Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:12 - ಕನ್ನಡ ಸತ್ಯವೇದವು J.V. (BSI)

12 ಪ್ರಭಾವೈಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ; ನೀನು ಸರ್ವಾಧಿಕಾರಿಯು; ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ; ಎಲ್ಲಾ ದೊಡ್ಡಸ್ತಿಕೆಗೂ ಶಕ್ತಿಗೂ ನೀನೇ ಮೂಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪ್ರಭಾವ ಐಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ. ನೀನು ಸರ್ವಾಧಿಕಾರಿಯು. ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ. ಎಲ್ಲಾ ಮಹಿಮೆಗೂ, ಶಕ್ತಿಗೂ ನೀನೇ ಮೂಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಸ್ತಿ - ಪಾಸ್ತಿ, ಐಶ್ವರ್ಯ ಬರುವುದು ನಿಮ್ಮಿಂದಲೇ. ಸರ್ವಾಧಿಕಾರ, ಬಲಪರಾಕ್ರಮ ಇರುವುದು ನಿಮ್ಮ ಕೈಯಲ್ಲೇ. ಪಟ್ಟ ಪದವಿಗೆ, ಸರ್ವಶಕ್ತಿ ಸಾಹಸಕ್ಕೆ ಮೂಲ ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಗೌರವವೂ ಐಶ್ವರ್ಯವೂ ನಿನ್ನಿಂದಲೇ ಹೊರಡುವವು. ಎಲ್ಲವನ್ನು ಆಳುವಾತನು ನೀನೇ. ನಿನ್ನ ಬಾಹುಗಳಲ್ಲಿ ಶಕ್ತಿಸಾಮರ್ಥ್ಯವು ತುಂಬಿವೆ. ಯಾರನ್ನೇ ಆಗಲಿ ಮಹಾಪುರುಷರನ್ನಾಗಿಯೂ ಪ್ರಬಲರನ್ನಾಗಿಯೂ ಮಾಡುವ ಶಕ್ತಿಯಿರುವುದು ನಿನ್ನ ಕೈಗಳಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಐಶ್ವರ್ಯವೂ, ಘನವೂ ನಿಮ್ಮ ಬಳಿಯಿಂದ ಬರುತ್ತವೆ. ನೀವು ಸಮಸ್ತವನ್ನು ಆಳಿಕೆಮಾಡುವವರು. ಶಕ್ತಿಯೂ, ಪರಾಕ್ರಮವೂ ನಿಮ್ಮ ಕೈಯಲ್ಲಿ ಇವೆ. ಎಲ್ಲರಿಗೂ ಉನ್ನತಿಯನ್ನೂ, ಬಲವನ್ನೂ ಕೊಡುವುದು ನಿಮ್ಮ ಕೈಯಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:12
40 ತಿಳಿವುಗಳ ಹೋಲಿಕೆ  

ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲ ಹೊಂದಿದವರಾಗುವ ಹಾಗೆಯೂ


ಆದದರಿಂದ ನಿಮ್ಮ ದೇವರಾದ ಯೆಹೋವನೇ ತಾನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.


ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ.


ನಾನಾಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯ ಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳಿಕೆಯು ಶಾಶ್ವತವಾಗಿರುವದು;


ಯೆಹೋವನೇ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿರುವಾತನು ನೀನಲ್ಲವೋ? ನೀನು ಜನಾಂಗಗಳ ಎಲ್ಲಾ ರಾಜ್ಯಗಳನ್ನು ಆಳುವವನಾಗಿರುತ್ತೀ. ನಿನ್ನ ಹಸ್ತದಲ್ಲಿ ಬಲಪರಾಕ್ರಮಗಳಿರುತ್ತವೆ; ನಿನ್ನೆದುರಿನಲ್ಲಿ ಯಾರೂ ನಿಲ್ಲಲಾರರು.


ಆತನ ಮಹಿಮಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷ್ಠರಾಗಿ ಆನಂದಪೂರ್ವಕವಾದ ತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಯಾವಾಗಲೂ ತೋರಿಸುವವರಾಗಿರಬೇಕೆಂತಲೂ


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ


ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ ನಿರ್ಬಲನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.


ಇದಲ್ಲದೆ ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವದಿಲ್ಲ ಅಂದನು.


ಕರ್ತನೇ, ಸರ್ವಶಕ್ತನಾದ ದೇವರೇ, ಸದಾ ಇರುವಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳಿದ್ದರಿಂದ ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ.


ಹೌದು, ಇಂದಿನಿಂದ ನಾನೇ ಪರಮಾತ್ಮನು; ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಯಾರು ಅಡ್ಡಬಂದಾರು? ಎಂಬದೇ ಯೆಹೋವನ ಮಾತು.


ಮತ್ತೂ ಆತನು ಯಾವನಿಗೆ ಆಸ್ತಿಪಾಸ್ತಿಗಳನ್ನು ದಯಪಾಲಿಸುವದಲ್ಲದೆ ಅದನ್ನು ಅನುಭವಿಸಿ ಪಾಲಿಗೆ ಬಂದದ್ದನ್ನು ಹೊಂದಿ ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಡುವನೋ, ಅವನ ಸುಖವು ದೇವರ ಅನುಗ್ರಹ.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು; ಅದು ವ್ಯಸನವನ್ನು ಸೇರಿಸದು.


ನಾನು ಬಲಿಷ್ಠನ ಶಕ್ತಿಯನ್ನು ಮರೆಹೊಗುವೆನೆಂದರೆ [ದೇವರು] - ಇಗೋ, [ಇದ್ದೇನೆ; ಅನ್ನುವನು] ನ್ಯಾಯವಿಚಾರಣೆಯು [ಆಗಲಿ ಎಂದರೆ ಆತನು] ನನಗೆ ಕಾಲನಿಯಾಮಕರು ಯಾರು [ಅನ್ನುವನು].


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ; ನನ್ನ ಸಂಕಲ್ಪವು ನಿಲ್ಲುವದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ;


ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು;


ನನ್ನಲ್ಲಿ ಧನಘನತೆಗಳೂ ಶ್ರೇಷ್ಠಸಂಪತ್ತೂ ನೀತಿಯೂ ಇರುತ್ತವೆ.


ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು.


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.


ದೇವದೂತರುಗಳಿರಾ, ಪರಮಪ್ರಭಾವವು ಯೆಹೋವನದೇ ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.


ಯೆಹೋವನು ತನ್ನ ಜನರಿಗೆ ಬಲವೂ ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು ಅಂದನು.


ಆದದರಿಂದ ನಮ್ಮ ದೇವರೇ, ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.


ಇದಲ್ಲದೆ ಪಟ್ಟಣಗಳನ್ನು ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿವಿುತವಾದದ್ದು.


ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಕೊಂಡಾಟವಾಗಲಿ! ಜ್ಞಾನತ್ರಾಣಗಳು ಆತನವುಗಳೇ.


ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.


ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು