Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:14 - ಕನ್ನಡ ಸತ್ಯವೇದವು J.V. (BSI)

14 ಆಗ ಯೆಹೋವನು ಇಸ್ರಾಯೇಲ್ಯರ ಮೇಲೆ ವ್ಯಾಧಿಯನ್ನು ಬರಮಾಡಿದನು; ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು; ಅವರಲ್ಲಿ ಇಪ್ಪತ್ತು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಯೆಹೋವನು ಇಸ್ರೇಲರ ಮೇಲೆ ಬಹು ಘೋರವಾದ ವ್ಯಾಧಿಯನ್ನು ಕಳುಹಿಸಿದ್ದರಿಂದ ಎಪ್ಪತ್ತು ಸಾವಿರ ಜನರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದಕಾರಣ ಯೆಹೋವ ದೇವರು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:14
7 ತಿಳಿವುಗಳ ಹೋಲಿಕೆ  

ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ ಇದರ ನಿವಿುತ್ತ ಇಸ್ರಾಯೇಲ್ಯರ ಮೇಲೆ ದೇವರ ಕೋಪವುಂಟಾದದರಿಂದ ಅದನ್ನು ಪೂರ್ತಿಗೊಳಿಸಲಿಲ್ಲ. ಈ ಖಾನೇಷುಮಾರಿಯು ದಾವೀದನ ರಾಜ್ಯ ವೃತ್ತಾಂತಗ್ರಂಥದಲ್ಲಿ ಲಿಖಿತವಾಗಲಿಲ್ಲ.


ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರಮಂದಿ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡುವಲ್ಲಿ ಪಾಳೆಯತುಂಬಾ ಹೆಣಗಳಿದ್ದವು.


ಆಗ ಯೆಹೋವನು ಇಸ್ರಾಯೇಲ್ಯರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


ಬೇತ್‍ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಹಣಿಕಿನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಇದಲ್ಲದೆ ಐವತ್ತು ಸಾವಿರ ಜನರು ಮರಣಹೊಂದಿದರು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನುಂಟುಮಾಡಿದದರಿಂದ ಬೇತ್‍ಷೆಮೆಷಿನವರು ಗೋಳಾಡಿ -


ಆ ವ್ಯಾಧಿಯಿಂದ ಇಪ್ಪತ್ತನಾಲ್ಕುಸಾವಿರ ಮಂದಿ ಸತ್ತರು.


ಆ ರಾತ್ರಿಯಲ್ಲಿ ಫರೋಹನೂ ಅವನ ಪರಿವಾರದವರೂ ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಶವವಿಲ್ಲದ ಮನೆ ಒಂದೂ ಇರಲಿಲ್ಲವಾದದರಿಂದ ಐಗುಪ್ತದೇಶದಲ್ಲಿ ದೊಡ್ಡ ಗೋಳಾಟವುಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು