Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:25 - ಕನ್ನಡ ಸತ್ಯವೇದವು J.V. (BSI)

25 ಕರ್ತನ ಮಾತೋ ಸದಾಕಾಲವೂ ಇರುವದು ಎಂದು ಹೇಳಿದೆಯಷ್ಟೆ. ಆ ಮಾತು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಈ ವಾಕ್ಯವೇ ನಿಮಗೆ ಸಾರಲಾದ ಶುಭಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ದೇವರ ವಾಕ್ಯವು ಎಂದೆಂದಿಗೂ ಜೀವಂತವಾಗಿರುತ್ತದೆ.” ನಿಮಗೆ ಈ ವಾಕ್ಯವನ್ನೇ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಕರ್ತದೇವರ ವಾಕ್ಯವಾದರೋ ಸದಾಕಾಲ ಇರುವುದು.” ಇದೇ ನಿಮಗೆ ಸಾರಲಾದ ಸುವಾರ್ತಾವಾಕ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ದೆವಾಚಿ ಗೊಸ್ಟ್ ಸದಾಸರ್ವಾತಾಕ್ ತುಮ್ಚ್ಯಾ ವಾಂಗ್ಡಾ ರಾತಾ ಮನುನ್ ಸಾಂಗಲ್ಲೆ ಹಾಯ್, ತಿ ಗೊಸ್ಟ್ ಖಲಿ ಮಟ್ಲ್ಯಾರ್, ತುಮ್ಕಾ ಪರ್ಗಟ್ ಕರುನ್ ಹೊಲ್ಲಿ ಬರಿ ಖಬರುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:25
23 ತಿಳಿವುಗಳ ಹೋಲಿಕೆ  

ಹುಲ್ಲು ಒಣಗಿಹೋಗುವದು, ಹೂವು ಬಾಡಿಹೋಗುವದು, ನಮ್ಮ ದೇವರ ಮಾತೋ ಸದಾಕಾಲವೂ ಇರುವದು ಎಂದು ಉತ್ತರವಾಯಿತು.


ನಿಮಗೆ ಸತ್ಯವಾಗಿ ಹೇಳುತ್ತೇನೆ - ಆಕಾಶವೂ ಭೂವಿುಯೂ ಅಳಿದು ಹೋಗುವ ತನಕ ಧರ್ಮಶಾಸ್ತ್ರವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದುಹೋಗಲಾರದು.


ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟದೆ.


ನಾವು ನಿಮಗೆ ಪ್ರಸಿದ್ಧಿಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನಸ್ಸಿಟ್ಟು ನೋಡಿ ಕೈಯಿಂದ ಮುಟ್ಟಿದ್ದೇವೆ.


ಇದಲ್ಲದೆ ಪ್ರವಾದನವಾಕ್ಯವು ನಮಗೆ ಮತ್ತೂ ದೃಢವಾಗಿದೆ. ನಿಮ್ಮ ಹೃದಯದೊಳಗೆ ಬೆಳ್ಳಿಯು ಮೂಡಿ ಅರುಣೋದಯವಾಗುವ ಪರ್ಯಂತರ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಡುವದೇ ಒಳ್ಳೇದು.


ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ; ನಿನ್ನ ನಾಮವು ತಲತಲಾಂತರಕ್ಕೂ ಸ್ಮರಿಸಲ್ಪಡುವದು.


ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವದಕ್ಕಿಂತಲೂ ಆಕಾಶವೂ ಭೂವಿುಯೂ ಅಳಿದುಹೋಗುವದು ಸುಲಭ.


ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಸಮಾಧಾನವನ್ನು ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರ ಬಳಿಯಲ್ಲಿತ್ತು; ಆ ವಾಕ್ಯವು ದೇವರಾಗಿತ್ತು.


ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತೀ; ಅವು ಮಾರ್ಪಡುವವು.


ನಾವು ಕಂಡು ಕೇಳಿದ್ದು ನಿಮಗೂ ಗೊತ್ತಾಗಿ ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದು.


ಎಲ್ಲಾ ತರದ ನಿಂದೆಯನ್ನೂ ವಿಸರ್ಜಿಸಿ ಹಸುಮಕ್ಕಳಂತೆ ಪಾರಮಾರ್ಥಿಕವಾದ ಶುದ್ಧ ಹಾಲನ್ನು ಬಯಸಿರಿ; ಅದರಿಂದ ಬೆಳೆಯುತ್ತಾ ರಕ್ಷಣೆಯನ್ನು ಹೊಂದುವಿರಿ; ಕರ್ತನು ದಯಾಳುವೆಂದು ನೀವು ಅನುಭವದಿಂದ ತಿಳಿದುಕೊಂಡಿದ್ದೀರಲ್ಲವೋ?


ನೀವು ಪುನರ್ಜನ್ಮ ಹೊಂದಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ, ನಾಶವಾಗದ ಬೀಜದಿಂದಲೇ ಉಂಟಾದದ್ದು. ಅದು ದೇವರ ಸದಾಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ನಾನು ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.


ಆಹಾ, ವಾಣಿಯು ಮತ್ತೆ ಕೇಳಿಸಿ - ಕೂಗು ಎನ್ನುತ್ತದೆ. ಅದಕ್ಕೆ ನಾನು - ಏನು ಕೂಗಲಿ ಎಂದು ಕೇಳಲು ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.


ಪವಿತ್ರಾತ್ಮವರದಲ್ಲಿ ಪಾಲುಗಾರರಾಗಿ ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಮಹತ್ವವನ್ನೂ ಅನುಭವಿಸಿದವರು ಭ್ರಷ್ಟರಾದರೆ


ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಿಹೋಗುವದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ ಕುಲ ಪ್ರಜೆಗಳವರಿಗೂ ಸಕಲ ಭಾಷೆಗಳನ್ನಾಡುವವರಿಗೂ ಸಾರಿಹೇಳುವದಕ್ಕೆ ನಿತ್ಯವಾದ ಶುಭವರ್ತಮಾನವು ಅವನಲ್ಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು