Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:2 - ಕನ್ನಡ ಸತ್ಯವೇದವು J.V. (BSI)

2 ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಪ್ರಬಲನಾದದರಿಂದಲೂ ರಾಜ್ಯಾಧಿಕಾರವು ಇವನ ಕುಲಕ್ಕೆ ಬಂದದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲನೆಂದು ಲಿಖಿತನಾಗಲಿಲ್ಲ; ಆದರೂ ಚೊಚ್ಚಲನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೆಹೂದನ ಕುಲ ಅತಿ ಬಲಶಾಲಿಯಾಗಿ ಎಲ್ಲಾ ಕುಲಗಳಿಗೆ ನಾಯಕನೊಬ್ಬನನ್ನು ಒದಗಿಸಿಕೊಟ್ಟಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲುತನವು ಯೋಸೇಫನದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:2
25 ತಿಳಿವುಗಳ ಹೋಲಿಕೆ  

ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟುಮಾತ್ರವೂ ಸಣ್ಣದಲ್ಲ. ಒಬ್ಬ ಅಧಿಪತಿ ನಿನ್ನೊಳಗಿಂದಲೇ ಹೊರಡುವನು, ಆತನು ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕವನು ಎಂಬದಾಗಿ ಪ್ರವಾದಿಯ ಮುಖಾಂತರ ಬರೆದದೆ ಎಂದು ಹೇಳಿದರು.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ನಮ್ಮ ಕರ್ತನು ಯೆಹೂದ ಕುಲದಲ್ಲಿ ಜನಿಸಿದವನೆಂಬದು ಪ್ರಸಿದ್ಧವಾಗಿದೆಯಷ್ಟೆ; ಈ ಕುಲದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಒಂದು ಮಾತನ್ನಾದರೂ ಹೇಳಲಿಲ್ಲ.


ಗಿಲ್ಯಾದ್ ಸೀಮೆಯೂ ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣವು. ನನ್ನ ರಾಜದಂಡವು ಯೆಹೂದಕುಲವೇ.


ಗಿಲ್ಯಾದ್ ಸೀಮೆಯೂ ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣವು. ನನ್ನ ರಾಜದಂಡವು ಯೆಹೂದಕುಲವೇ.


ಅಳಬೇಡ; ಅಗೋ, ಯೂದಾ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಜಯಹೊಂದಿದನು; ಆತನು ಆ ಸುರುಳಿಯನ್ನೂ ಅದರ ಏಳು ಮುದ್ರೆಗಳನ್ನೂ ಬಿಚ್ಚುವನು ಎಂದು ಹೇಳಿದನು.


ಯಾಕಂದರೆ ದೇವರು ತನ್ನ ಮಗನಿಗೆ ಅನೇಕ ಮಂದಿ ಸಹೋದರರಿದ್ದು ಅವರಲ್ಲಿ ಆತನೇ ಹಿರಿಯನಾಗಿರಬೇಕೆಂದು ಉದ್ದೇಶಿಸಿ ತಾನು ಯಾರನ್ನು ತನ್ನವರೆಂದು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವದಕ್ಕೆ ಮೊದಲೇ ನೇವಿುಸಿದನು.


ದಾವೀದನು ಇಸ್ರಾಯೇಲ್ಯರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನ್ಯಾಯತೀರಿಸುತ್ತಿದ್ದನು.


ಅವನು ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ - ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ ಎಂದು ಆಜ್ಞಾಪಿಸಲು


ಹೀಗೆ ಇಷಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನು ಅವನ ಬಳಿಗೆ ಬರಮಾಡಿದರೂ ಅವನು - ಯೆಹೋವನು ಇವರನ್ನು ಆರಿಸಿಕೊಳ್ಳಲಿಲ್ಲ ಎಂದು ನುಡಿದನು.


ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.


ಆತನು ಅವರಿಗೆ - ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ ಅಂದನು.


ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ - ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಗೊತ್ತಿರುವದಷ್ಟೆ.


ಮೊದಲನೆಯ ದಿನದಲ್ಲಿ ಕಾಣಿಕೆ ತಂದವನು ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗನಾದ ನಹಶೋನನು.


ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದವರ ನಾಯಕನು ಅಮ್ಮೀನಾದಾಬನ ಮಗನಾದ ನಹಶೋನನು;


ನಿನ್ನ ತಂದೆಯ ಆಶೀರ್ವಾದಗಳು ಆದಿಯಿಂದಿದ್ದ ಪರ್ವತಗಳಿಂದುಟಾಗುವ ಮೇಲುಗಳಿಗಿಂತಲೂ ಸದಾಕಾಲವಾಗಿರುವ ಬೆಟ್ಟಗಳಿಂದುಂಟಾಗುವ ಉತ್ತಮ ವಸ್ತುಗಳಿಗಿಂತಲೂ ವಿಶೇಷವಾಗಿವೆ. ಇವೆಲ್ಲಾ ಯೋಸೇಫನ ಪಾಲಿಗೆ ಬರಲಿ; ಅಣ್ಣತಮ್ಮಂದಿರಲ್ಲಿ ಪ್ರಭುವಾಗಿರುವವನ ಶಿರಸ್ಸಿನ ಮೇಲುಂಟಾಗಲಿ.


ಅವರು ಯಾರಾರಂದರೆ - ಯಾಕೋಬನ ಚೊಚ್ಚಲಮಗನಾದ ರೂಬೇನ್; ಆಮೇಲೆ ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್; ಇವರು ಲೇಯಳಲ್ಲಿ ಹುಟ್ಟಿದವರು.


ಯಾಕೋಬನು ಅವನಿಗೆ - ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿಬಿಡು ಅನ್ನಲು ಏಸಾವನು -


ನಾನು ಐಗುಪ್ತದೇಶಕ್ಕೆ ನಿನ್ನ ಬಳಿಗೆ ಬರುವದಕ್ಕಿಂತ ಮುಂಚೆ ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೇ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.


ಇಸ್ರಾಯೇಲ್ ದೇವರಾದ ಯೆಹೋವನು ನನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಆರಿಸಿಕೊಂಡನು. ಆತನು ಯೆಹೂದಕುಲವು ರಾಜಕುಲವಾಗಬೇಕೆಂದು ನೇವಿುಸಿ ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರೆಲ್ಲರ ಅರಸನನ್ನಾಗಿ ಮಾಡಿದನು.


ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲವನೆಂದು ಒಪ್ಪಿ ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ,


ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು; ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು [ಬಲವುಳ್ಳವು]; ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೋಟ್ಯಾಂತರ ಜನರೂ ಮನಸ್ಸೆಕುಲದ ಲಕ್ಷಾಂತರ ಮಂದಿಯೂ ಇಂಥವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು