Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:8 - ಕನ್ನಡ ಸತ್ಯವೇದವು J.V. (BSI)

8 ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಮಂಡಲಿಯಾದ ಸಮಸ್ತ ಇಸ್ರಾಯೇಲ್ಯರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೇ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವಾಸ್ತ್ಯವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದುದರಿಂದ ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಸಭೆಯಾದ ಸಮಸ್ತ ಇಸ್ರಾಯೇಲರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವತ್ತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನಿಮ್ಮ ದೇವರಾದ ಸರ್ವೇಶ್ವರನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಗೊಳ್ಳಬೇಕೆಂದು ಸರ್ವೇಶ್ವರನ ಸಮಾಜವಾದ ಸಮಸ್ತ ಇಸ್ರಯೇಲರ ಮುಂದೆ, ನಮ್ಮ ದೇವರಿಗೆ ಕೇಳಿಸುವಂತೆ, ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ನಾಡು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸೊತ್ತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಾನು ದೇವರ ಸನ್ನಿಧಾನದಲ್ಲಿಯೂ ಎಲ್ಲಾ ಇಸ್ರೇಲರ ಮುಂದೆಯೂ ನಿಮಗಿದನ್ನು ಹೇಳುತ್ತಿದ್ದೇನೆ. ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನೀವು ಉತ್ತಮವಾದ ಈ ದೇಶವನ್ನು ಅನುಭವಿಸುವಿರಿ; ನಿಮ್ಮ ಸಂತತಿಯವರೂ ಇದರ ಸುಖವನ್ನು ಅನುಭವಿಸುವಂತೆ ಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆದ್ದರಿಂದ ನೀವು ಈ ಉತ್ತಮ ದೇಶವನ್ನು ಸ್ವಾಧೀನಮಾಡಿಕೊಂಡು, ಅದನ್ನು ನಿರಂತರದಲ್ಲಿ ನಿಮ್ಮ ತರುವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ, ಯೆಹೋವ ದೇವರ ಸಭೆಯಾದ ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿಯೂ, ನಮ್ಮ ದೇವರು ಕೇಳಿಸುವಂತೆ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಗೊಳ್ಳಿರಿ ಎಂದು ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:8
28 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಯಾವದೂ ಇಲ್ಲದಿರದು, ಎಲ್ಲವೂ ಜೊತೆಜೊತೆಯಾಗಿರುವವು; ಆತನ ಬಾಯಿಂದ ಅಪ್ಪಣೆಯಾಯಿತಲ್ಲವೆ, ಆತನ ಆತ್ಮವು ಇವುಗಳನ್ನು ಒಟ್ಟಿಗೆ ಬರಮಾಡಿತಷ್ಟೆ.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ; ಪಾಪಿಯ ಸೊತ್ತು ಸಜ್ಜನರಿಗೆ ಗಂಟು.


ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ತ್ಯವನ್ನಾಗಿ ಬಿಡುವಿರಿ ಎಂದು ಹೇಳಿದಿಯಲ್ಲಾ.


ಆದದರಿಂದ ನೀವು ಸ್ವಲ್ಪವಾದರೂ ತಪ್ಪದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.


ಆ ಸಭೆಯವರು ಥೆಸಲೋನಿಕದವರಿಗಿಂತ ಸದ್ಗುಣವುಳ್ಳವರಾಗಿದ್ದು ದೇವರ ವಾಕ್ಯವನ್ನು ಶುದ್ಧಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಏನೋ ಎಂಬ ವಿಷಯದಲ್ಲಿ ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದರು.


ನಾನು ತಡಮಾಡದೆ ನಿನ್ನ ಹತ್ತರ ಕಳುಹಿಸಿದೆನು. ನೀನು ಬಂದದ್ದು ಉಪಕಾರವಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.


ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ನಡಿಸು.


ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಕೊಳ್ಳುವೆನು.


ನಿನ್ನ ನೇಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡಿಸಬೇಕೆಂದು ನೀನೇ ಆಜ್ಞಾಪಿಸಿರುತ್ತೀ.


ಇಸ್ರಾಯೇಲ ಪುರುಷರೇ, ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,


ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ.


ಇವುಗಳನ್ನು ಕೈಕೊಂಡು ಅನುಸರಿಸಿರಿ. ಅನುಸರಿಸಿದರೇ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ - ಈ ದೊಡ್ಡ ಜನಾಂಗವು ಜ್ಞಾನ ವಿವೇಕವುಳ್ಳ ಜನಾಂಗ ಎಂದು ಮಾತಾಡಿಕೊಳ್ಳುವರು.


ನಿನ್ನ ನೇಮಗಳ ದಾರಿಯನ್ನು ತಿಳಿಯಪಡಿಸು; ಆಗ ನಿನ್ನ ಅದ್ಭುತಕೃತ್ಯಗಳನ್ನು ಧ್ಯಾನಿಸುವೆನು.


ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಕೊಂಡು ನಡೆಯುವದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನೆಂದು ಹೇಳಿದ್ದಾನೆ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಾಗಿ ಕೈಕೊಳ್ಳಬೇಕು. ಬೇರೆ ಯಾವ ದೇವರ ಹೆಸರನ್ನು ಸ್ಮರಿಸಲೂ ಕೂಡದು; ಉಚ್ಚರಿಸಲೂ ಕೂಡದು.


ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಶುಭವುಳ್ಳವರಾಗಿ ಬದುಕಿಕೊಳ್ಳುವಂತೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.


ಮೋಶೆಯು ಇಸ್ರಾಯೇಲ್ಯರ ಹಿರಿಯರ ಸಹಿತ ಜನರಿಗೆ - ನಾನು ಈಗ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.


ನೀವು ಆತನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರೆ ಆತನು ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು