Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:49 - ಕನ್ನಡ ಸತ್ಯವೇದವು J.V. (BSI)

49 ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗನುಸಾರವಾಗಿ ಆರೋನನೂ ಅವನ ಮಕ್ಕಳೂ ಇಸ್ರಾಯೇಲ್ಯರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮಮಾಡುತ್ತಾ ಧೂಪಹಾಕುತ್ತಾ ಮಹಾಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ ದೋಷಪರಿಹಾರ ಮಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗೆ ಅನುಸಾರವಾಗಿ ಆರೋನನೂ, ಅವನ ಮಕ್ಕಳೂ ಇಸ್ರಾಯೇಲರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮ ಮಾಡುತ್ತಾ, ಧೂಪ ಹಾಕುತ್ತಾ, ದೇವಾಲಯದ ಅತಿಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ, ದೋಷಪರಿಹಾರ ಮಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಆರೋನನೂ ಅವನ ವಂಶಜರೂ ಸುಗಂಧ ಕಾಣಿಕೆಗಳನ್ನು ಅರ್ಪಿಸುತ್ತಿದ್ದರು. ಬಲಿಪೀಠದ ಮೇಲೆ ಸಮರ್ಪಿಸುವ ಬಲಿಗಳನ್ನು ಅರ್ಪಣೆಮಾಡುತ್ತಿದ್ದರು. ಅತೀ ಪರಿಶುದ್ಧ ಸ್ಥಳದ ಎಲ್ಲ ಆರಾಧನೆಗೂ ಇಸ್ರಯೇಲರ ಕ್ಷಮಾಪಣೆಗಾಗಿ ಸರ್ವೇಶ್ವರ ನೇಮಿಸಿದ ಬಲಿಯರ್ಪಣೆಗಳಿಗೂ ಧೂಪಾರತಿಗೂ ಅವರೇ ಜವಾಬ್ದಾರರು ಆಗಿದ್ದರು. ದೇವರ ಸೇವಕ ಮೋಶೆ ಕೊಟ್ಟ ನಿಯಮಗಳಿಗೆ ಅನುಸಾರವಾಗಿ ಇದೆಲ್ಲವನ್ನೂ ಅವರು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಆದರೆ ಸರ್ವಾಂಗಹೋಮ ಅರ್ಪಿಸುವ ಯಜ್ಞವೇದಿಕೆಯ ಮೇಲೆ ಮತ್ತು ಧೂಪಾರ್ಪಣೆಯ ಯಜ್ಞವೇದಿಕೆಯ ಮೇಲೆ ಧೂಪವರ್ಪಿಸಲು ಆರೋನನ ಸಂತತಿಯವರನ್ನು ಮಾತ್ರ ಆರಿಸಿಕೊಳ್ಳಲಾಗಿತ್ತು. ದೇವರ ನಿವಾಸದ ಮಹಾಪವಿತ್ರ ಸ್ಥಳದಲ್ಲಿ ಆರೋನನ ಸಂತತಿಯವರೇ ಎಲ್ಲಾ ಕೆಲಸಕಾರ್ಯಗಳನ್ನು ಮಾಡುತ್ತಿದ್ದರು. ಅಲ್ಲದೆ ಇಸ್ರೇಲ್ ಜನರನ್ನು ಶುದ್ಧೀಕರಿಸಲು ಶುದ್ಧೀಕರಣ ಆಚಾರವನ್ನು ಅವರೇ ಮಾಡುತ್ತಿದ್ದರು. ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅವರು ಅನುಸರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಆದರೆ ಆರೋನನೂ, ಅವನ ಪುತ್ರರೂ ದಹನಬಲಿಯ ಪೀಠದ ಮೇಲೆಯೂ, ಧೂಪವನ್ನು ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಳದ ಸಮಸ್ತ ಕಾರ್ಯಕ್ಕೂ, ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ನೇಮಕವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:49
18 ತಿಳಿವುಗಳ ಹೋಲಿಕೆ  

ಅವನು [ಅಭಿಷಿಕ್ತ ಯಾಜಕನ] ದೋಷಪರಿಹಾರಕಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವದು.


ದೇವರು ಒಂದು ವೇಳೆ ಆ ಮನುಷ್ಯನಿಗೆ ಮೆಚ್ಚಿ - ಈಡು ಸಿಕ್ಕಿತು, ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು ಎಂದು ಅಪ್ಪಣೆಕೊಟ್ಟರೆ


ಅವರನ್ನು ಯಾಜಕೋದ್ಯೋಗಕ್ಕೆ ಸೇರಿಸುವದಕ್ಕೂ ದೇವರ ಸೇವೆಗೆ ಪ್ರತಿಷ್ಠಿಸುವದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರೇ ಭೋಜನಮಾಡಬೇಕೇ ಹೊರತು ಇತರರು ತಿನ್ನಕೂಡದು; ಅವು ಮೀಸಲು.


ಯೆಹೋವನ ಸೇವಕನಾದ ಮೋಶೆಯು ಸತ್ತ ಮೇಲೆ ಯೆಹೋವನು ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ - ನನ್ನ


ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ದೇಹಬಿಟ್ಟನು.


ಮೋಶೆ ಕೋರಹನಿಗೆ - ನಾಳೆ ನೀನೂ ನಿನ್ನ ಸಮೂಹದವರೆಲ್ಲರೂ ಆರೋನನೂ ಯೆಹೋವನ ಸನ್ನಿಧಿಗೆ ಬರಬೇಕು;


ಯಾಜಕನು ಇಸ್ರಾಯೇಲ್ಯರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದನ್ನು ಪರಿಹರಿಸುವದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನೂ ದೋಷಪರಿಹಾರಕಯಜ್ಞವನ್ನೂ ಮಾಡಿಸಿದ್ದರಿಂದ


ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಲಿಗೆ ಎದುರಾಗಿರುವ ಯಜ್ಞವೇದಿಗೆ ಸುತ್ತಲೂ ಎರಚಬೇಕು.


ಅವರ ಸಹೋದರರಾದ ಇತರ ಲೇವಿಯರು ದೇವಾಲಯವಾಗಿರುವ ಮಂದಿರದ ಸೇವೆಗಾಗಿ ನೇವಿುಸಲ್ಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು