Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:22 - ಕನ್ನಡ ಸತ್ಯವೇದವು J.V. (BSI)

22 ದಾವೀದನು ಅವನಿಗೆ - ನಿನ್ನ ಕಣವನ್ನೂ ಭೂವಿುಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ವೇದಿಯನ್ನು ಕಟ್ಟಿಸುತ್ತೇನೆ; ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದಾವೀದನು ಅವನಿಗೆ, “ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದಾವೀದನು ಅವನಿಗೆ, “ನಿನ್ನ ಕಣವನ್ನೂ ಭೂಮಿಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುತ್ತೇನೆ; ಪೂರ್ಣ ಕ್ರಯ ತೆಗೆದುಕೊಂಡು ಅದನ್ನು ಕೊಡು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದಾವೀದನು ಒರ್ನಾನನಿಗೆ, “ನಿನ್ನ ಕಣವನ್ನು ನನಗೆ ಕ್ರಯಕ್ಕೆ ಮಾರಿಬಿಡು. ನಾನು ಇಲ್ಲಿ ಯಜ್ಞವೇದಿಕೆಯನ್ನು ಕಟ್ಟಿ ದೇವರನ್ನು ಆರಾಧಿಸಬೇಕು. ಆಗ ಈ ಭಯಂಕರ ವ್ಯಾಧಿಯು ನಿಂತುಹೋಗುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ದಾವೀದನು ಒರ್ನಾನನಿಗೆ, “ಈ ವ್ಯಾಧಿಯು, ಜನರನ್ನು ಬಿಟ್ಟುಹೋಗುವಂತೆ ನಾನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ, ಈ ಕಣದ ಸ್ಥಳವನ್ನು ನನಗೆ ಕೊಡು. ಅದನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:22
8 ತಿಳಿವುಗಳ ಹೋಲಿಕೆ  

ಅಹಾಬನು ನಾಬೋತನಿಗೆ - ನಿನ್ನ ದ್ರಾಕ್ಷೇತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ ಎಂದು ಹೇಳಿದನು.


ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವದಕ್ಕೇನು ಕಾರಣ ಎಂದು ಕೇಳಿದನು. ದಾವೀದನು ಅವನಿಗೆ - ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ವೇದಿಯನ್ನು ಕಟ್ಟುವದಕ್ಕೆ ಬಂದಿದ್ದೇನೆ ಎಂದು ಉತ್ತರಕೊಟ್ಟನು.


ಆ ಇಸ್ರಾಯೇಲ್ಯನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಹೊಕ್ಕು ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲ್ಯನನ್ನೂ ಆ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರಾಯೇಲ್ಯರಿಗುಂಟಾಗಿದ್ದ ವ್ಯಾಧಿ ನಿಂತುಹೋಯಿತು.


ಅವನು ಸತ್ತವರಿಗೂ ಬದುಕುವವರಿಗೂ ನಡುವೆ ನಿಂತಿರುವಾಗಲೇ ಆ ವಿಪತ್ತು ಶಮನವಾಯಿತು.


ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಗೋಳಾಡಿಸಿದನು.


ದಾವೀದನು ತನ್ನ ಬಳಿಗೆ ಬರುವದನ್ನು ಒರ್ನಾನನು ಕಂಡು ಕಣವನ್ನು ಬಿಟ್ಟುಹೋಗಿ ಅವನಿಗೆ ಅಡ್ಡಬಿದ್ದನು.


ಆಗ ಒರ್ನಾನನು ದಾವೀದನಿಗೆ - ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಯಜ್ಞಮಾಡೋಣವಾಗಲಿ. ಇಲ್ಲಿ ಯಜ್ಞಕ್ಕೆ ಹೋರಿಗಳೂ ಸೌದೆಗೆ ಹಂತೀಕುಂಟೆಗಳೂ ನೈವೇದ್ಯಕ್ಕೋಸ್ಕರ ಗೋದಿಯೂ ಇರುತ್ತವೆ; ಇವೆಲ್ಲವನ್ನೂ ಕೊಡುತ್ತೇನೆ ಎಂದು ಹೇಳಿದನು.


ಅವನ ಭೂವಿುಯ ಅಂಚಿನಲ್ಲಿರುವ ಮಕ್ಪೇಲದ ಗವಿಯನ್ನು ನನಗೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ಅವನು ಸಮಾಧಿಯ ಸ್ಥಳವನ್ನು ನನ್ನ ಸ್ವಂತಕ್ಕಾಗಿ ನಿಮ್ಮೆದುರಿನಲ್ಲಿ ಕೊಟ್ಟರೆ ಪೂರ್ಣಕ್ರಯವನ್ನು ಕೊಡುತ್ತೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು