Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:20 - ಕನ್ನಡ ಸತ್ಯವೇದವು J.V. (BSI)

20 ಅವರು ದೇವರ ಮೇಲೆ ಭರವಸವಿಟ್ಟದರಿಂದ ಆತನು ತನಗೆ ಮೊರೆಯಿಟ್ಟ ಅವರಿಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇವರು ಅವರಿಗೆ ವಿರೋಧವಾಗಿ ಸಹಾಯ ಹೊಂದಿದ್ದರಿಂದ, ಹಗ್ರೀಯರೂ, ಅವರ ಸಂಗಡ ಕೂಡಿದ್ದವರೆಲ್ಲರೂ ಇವರ ಕೈವಶವಾದರು. ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು, ಅವರಲ್ಲಿ ಭರವಸೆ ಇಟ್ಟಿದ್ದರಿಂದ, ದೇವರು ಅವರ ಮನವಿಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:20
35 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಯಾಕಂದರೆ ನಿನ್ನ ಮರೆಹೊಗುವವರನ್ನು ನೀನು ಕೈಬಿಡುವವನಲ್ಲ.


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲ್ಯರ ಅರಸನೆಂದು ನೆನಸಿ ಅವನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ದೇವರಾದ ಯೆಹೋವನು ಅವನಿಗೆ ನೆರವಾಗಿ ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದನು.


ಅವರ ಹಿಂಡುಗಳನ್ನು ಅಂದರೆ ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಇವುಗಳನ್ನೂ ಲಕ್ಷ ಜನವನ್ನೂ ಕೊಳ್ಳೆಹಿಡಿದು ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.


ಇಸ್ರಾಯೇಲ್ ದೇವರಾದ ಯೆಹೋವನು ಅವರ ಪಕ್ಷದಲ್ಲಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿಯೇ ವಶಮಾಡಿಕೊಂಡನು.


ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿವಸವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.


ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮರೆಹೊಕ್ಕವರನ್ನು ಬಲ್ಲನು.


ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲ್ಯರ ಅರಸನೆಂದು ನೆನಸಿ ಅವನಿಗೆ ವಿರೋಧವಾಗಿ ಯುದ್ಧಮಾಡ ಬಂದರು.


ಸೌಲನು ತಿರಿಗಿ ತನ್ನ ಆಳುಗಳಿಗೆ - ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ತನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದು ಹಾಕುತ್ತೇನೆ ಎಂದು ಆಜ್ಞಾಪಿಸಿದನು.


ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿರುವಾಗ ಇಸ್ರಾಯೇಲ್ಯರು ಬಲವಾಗುವರು; ಇಳಿಸುವಾಗ ಅಮಾಲೇಕ್ಯರು ಬಲವಾಗುವರು.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು.


ಅನಂತರ ಸಮುವೇಲನು ವಿುಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ - ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದನೆಂದು ಹೇಳಿ ಅದಕ್ಕೆ ಎಬೆನೆಜೆರೆಂದು ಹೆಸರಿಟ್ಟನು.


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ಆಕೆ ಬಂಜೆಯಾಗಿರಲಾಗಿ ಅವನು ಆಕೆಗೋಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.


ದೇವರಿಂದ ನಿಯವಿುತವಾದ ಈ ಯುದ್ಧದಲ್ಲಿ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ


ಆತನು ಲಾಲಿಸಿ ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರಿಗಿ ಯೆರೂಸಲೇವಿುಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬದು ಮನಸ್ಸೆಗೆ ಮಂದಟ್ಟಾಯಿತು.


ನಾವು ಈ ಕಾರಣದಿಂದ ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.


ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿಬಿಡುವನು; ಅವರು ಆತನ ಆಶ್ರಿತರಾದ್ದರಿಂದ ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಅದನ್ನು ಕೇಳಿ ರಾಜನು ಬಹು ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ಗಾದನ ಸಂಗತಿ - ಸುಲಿಗೆಮಾಡುವವರು ದಂಡೆತ್ತಿ ಅವನ ಮೇಲೆ ಬೀಳಲು ಇವನು ಅವರನ್ನು ಹಿಮ್ಮೆಟ್ಟಿಕೊಂಡು ಹೋಗುವನು.


ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವದಕ್ಕೆ ಶಕ್ತನಾದನು.


ಹೀಗೆ ಇಸ್ರಾಯೇಲ್ಯರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನಲ್ಲಿ ಭರವಸವಿಟ್ಟದರಿಂದ ಬಲಗೊಂಡರು.


ಫಿಲಿಷ್ಟಿಯರೊಡನೆಯೂ ಗೂರ್ ಬಾಳಿನಲ್ಲಿರುವ ಅರಬಿಯರೊಡನೆಯೂ ಮೆಗೂನ್ಯರೊಡನೆಯೂ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯವು ದೊರೆಯಿತು.


ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.


ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.


ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳಕೊಂಡು ಹೋಗುವಿ; ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು