Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:12 - ಕನ್ನಡ ಸತ್ಯವೇದವು J.V. (BSI)

12 ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆಂಚೆಸಾಟ್ನಿ ನ್ಹಯ್, ತುಮ್ಚ್ಯಾಸಾಟ್ನಿ ತೆಂಕಾ ಪ್ರವಾದ್ ಕರುನ್ ಸಾಂಗ್ತಲೆ ಕಾಮ್ ದಿಲ್ಲೆ ಹಾಯ್ ಮನುನ್ ದೆವಾನ್ ಪ್ರವಾದ್ಯಾಕ್ನಿ ಕಳ್ವುನ್ ದಿಲ್ಲ್ಯಾನ್. ತೆನಿ ಸಾಂಗಟಲ್ಲ್ಯಾ ತ್ಯಾಚ್ ಸಂಗ್ತಿಯಾ ಅತ್ತಾ ಸರ್ಗಾ ವೈನಾ ಯೆಲ್ಲ್ಯಾ ಪವಿತ್ರ್ ಆತ್ಮ್ಯಾಚ್ಯಾ ತಾಕ್ತಿನ್ ತುಮ್ಕಾ ಬರಿ ಖಬರ್ ಪರ್ಗಟ್ ಕರಲ್ಲೆ ತುಮ್ಕಾ ಕಳ್ವುಲ್ಯಾನಿ, ತೆ ಸಗ್ಳ್ಯೆ ದಿಸುನ್ ಯೆತಲೆ ಬಗುಕ್ ದೆವಾಚಿ ದುತಾ ಸಯ್ತ್ ರಾಕುನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:12
56 ತಿಳಿವುಗಳ ಹೋಲಿಕೆ  

ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು, ಬಂದಾಗ ಆತನು ನನ್ನನ್ನು ಕುರಿತು ಸಾಕ್ಷಿಹೇಳುವನು.


ದೇವರು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ಅನಾದಿಕಾಲದಿಂದ ಮಾಡಿದ ಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಕ್ರೈಸ್ತ ಸಭೆಯ ಮೂಲಕ ಗೊತ್ತಾಗಬೇಕೆಂಬದನ್ನು ಉದ್ದೇಶಿಸಿದ್ದನು.


ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.


ಅವರಿಗೆ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಆ ಕಾಲದಲ್ಲಿ ಕೇಳಿದವರು ನಂಬದೆಹೋದ ಕಾರಣ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.


ಆಮೇಲೆ ಅವರಿಗೆ - ನೀವು ಲೋಕದ ಎಲ್ಲಾ ಕಡೆಗೆ ಹೋಗಿ ಜಗತ್ತಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ಕರ್ತನ ಮಾತೋ ಸದಾಕಾಲವೂ ಇರುವದು ಎಂದು ಹೇಳಿದೆಯಷ್ಟೆ. ಆ ಮಾತು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.


ಇದಲ್ಲದೆ ಸಿಂಹಾಸನವು ಜೀವಿಗಳು ಹಿರಿಯರು ಇವರ ಸುತ್ತಲು ಬಹು ಮಂದಿ ದೇವದೂತರನ್ನು ಕಂಡೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.


ಶುದ್ಧಮನಸ್ಸು ಜ್ಞಾನ ದೀರ್ಘಶಾಂತಿ ದಯೆ ಪವಿತ್ರಾತ್ಮ ಕಪಟವಿಲ್ಲದ ಪ್ರೀತಿ


ಆತನು ನಮ್ಮ ಮೇಲೆ ಮುದ್ರೆ ಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಪರ್ಯಂತರಕ್ಕೂ ಸುತ್ತಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ನೆರವೇರಿಸಿದ್ದೇನೆ.


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ


ನೀನು ಹೋಗಿ ಅಂತ್ಯದವರೆಗೆ ಇರು; ನೀನು ದೀರ್ಘ ನಿದ್ರೆಯನ್ನು ಹೊಂದಿ ಯುಗಸಮಾಪ್ತಿಯಲ್ಲಿ ಎದ್ದು ನಿನಗಾಗುವ ಸ್ವಾಸ್ತ್ಯದೊಳಗೆ ನಿಲ್ಲುವಿ ಎಂದು ಹೇಳಿದನು.


ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.


ಮತ್ತು ದೇವರು ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಾನಾ ವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ಪವಿತ್ರಾತ್ಮವರಗಳನ್ನು ತನ್ನ ಚಿತ್ತಾನುಸಾರವಾಗಿ ಅವರಿಗೆ ಅನುಗ್ರಹಿಸಿ ಅವರ ಮಾತಿಗೆ ಸಾಕ್ಷಿಕೊಡುತ್ತಿದ್ದನು.


ತನ್ನ ಮಗನನ್ನು ನಾನು ಅನ್ಯಜನರಲ್ಲಿ ಪ್ರಸಿದ್ಧಿಪಡಿಸುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಫೈಸಿದಾಗಲೇ ನಾನು ಮನುಷ್ಯರ ಆಲೋಚನೆಯನ್ನು ವಿಚಾರಿಸದೆ


ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಿಸಿದನು.


ಇದಕ್ಕೆ ಸರಿಯಾಗಿ ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಅಂದವಾಗಿವೆ ಎಂದು ಬರೆದದೆ. ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ.


ಹೇಗಂದರೆ ದೇವರಿಂದ ದೊರಕುವ ನೀತಿಯು ಅದರಲ್ಲಿ ತೋರಿಬರುತ್ತದೆ. ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುವಂಥದಾಗಿದೆ.


ಅದರಂತೆ ಒಬ್ಬ ಪಾಪಿಯು ದೇವರ ಕಡೆಗೆ ತಿರುಗಿಕೊಳ್ಳುವ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವದೆಂದು ನಿಮಗೆ ಹೇಳುತ್ತೇನೆ ಅಂದನು.


ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಕರ್ತನಾದ ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ರಹಸ್ಯವನ್ನು ತಿಳಿಸದೆ ಏನೂ ಮಾಡನು.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಸಹೋದರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿರುವದಷ್ಟೆ.


ಆಗ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರುತ್ತಾ ರೋಗಿಗಳಿಗೆ ವಾಸಿಮಾಡುತ್ತಾ ಗ್ರಾಮಗಳಲ್ಲೆಲ್ಲಾ ಸಂಚರಿಸಿದರು.


ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವದಕ್ಕಿಂತ ಮುಂಚೆ ನೀನು ಸಾಯುವದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.


ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಪಾರಸಿಯ ರಾಜನಾದ ಕೋರೆಷನ ಆಳಿಕೆಯ ಮೂರನೆಯ ವರುಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಬಹು ಕಷ್ಟದ ಗಡುವಿನ ಆ ಸಂಗತಿಯು ಸತ್ಯ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮಂದಟ್ಟುಮಾಡಿಕೊಂಡನು.


ಆಗ ಒಬ್ಬ ದೇವದೂತನು ಮಾತಾಡುವದನ್ನು ಕೇಳಿದೆನು; ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ - ನಿತ್ಯಹೋಮವನ್ನು ನಿಲ್ಲಿಸುವದು, ಭಯಂಕರವಾದ ದೇವದ್ರೋಹಮಾಡುವದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವವು ಎಂದು ಪ್ರಶ್ನೆ ಮಾಡಲು


ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.


ಆತನು ಅಗಾಧವಿಷಯಗಳನ್ನೂ ಗೂಡಾರ್ಥಗಳನ್ನೂ ಬೈಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವದೂ ಆತನಿಗೆ ಗೋಚರ; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.


ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು -


ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವದು; ಆಗ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.


ನನ್ನ ಗದರಿಕೆಯನ್ನು ಕೇಳಿ ತಿರುಗಿಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.


ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.


ಇವರೆಲ್ಲರು ವಾಗ್ದಾನದ ಫಲಗಳನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ಉಲ್ಲಾಸದೊಡನೆ ವಂದಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂವಿುಯ ಮೇಲೆ ಪರದೇಶದವರೂ ಪ್ರವಾಸಿಗಳೂ ಆಗಿದ್ದೇವೆಂದು ಒಪ್ಪಿಕೊಂಡರು.


ನಾವು ಕೇಳಿದ ಸಂಗತಿಯನ್ನು [ನಮ್ಮಲ್ಲಿ] ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?


ಹೀಗಿರುವದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವದಕ್ಕೆ ನಾನಂತೂ ಸಿದ್ಧವಾಗಿದ್ದೇನೆ. ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ.


ಅವನಿಗೆ ಆ ದರ್ಶನವಾದ ಮೇಲೆ ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು ಕೂಡಲೆ ಮಕೆದೋನ್ಯಕ್ಕೆ ಹೊರಟು ಹೋಗುವ ಪ್ರಯತ್ನಮಾಡಿದೆವು.


ಪೇತ್ರನು ಈ ಮಾತುಗಳನ್ನು ಇನ್ನೂ ಹೇಳುತ್ತಿರುವಾಗ ಅವನ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮವರವು ಇಳಿಯಿತು.


ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇವಿುಗೆ ಹಿಂತಿರಿಗಿ ಹೊರಟು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.


ಹೀಗೆ ಪ್ರಾರ್ಥನೆ ಮಾಡಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು, ಅವರೆಲ್ಲರು ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳುವವರಾದರು.


ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ - ಜನರ ಅಧಿಕಾರಿಗಳೇ, ಹಿರಿಯರೇ,


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು, ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಿಗಳಾಗಿದ್ದಾಗ ಹೊಂದಿದರು; ಅವರು ಆತ್ಮ ಸಂಬಂಧವಾಗಿ ದೇವರ ಜೀವದಲ್ಲಿ ಪಾಲುಗಾರರಾಗುವಂತೆ ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು