Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:3 - ಕನ್ನಡ ಸತ್ಯವೇದವು J.V. (BSI)

3 ಆಗ ಯೋವಾಬನು - ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದನ್ನು ಅಪೇಕ್ಷಿಸುವದೇನು? ಇಸ್ರಾಯೇಲ್ಯರನ್ನು ಅಪರಾಧಕ್ಕೆ ಗುರಿಮಾಡುವದೇಕೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೋವಾಬನು, “ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದ್ದನ್ನು ಅಪೇಕ್ಷಿಸುವುದೇನು? ಇಸ್ರಾಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಯೋವಾಬನು, “ನನ್ನ ಒಡೆಯರಾದ ಅರಸರೇ, ಸರ್ವೇಶ್ವರ ತಮ್ಮ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ; ಅವರೆಲ್ಲರೂ ನನ್ನ ಒಡೆಯರ ಸೇವಕರಷ್ಟೇ. ಆದರೆ ಒಡೆಯರು ಇಂಥದನ್ನು ಅಪೇಕ್ಷಿಸಿದ್ದೇಕೆ? ಇಸ್ರಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದಕ್ಕೆ ಉತ್ತರವಾಗಿ ಯೋವಾಬನು, “ಯೆಹೋವನು ತನ್ನ ಜನಾಂಗವನ್ನು ನೂರುಪಟ್ಟು ಅಭಿವೃದ್ಧಿಪಡಿಸಲಿ. ಅರಸನೇ, ನೀನು ಈ ಕಾರ್ಯವನ್ನು ಯಾಕೆ ಮಾಡಿಸಬೇಕು? ಹೀಗೆ ಮಾಡಿದರೆ ನೀನು ಎಲ್ಲಾ ಇಸ್ರೇಲರನ್ನು ಪಾಪದಲ್ಲಿ ಬೀಳುವಂತೆ ಮಾಡುತ್ತಿರುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೋವಾಬನು, “ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ. ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರೂ ನನ್ನ ಒಡೆಯನ ಸೇವಕರಲ್ಲವೋ, ನನ್ನ ಒಡೆಯನು ಈ ಕಾರ್ಯವನ್ನು ಅಪೇಕ್ಷಿಸುವುದು ಏಕೆ? ಇದು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:3
15 ತಿಳಿವುಗಳ ಹೋಲಿಕೆ  

ನೀವು ಈಗ ಇರುವದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ ತಾನು ವಾಗ್ದಾನ ಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.


ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳ ಪ್ರಕಾರವೂ ಅಸಂಖ್ಯಾತರಾಗುತ್ತಿದ್ದರು; ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.


ಯೆಹೋವನೇ, ನಿನ್ನ ಜನವನ್ನು ಹೆಚ್ಚಿಸಿದ್ದಿ, ಹೌದು ನಿನ್ನ ಪ್ರಜೆಯನ್ನು ವೃದ್ಧಿಗೊಳಿಸಿದ್ದಿ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದಿ.


ಪ್ರಜೆಗಳ ವೃದ್ಧಿ ರಾಜನ ಮಹಿಮೆ; ಪ್ರಜೆಗಳ ಕ್ಷಯ ಪ್ರಭುವಿಗೆ ಭಯ.


ಯೆಹೋವನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;


ಧೈರ್ಯದಿಂದಿರು; ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಪೌರುಷವನ್ನು ತೋರಿಸೋಣ. ಯೆಹೋವನು ತನಗೆ ಸರಿಕಾಣುವಂಥದನ್ನು ಮಾಡಲಿ ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿವಿುತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲ್ಯರು ಮಾಡಿದ ಪಾಪಗಳ ನಿವಿುತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು ಎಂದು ಆಕೆಗೆ ಹೇಳಿದನು.


ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೇದಲ್ಲ.


ಆಗ ಅವನು ಆರೋನನನ್ನು - ನೀನು ಈ ಜನರಿಂದ ಮಹಾಪರಾಧವನ್ನು ಮಾಡಿಸಿದಿಯಲ್ಲಾ; ಹೀಗೆ ಮಾಡಿಸುವದಕ್ಕೆ ಇವರು ನಿನಗೇನು ಮಾಡಿದರು ಎಂದು ವಿಚಾರಿಸಲು


ಆಮೇಲೆ ಅವನು ಅಬ್ರಹಾಮನನ್ನು ಕರಿಸಿ - ನೀನು ನಮಗೆ ಮಾಡಿದ್ದೇನು? ನಾನು ಯಾವ ತಪ್ಪು ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ಮಾಡಬಾರದ ಕಾರ್ಯಗಳನ್ನು ನನಗೆ ಮಾಡಿದೆ ಎಂದು ಹೇಳಿ -


ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ಸಾಧಿಸಿದ್ದರಿಂದ ಅವನು ಹೊರಟುಹೋಗಿ ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಲ್ಲಿ ಸಂಚರಿಸಿ ಯೆರೂಸಲೇವಿುಗೆ ಹಿಂದಿರುಗಿದನು.


ನೀನು ಖಾನೇಷುಮಾರಿಯಾಗತಕ್ಕ ಇಸ್ರಾಯೇಲ್ಯರನ್ನು ಲೆಕ್ಕಿಸುವಾಗ ಅವರೊಳಗೆ ವ್ಯಾಧಿಸಂಭವಿಸದಂತೆ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಕ್ಕೆ ಈಡಾಗಿ ಯೆಹೋವನಿಗೆ ಕಪ್ಪವನ್ನು ಕೊಡಬೇಕು.


ಅವರು ಗಿಲ್ಯಾದಿನಲ್ಲಿದ್ದ ರೂಬೇನ್ಯರು, ಗಾದ್ಯರು ಮನಸ್ಸೆ ಕುಲದ ಅರ್ಧಜನರು ಇವರ ಬಳಿಗೆ ಬಂದು -


ಆದದರಿಂದ ಅವನು ಯೆಹೋಯಾದಾವ ಮೊದಲಾದ ಯಾಜಕರನ್ನು ಕರೆದು ಅವರಿಗೆ - ನೀವು ಈ ವರೆಗೂ ದೇವಾಲಯವನ್ನೇಕೆ ಜೀರ್ಣೋದ್ಧಾರ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರು ತಂದು ಕೊಡುವ ಹಣವನ್ನು ನಿಮ್ಮ ಕೈಯಲ್ಲಿಟ್ಟುಕೊಳ್ಳದೆ ಕೂಡಲೆ ಅದನ್ನು ದೇವಾಲಯದ ಜೀರ್ಣೋದ್ಧಾರಕ್ಕಾಗಿ ಕೊಡಿರಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು