Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:18 - ಕನ್ನಡ ಸತ್ಯವೇದವು J.V. (BSI)

18 ನಿಮ್ಮ ಹಿರಿಯರು ಕಲಿಸಿಕೊಟ್ಟ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ಬೆಳ್ಳಿಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮೊದಲು ನೀವು ನಿರರ್ಥಕವಾದ ರೀತಿಯಲ್ಲಿ ಜೀವಿಸುತ್ತಿದ್ದಿರೆಂಬುದು ನಿಮಗೇ ತಿಳಿದಿದೆ. ನಿಮಗಿಂತಲೂ ಮೊದಲು ಜೀವಿಸಿದ್ದವರಿಂದ ಅಂತಹ ಜೀವಿತವನ್ನು ಕಲಿತುಕೊಂಡಿರಿ. ಆದರೆ ಅದರಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿಬಂಗಾರಗಳಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತುಮ್ಚ್ಯಾ ವಾಡ ವಡ್ಲಾನಿ ಶಿಕ್ವುನ್ ದಿಲ್ಲ್ಯಾ ಫಾಯ್ದ್ಯಾಕ್ ಪಡಿನಸಲ್ಯಾ ಚಲ್ನುಕಿತ್ನಾ ತುಮ್ಕಾ ಸುಟ್ಕಾ ಗಾವಲ್ಲೆ ಹಾಳ್ ಹೊವ್ನ್ ಜಾತಲ್ಯಾ ಸೊನ್ಯಾ-ಚಾಂದಿನಿ ನ್ಹಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:18
28 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಸ್ವಂತ ಸೊತ್ತಲ್ಲ; ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು; ಆದಕಾರಣ ನಿಮ್ಮ ದೇಹದಲ್ಲಿ ದೇವರ ಪ್ರಭಾವವನ್ನು ಪ್ರಕಾಶಪಡಿಸಿರಿ.


ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ದುಷ್ಟಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕೆ ಅನುಸಾರವಾಗಿ ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿದನು.


ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರದೆಂದು ಕರ್ತನಲ್ಲಿರುವವನಾಗಿ ನಿಮಗೆ ಖಂಡಿತವಾಗಿ ಹೇಳುತ್ತೇನೆ.


ಯಾಕಂದರೆ ದೇವರ ವಿಷಯವಾಗಿ ಅವರಿಗೆ ತಿಳುವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಘನಪಡಿಸಲಿಲ್ಲ; ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ವಿಚಾರ ಮಾಡಿಮಾಡಿ ಫಲ ಕಾಣಲಿಲ್ಲ; ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಯಿತು.


ನೀವು ಬಂಡುತನ ದುರಾಶೆ ಕುಡಿಕತನ ದುಂದೌತಣ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಈ ಮೊದಲಾದವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವದರಲ್ಲಿಯೂ ಕಳೆದುಹೋದ ಕಾಲವೇ ಸಾಕು.


ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.


ಯೆಹೋವನು ಇಂತೆನ್ನುತ್ತಾನೆ - ಯೆಹೂದವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿ ಆತನ ವಿಧಿಗಳನ್ನು ಕೈಕೊಳ್ಳದೆ ಅವರ ಪಿತೃಗಳು ಹಿಂಬಾಲಿಸಿದ ಸುಳ್ಳುದೇವತೆಗಳ ಮೂಲಕ ಸನ್ಮಾರ್ಗವನ್ನು ತಪ್ಪಿದರಷ್ಟೆ;


ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಸೊಕ್ಕಿರಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.


ನರರು ನಿಜವಲ್ಲದ ಮಾಯಾರೂಪದಿಂದ ಸಂಚರಿಸುವವರು; ಅವರು ಸುಮ್ಮ ಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವದೋ ತಾವೇ ತಿಳಿಯರು.


ಆಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ - ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಕೊಳ್ಳದೆ ಅವರ ಬೊಂಬೆಗಳಿಂದ ನಿಮ್ಮನ್ನು ಹೊಲಸುಮಾಡಿಕೊಳ್ಳದೆ ಇರಬೇಕು;


ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು, ಸುರಿಯುವೆವು ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇವಿುನ ಬೀದಿಗಳಲ್ಲಿ ನಾವೂ ನಮ್ಮ ಪಿತೃಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.


(ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು.


ಸ್ವಂತ ಹೃದಯದ ಹಟದಂತೆ ನಡೆದು ತಮ್ಮ ಪಿತೃಗಳು ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದ್ದರಿಂದ


ಆ ಕಾಲದಲ್ಲಿ ಈ ಜನರಿಗೂ ಯೆರೂಸಲೇವಿುಗೂ ಈ ಮಾತಾಗುವದು - ಬಿಸಿಗಾಳಿಯು ಅರಣ್ಯದ ಬೋಳು ಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವದಕ್ಕೂ ಶೋಧಿಸುವದಕ್ಕೂ ಆಗದು.


ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳುಕೊಳ್ಳುತ್ತಾನೆಂತಲೂ ಬರೆದದೆಯಲ್ಲಾ.


ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ಯೆಹೋವನ ಈ ಮಾತನ್ನು ಕೇಳಿರಿ, ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆ ಮಾಡುವೆನು.


ಹೋತಗಳ ಮತ್ತು ಹೋರಿಕರಗಳ ರಕ್ತವನ್ನು ತೆಗೆದುಕೊಳ್ಳದೆ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ದೇವರ ಸನ್ನಿಧಾನಕ್ಕೆ ಪ್ರವೇಶಿಸಿದನು.


ಪಾಪಗಳನ್ನು ಹೋಗಲಾಡಿಸುವದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.


ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;


ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಡಬಹುದು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು