Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:25 - ಕನ್ನಡ ಸತ್ಯವೇದವು J.V. (BSI)

25 ಯೆಹೋವನು ಇಸ್ರಾಯೇಲ್ಯರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲ್ಯರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರ ಇಸ್ರಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿದರು; ಅವನಿಗಿಂತ ಮೊದಲು ಇಸ್ರಯೇಲರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೋವನು ಸೊಲೊಮೋನನನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು. ಇಸ್ರೇಲಿನಲ್ಲಿದ್ದ ಯಾವ ಅರಸನಿಗೂ ಸೊಲೊಮೋನನಿಗಿದ್ದಷ್ಟು ಗೌರವವೂ ವೈಭವವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಯೆಹೋವ ದೇವರು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ, ಇಸ್ರಾಯೇಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸನಿಗಾದರೂ ಇಲ್ಲದಂಥ ರಾಜ್ಯದ ವೈಭವವನ್ನು ಅವನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:25
13 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವದಿಲ್ಲ ಅಂದನು.


ದಾವೀದನ ಮಗನಾದ ಸೊಲೊಮೋನನು ತನ್ನ ದೇವರಾದ ಯೆಹೋವನಿಂದ ಸಹಾಯವನ್ನೂ ವಿಶೇಷವೃದ್ಧಿಯನ್ನೂ ಹೊಂದಿದವನಾಗಿ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡನು.


ಇದಲ್ಲದೆ ನೀನು ಕೇಳದಂಥದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ ಘನದಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವದಿಲ್ಲ.


ಹೀಗೆ ಯೆರೂಸಲೇವಿುನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು; ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು,


ಆಗ ಯೆಹೋವನು ಯೆಹೋಶುವನಿಗೆ - ನಾನು ಇಂದಿನಿಂದ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂಬದು ಅವರಿಗೆ ಗೊತ್ತಾಗುವದು.


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು, ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ. ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು. ಆತನು ದೇವರ ಕೃಪೆಯಿಂದ ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಲೇಬೇಕಾಗಿತ್ತು.


ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು.


ಮಾನವನು ಎಷ್ಟರವನು, ಅವನನ್ನು ನೀನು ಏಕೆ ಹೆಚ್ಚಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು?


ಆ ದಿವಸ ಯೆಹೋವನು ಯೆಹೋಶುವನನ್ನು ಇಸ್ರಾಯೇಲ್ಯರೆಲ್ಲರ ದೃಷ್ಟಿಯಲ್ಲಿ ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ ಇವನು ಜೀವದಿಂದಿದ್ದ ಕಾಲವೆಲ್ಲಾ ಭಯಭಕ್ತಿಯುಳ್ಳವರಾಗಿದ್ದರು.


ಎಲ್ಲಾ ಅಧಿಪತಿಗಳೂ ದಂಡಿನವರೂ ಅರಸನಾದ ದಾವೀದನ ಎಲ್ಲಾ ಮಕ್ಕಳೂ ಅವನಿಗೆ ಅಧೀನರಾದರು.


ಆತನು ನನ್ನ ಒಡೆಯನಾದ ಅರಸನ ಸಂಗಡ ಇದ್ದ ಪ್ರಕಾರ ಸೊಲೊಮೋನನ ಸಂಗಡಲೂ ಇದ್ದು ರಾಜ್ಯವನ್ನು ನನ್ನ ಒಡೆಯನೂ ಅರಸನೂ ಆದ ನಿನ್ನ ಕಾಲದಲ್ಲಿದ್ದದ್ದಕ್ಕಿಂತ ಅಭಿವೃದ್ಧಿಮಾಡಲಿ ಎಂದು ನುಡಿದನು.


ವಿವೇಕವನ್ನು ಬೇಡಿಕೊಂಡದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಮುಂಚೆ ಇರಲಿಲ್ಲ; ಮುಂದೆಯೂ ಇರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು