Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:17 - ಕನ್ನಡ ಸತ್ಯವೇದವು J.V. (BSI)

17 ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದೀ ಎಂಬದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವೇಚ್ಫೆಯಿಂದಲೇ ನಿನಗೆ ಕಾಣಿಕೆಗಳನ್ನರ್ಪಿಸಿದ್ದಾರೆಂದು ನೋಡಿ ಸಂತೋಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:17
27 ತಿಳಿವುಗಳ ಹೋಲಿಕೆ  

ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು ಹೃದಯವನ್ನು ಪರೀಕ್ಷಿಸುವವನೂ ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ವಕ್ರಹೃದಯರು ಯೆಹೋವನಿಗೆ ಅಸಹ್ಯರು; ಸನ್ಮಾರ್ಗಿಗಳು ಆತನ ದಯೆಗೆ ಆಸ್ಪದರು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಯಾಕಂದರೆ ದೇವರ ವಾಕ್ಯವು ಸಜೀವವಾದದ್ದು, ಕಾರ್ಯಸಾಧಕವಾದದ್ದು, ಯಾವ ಇಬ್ಬಾಯಿಕತ್ತಿಗಿಂತಲೂ ಹದವಾದದ್ದು, ಪ್ರಾಣಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದು ಆಗಿದೆ.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹ ಉಂಟಾದದರಿಂದ ನಿನ್ನ ಪ್ರೀತಿಯ ನಿವಿುತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು, ದೇವರೂ ಸಾಕ್ಷಿ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ - ಇಗೋ ಇವನು ನಿಜವಾದ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.


ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.


ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.


ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವ ಹಾಗೆ ಮಾಡು; ಕ್ರಿಸ್ತನಲ್ಲಿ ನನ್ನ ಹೃದಯವನ್ನು ಸಂತೋಷಪಡಿಸು.


ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ.


ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು.


ಅವನು ಸಜ್ಜನನೂ ನೀತಿವಂತನೂ ಮನಃಪೂರ್ವಕವಾಗಿ ಸತ್ಯವಚನವನ್ನಾಡುವವನೂ ಆಗಿರಬೇಕು.


ಮನುಷ್ಯರ ಹೃದಯವನ್ನೂ ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ಅವರು ಪೂರ್ಣಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಯೆಹೋವನಿಗೆ ಕಾಣಿಕೆ ಕೊಟ್ಟದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ನರನ ನಡತೆಯು ಸ್ವಂತ ದೃಷ್ಟಿಗೆ ನೆಟ್ಟಗೆ; ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.


ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು; ಹೃದಯಗಳನ್ನು ಶೋಧಿಸುವವನು ಯೆಹೋವನೇ.


ಪ್ರತಿಯೊಬ್ಬನು ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನ ಮೇಲೆ ದೇವರಿಗೆ ಪ್ರೀತಿಯುಂಟು.


ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧನಾಮಕ್ಕೋಸ್ಕರ ಆಲಯಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು; ಇವೆಲ್ಲಾ ನಿನ್ನವೇ.


ನಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ ಅವರಿಗೆ ಪಾಪ ಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.


ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ ರಾತ್ರಿ ವೇಳೆ ವಿಚಾರಿಸಿದರೂ ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವದಿಲ್ಲ; ನನ್ನ ಬಾಯಲ್ಲಿಯೂ ತಪ್ಪಿಲ್ಲ.


ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದ ಪಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು