Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:17 - ಕನ್ನಡ ಸತ್ಯವೇದವು J.V. (BSI)

17 ಮತ್ತು ದಾವೀದನು ದೇವರಿಗೆ - ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ! ಮಹಾಪಾಪಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವದಕ್ಕೆ ಅವರಿಗೆ ವಿರೋಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮತ್ತು ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ. ಮಹಾಪಾಪಮಾಡಿದವನು ನಾನೇ. ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವುದಕ್ಕೆ ಅವರಿಗೆ ವಿರುದ್ಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರುದ್ಧವಾಗಿರಲಿ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೇ; ಮಹಾಪಾಪ ಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಸರ್ವೇಶ್ವರಾ, ನನ್ನ ದೇವರೇ, ನಿಮ್ಮ ಕತ್ತಿ ನಿಮ್ಮ ಜನರನ್ನು ಬಾಧಿಸದೆ, ಅವರಿಗೆ ವಿರೋಧವಾಗಿ ಇರದೆ, ನನಗೂ ನನ್ನ ಮನೆಯವರಿಗೂ ವಿರೋಧ ಆಗಿರಲಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದಾವೀದನು ದೇವರಿಗೆ, “ಪಾಪಮಾಡಿದವನು ನಾನು. ಜನಗಣತಿಯನ್ನು ಮಾಡಲು ಆಜ್ಞಾಪಿಸಿದವನು ನಾನೇ. ನಾನು ತಪ್ಪು ಮಾಡಿದೆ! ಆದರೆ ಇಸ್ರೇಲರು ಏನೂ ತಪ್ಪು ಮಾಡಲಿಲ್ಲ. ದೇವರಾದ ಯೆಹೋವನೇ, ನನ್ನನ್ನೂ ನನ್ನ ಪರಿವಾರದವರನ್ನೂ ಶಿಕ್ಷಿಸು. ನಿನ್ನ ಜನರನ್ನು ಸಾಯಿಸುವ ವ್ಯಾಧಿಯನ್ನು ನಿಲ್ಲಿಸು” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದಾವೀದನು ದೇವರಿಗೆ, “ಜನರಲ್ಲಿ ಯುದ್ಧ ವೀರರನ್ನು ಲೆಕ್ಕಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಈ ಕೆಟ್ಟದ್ದನ್ನು ಮಾಡಿದೆನು, ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನನ್ನ ಯೆಹೋವ ದೇವರೇ, ನಿಮ್ಮ ಹಸ್ತವು ನಿಮ್ಮ ಜನರನ್ನು ಬಾಧಿಸದೆ, ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:17
20 ತಿಳಿವುಗಳ ಹೋಲಿಕೆ  

ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.


ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದರಲ್ಲಿಯೇ ಪ್ರೀತಿ ಇಂಥದೆಂದು ನಮಗೆ ತಿಳಿದು ಬಂದದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ಶರೀರಸಂಬಂಧವಾಗಿ ಸ್ವಜನರಾಗಿರುವ ನನ್ನ ಸಹೋದರರಿಗೋಸ್ಕರ ನಾನೇ ಸಾಧ್ಯವಾದರೆ ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯು ಹೊಗೆ ಆಡುವದೇನು?


ದೇವರೇ, ನನ್ನ ರಕ್ಷಣಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ಸತ್ಯಸಂಧತೆಯನ್ನು ಕೊಂಡಾಡುವದು.


ನಿನಗೇ ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದಲ್ಲಾ.


ಕುರಿಗಳನ್ನೋ ಎಂಬಂತೆ ನಮ್ಮನ್ನು ಘಾತುಕರಿಗೆ ಒಪ್ಪಿಸಿದ್ದೀ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿಬಿಟ್ಟಿದ್ದೀ.


ಆಗ ದಾವೀದನು - ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ; ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷವಿುಸು ಎಂದು ದೇವರನ್ನು ಪ್ರಾರ್ಥಿಸಲು


ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರಕೊಟ್ಟನು.


ದಾವೀದನು ಜನಸಂಹಾರಕದೂತನನ್ನು ಕಂಡಾಗ ಯೆಹೋವನಿಗೆ - ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು.


ಯೆಹೋವನು ತಿರಿಗಿ ಇಸ್ರಾಯೇಲ್ಯರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಯೆಹೂದ್ಯ ಕುಲಗಳವರ ಖಾನೇಷುಮಾರಿಮಾಡುವದಕ್ಕೆ ಪ್ರೇರೇಪಿಸಿದನು.


ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದದರಿಂದಲೂ ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದರಿಂದಲೂ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವದಿಲ್ಲ.


ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನಂದರೆ - ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ನಾಯಕನನ್ನಾಗಿ ನೇವಿುಸಿದೆನು.


ಈಗ ನೀವು ತಿರಿಗಿ ಯೆಹೋವನನ್ನು ಬಿಡುತ್ತೀರೋ? ನೀವು ಈ ಹೊತ್ತು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದರೆ ನಾಳೆಯೇ ಆತನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯಹತ್ತುವದು.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ಆದದರಿಂದ ಸೇವಕನಾದ ನಾನು ಈ ಹುಡುಗನಿಗೆ ಬದಲಾಗಿ ಸ್ವಾವಿುಗೆ ಗುಲಾಮನಾಗುವಂತೆಯೂ ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆಯೂ ಅನುಗ್ರಹ ಮಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.


ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ನಿಮ್ಮ ಮೇಲೆ ಎದ್ದಿರುವ ಸಮುದ್ರವು ಶಾಂತವಾಗುವದು; ಈ ದೊಡ್ಡ ತುಫಾನು ನಿಮಗೆ ಸಂಭವಿಸಿದ್ದು ನನ್ನ ನಿವಿುತ್ತವೇ ಎಂಬದು ನನಗೆ ಗೊತ್ತು ಎಂದುತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು