Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:4 - ಕನ್ನಡ ಸತ್ಯವೇದವು J.V. (BSI)

4 ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ [ಗಡ್ಡದ ಅರ್ಧಭಾಗವನ್ನು] ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದುದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದುದರಿಂದ ಹಾನೂನನು ದಾವೀದನ ಸೈನಿಕರನ್ನು ಬಂಧಿಸಿದನು. ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಹಾನೂನನು ದಾವೀದನ ಸೇವಕರನ್ನು ಬಂಧಿಸಿ ಅವರ ಗಡ್ಡಗಳನ್ನು ಬೋಳಿಸಿ ಅವರ ವಸ್ತ್ರಗಳನ್ನು ಸೊಂಟದಿಂದ ಕೆಳಭಾಗದವರೆಗೆ ಕತ್ತರಿಸಿಬಿಟ್ಟು ಅವರನ್ನು ಹಿಂದಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಹಾನೂನನು ದಾವೀದನ ದೂತರನ್ನು ಹಿಡಿದು ಅವರ ಗಡ್ಡ, ತಲೆ ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:4
14 ತಿಳಿವುಗಳ ಹೋಲಿಕೆ  

ಆ ಧಣಿಯು ತಿರಿಗಿ ಮತ್ತೊಬ್ಬ ಆಳನ್ನು ಅವರ ಬಳಿಗೆ ಕಳುಹಿಸಲು ಅವನನ್ನು ಅವರು ತಲೆತಲೆಯ ಮೇಲೆ ಹೊಡೆದು ಅಪಮಾನ ಪಡಿಸಿದರು.


ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.


ಗಡ್ಡ ಬೋಳಿಸಿ ಬಟ್ಟೆಹರಿದು ಗಾಯಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಒಂದು ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.


ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ ಚಿಕ್ಕವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.


ಬಯಿತ್ ಮತ್ತು ದೀಬೋನ್ ಊರುಗಳವರು ಅಳುವದಕ್ಕಾಗಿ ಪೂಜಾಸ್ಥಾನಗಳಿಗೆ ಹತ್ತಿದ್ದಾರೆ; ನೆಬೋವಿನಲ್ಲಿಯೂ ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ; ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಿದೆ.


ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.


ಅವರು ದೇವಪ್ರೇಷಿತರನ್ನು ಗೇಲಿಮಾಡಿ ಆತನ ಮಾತುಗಳನ್ನು ತುಚ್ಫೀಕರಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ ಆತನ ಕೋಪಾಗ್ನಿಯು ಆತನ ಪ್ರಜೆಯ ಮೇಲೆ ಉರಿಯಹತ್ತಿತು, ಅದರ ತಾಪವು ಆರಿಹೋಗಲೇ ಇಲ್ಲ.


ಚಂಡಿಕೆ ಬಿಡಬಾರದು, ಗಡ್ಡವನ್ನು ವಿಕಾರಗೊಳಿಸಬಾರದು.


ಅಲ್ಲಿನ ಪ್ರಭುಗಳು ಹಾನೂನನಿಗೆ - ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ ಎಂದು ಹೇಳಿದರು.


ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದಾಗ ಅವನು ಬಹಳ ಅಪಮಾನ ಹೊಂದಿದ ಅವರಿಗೆ ಆಳುಗಳ ಮುಖಾಂತರವಾಗಿ - ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿದ್ದು ಅನಂತರ ಬನ್ನಿರಿ ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು