Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:19 - ಕನ್ನಡ ಸತ್ಯವೇದವು J.V. (BSI)

19 ಪೂರ್ಣಾಂಗವಾದ ನಿಷ್ಕಳಂಕ ಯಜ್ಞದ ಕುರಿಯ ರಕ್ತದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ಬಲ್ಲಿರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಎಕ್ ಲೈ ಕಿಮ್ತಿಂಚ್ಯಾ ಕಾಯ್ಬಿ ಕಳಂಕ್ ನಸಲ್ಲ್ಯಾ ಬಲಿಚ್ಯಾ ಬೊಕ್ಡಾಚ್ಯಾ ವೈನಾ ಮಟ್ಲ್ಯಾರ್, ಕ್ರಿಸ್ತಾಚ್ಯಾ ಬಲಿ ವೈನಾ ಮನ್ತಲೆ ಗೊತ್ತ್ ಹಾಯ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:19
31 ತಿಳಿವುಗಳ ಹೋಲಿಕೆ  

ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಆ ಮರಿಯು ಪೂರ್ಣಾಂಗವಾದ ಒಂದು ವರುಷದ ಗಂಡಾಗಿರಬೇಕು; ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.


ಅಗೋ ಯಜ್ಞಕ್ಕೆ ದೇವರು ನೇವಿುಸಿದ ಕುರಿ ಅಂದನು.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ಆ ಕುಮಾರನಲ್ಲಿ ನಮ್ಮ ಪಾಪಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನಾನು ನೋಡಲಾಗಿ ಯಜ್ಞದ ಕುರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ ಮಂದಿ ಇದ್ದರು; ಅವರವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿ ಕೊಯ್ಯಲ್ಪಟ್ಟದ್ದಾಗಿ ನಿಂತಿರುವದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಏನಂದರೆ ಭೂವಿುಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಒಬ್ಬನು ಆಡನ್ನಾಗಲಿ ಕುರಿಯನ್ನಾಗಲಿ ಸರ್ವಾಂಗಹೋಮ ಮಾಡಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.


ಕುಂದುಕೊರತೆ ಇರುವಂಥದನ್ನು ತರಬಾರದು; ಅಂಥದು ಸಮರ್ಪಕವಾಗುವದಿಲ್ಲ.


ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;


ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ಈತನು ತನ್ನ ರಕ್ತವನ್ನು ಸುರಿಸಿ ನಂಬಿಕೆಯಿದ್ದವರಿಗಾಗಿ ಕೃಪಾಧಾರವಾಗಬೇಕೆಂದು ದೇವರು ಈತನನ್ನು ಮುಂದಿಟ್ಟನು.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಇವರ ಬಾಯಲ್ಲಿ ಸುಳ್ಳು ಸಿಕ್ಕಲಿಲ್ಲ; ಇವರು ನಿರ್ದೋಷಿಗಳಾಗಿದ್ದಾರೆ.


ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು