್ಕೋಸ್ಕರ ದೂತರನ್ನೂ ದೇವದಾರು ಮರಗಳನ್ನೂ ಶಿಲ್ಪಿಗಳನ್ನೂ ಬಡಗಿಯವರನ್ನೂ ಅವನ ಬಳಿಗೆ ಕಳುಹಿಸಿದನು.


ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನೂ ಕೆರೇತ್ಯ ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರ ಕತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.


ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗನಮಸ್ಕಾರಮಾಡಿ -


ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ಭಟರೂ ಅವನ ಪಕ್ಷದಲ್ಲಿರಲಿಲ್ಲ.


ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಆತನಿಗೋಸ್ಕರವಾಗಿ ಆ ಹುಡುಗನಿಗೆ ಯೆದೀದ್ಯನು ಎಂದು ಹೆಸರಿಟ್ಟನು.


ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಇವನ ಹತ್ತಿರ ಬಂದು ಹೇಳಿದ್ದೇನಂದರೆ - ಒಂದು ಊರಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಇನ್ನೊಬ್ಬನು ಬಡವನು.


ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯವಿುತ ಸ್ಥಳದಲ್ಲಿಟ್ಟರು; ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.


ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.


ನನ್ನ ತಂದೆಯಾದ ದಾವೀದನು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದಾಗ


ನಾತಾನನು ದಾವೀದನಿಗೆ - ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ ಅಂದನು.


ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದ್ದೆನು.


ಅವರು ಕೂಡಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನಂದರೆ - ನನ್ನ ಸಹೋದರರೇ, ಪ್ರಜೆಗಳೇ, ಕೇಳಿರಿ. ಯೆಹೋವನ ನಿಬಂಧನಮಂಜೂಷಕ್ಕೋಸ್ಕರವೂ ನಮ್ಮ ದೇವರ ಪಾದಪೀಠಕ್ಕೋಸ್ಕರವೂ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


[ನನ್ನ ನಿವಾಸಕ್ಕಾಗಿ] ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಧೂಮ್ರ ರಕ್ತವರ್ಣಗಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿಸಬೇಕು.


ಆಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು