Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:26 - ಕನ್ನಡ ಸತ್ಯವೇದವು J.V. (BSI)

26 ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ ಆರಾಧನಾ ಸಾಮಾಗ್ರಿಗಳನ್ನೂ ಹೊರುವದು ಅವಶ್ಯವಿಲ್ಲವೆಂದುಕೊಂಡು ದಾವೀದನು ಈ ಪ್ರಕಾರ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ, ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವೀದನು ಈ ಪ್ರಕಾರ ಆಜ್ಞೆ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಲೇವಿಯರು ಇನ್ನು ಮುಂದೆ ಅವರ ಗುಡಾರವನ್ನೂ ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲವೆಂದುಕೊಂಡು, ದಾವೀದನು ಈ ಪ್ರಕಾರ ವಿಧಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಇನ್ನು ಮುಂದೆ ಲೇವಿಯರಿಗೆ ದೇವದರ್ಶನ ಗುಡಾರವನ್ನಾಗಲಿ ಅದರ ಸಾಮಾಗ್ರಿಗಳನ್ನಾಗಲಿ ಹೊರುವ ಅವಶ್ಯವಿಲ್ಲ” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಲೇವಿಯರನ್ನು ಕುರಿತು ಅವರು ಗುಡಾರವನ್ನೂ, ಅವರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:26
7 ತಿಳಿವುಗಳ ಹೋಲಿಕೆ  

ದಂಡು ಹೊರಡುವಾಗ ಆರೋನನೂ ಅವನ ಮಕ್ಕಳೂ ಒಳಗೆ ಬಂದು [ಮಹಾಪವಿತ್ರಸ್ಥಾನವನ್ನು] ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಆಜ್ಞಾಶಾಸನಗಳ ಮಂಜೂಷವನ್ನು ಮುಚ್ಚಿಬಿಟ್ಟು


ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ; ದೇವದರ್ಶನದ ಗುಡಾರದ ಸಾಮಾನುಗಳನ್ನು ವಹಿಸುವದೇ ಅವರಿಗೆ ನೇಮಕವಾದ ಕೆಲಸ; ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.


ದಂಡು ಹೊರಡುವ ಕಾಲದಲ್ಲಿ ಆರೋನನೂ ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದನಂತರ ಕೆಹಾತ್ಯರು ಅವುಗಳನ್ನು ಹೊರುವದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು; ಮುಟ್ಟಿದರೆ ಸತ್ತಾರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವದಕ್ಕೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಅವರನ್ನು ನೇವಿುಸಿದನು. ಅವರು ಇಂದಿನವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ ಹೊರೆಯೂ ಗೊತ್ತು ಮಾಡಲ್ಪಟ್ಟಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು.


ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಲೆಕ್ಕಿಸಲ್ಪಟ್ಟರು.


ಎಲ್ಲಾ ಇಸ್ರಾಯೇಲ್ಯರನ್ನು ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ - ದಾವೀದನ ಮಗನೂ ಇಸ್ರಾಯೇಲ್‍ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇಟ್ಟುಬಿಡಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವದು ಅವಶ್ಯವಿಲ್ಲ; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು