19 ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.
19 ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು.
19 ಈಗ ನಿಮ್ಮ ಹೃದಯಗಳನ್ನೂ ಆತ್ಮಗಳನ್ನೂ ನಿಮ್ಮ ದೇವರಾದ ಯೆಹೋವನಿಗೆ ಕೊಡಿರಿ. ಆತನಿಗೆ ಪರಿಶುದ್ಧ ನಿವಾಸವನ್ನು ಆತನ ಹೆಸರಿಗಾಗಿ ಕಟ್ಟಿರಿ; ಒಡಂಬಡಿಕೆಯ ಪೆಟ್ಟಿಗೆಯನ್ನೂ ಇತರ ಪವಿತ್ರ ಸಾಮಾಗ್ರಿಗಳನ್ನೂ ಆತನ ಆಲಯಕ್ಕೆ ತನ್ನಿರಿ” ಎಂದು ಹೇಳಿದನು.
19 ನಿಮ್ಮ ದೇವರಾದ ಯೆಹೋವ ದೇವರನ್ನು ಹುಡುಕಲು ನಿಮ್ಮ ಹೃದಯವನ್ನೂ, ನಿಮ್ಮ ಪ್ರಾಣವನ್ನೂ ಒಪ್ಪಿಸಿ, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ದೇವರ ಪರಿಶುದ್ಧ ಪಾತ್ರೆಗಳನ್ನು ಯೆಹೋವ ದೇವರ ನಾಮಕ್ಕಾಗಿ ಕಟ್ಟಲಾಗುವ ಆಲಯದೊಳಗೆ ತರುವ ಹಾಗೆ, ಎದ್ದು ಯೆಹೋವ ದೇವರಾದ ದೇವರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ,” ಎಂದನು.
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು.
ಇದಲ್ಲದೆ ಐಗುಪ್ತದಿಂದ ಬಿಡುಗಡೆ ಹೊಂದಿದ ನಮ್ಮ ಪಿತೃಗಳಿಗೆ ಯೆಹೋವನಿಂದ ದೊರಕಿದ ನಿಬಂಧನಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇಟ್ಟೆನು ಎಂದು ಹೇಳಿದನು.
ಯೆಹೋವನ ಅನುಗ್ರಹದಿಂದ ತಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ಸುತ್ತಲೂ ಯುದ್ಧಗಳನ್ನು ನಡಿಸಬೇಕಾಗಿದ್ದದರಿಂದ ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೆ.
ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.
ಶಿಲ್ಪಿಗರೂ ಬಡಗಿಯವರೂ ಬಂಗಾರ ಬೆಳ್ಳಿ ತಾಮ್ರ ಕಬ್ಬಿಣಗಳ ಎಲ್ಲಾ ತರದ ಕೆಲಸವನ್ನು ಮಾಡುವದರಲ್ಲಿ ಜಾಣರೂ ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವದಕ್ಕಾಗುವದಿಲ್ಲ. ಏಳು, ಕೆಲಸಕ್ಕೆ ಕೈಹಾಕು; ಯೆಹೋವನು ನಿನ್ನ ಸಂಗಡ ಇರಲಿ ಎಂದು ಹೇಳಿದನು.