Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:1 - ಕನ್ನಡ ಸತ್ಯವೇದವು J.V. (BSI)

1 ಕ್ರಿಸ್ತನು ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಭಾವವನ್ನೇ ಹಿಡಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕ್ರಿಸ್ತಯೇಸು ದೈಹಿಕವಾಗಿ ಹಿಂಸೆಬಾಧೆಯನ್ನು ಅನುಭವಿಸಿದ್ದರಿಂದ ನೀವೂ ಅವರಲ್ಲಿದ್ದ ಅದೇ ಭಾವನೆಯಿಂದ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ದೈಹಿಕವಾಗಿ ಹಿಂಸೆಪಡುವವನು ಪಾಪ ಜೀವನದೊಡನೆ ಸಂಬಂಧವನ್ನು ಕಡಿದುಕೊಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕ್ರಿಸ್ತನು ದೇಹಾರೂಢನಾಗಿದ್ದಾಗ ಸಂಕಟಪಟ್ಟನು. ಆದ್ದರಿಂದ ಕ್ರಿಸ್ತನಲ್ಲಿದ್ದ ಮನೋಭಾವವನ್ನೇ ನೀವೂ ಹೊಂದಿದವರಾಗಿ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ಶಾರೀರಿಕವಾಗಿ ಸಂಕಟವನ್ನು ಅನುಭವಿಸಿದ ವ್ಯಕ್ತಿಯು ಪಾಪದಿಂದ ಮುಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಮಾಂಸದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅವರಿಗಿದ್ದ ಮನೋಭಾವವನ್ನು ಧರಿಸಿಕೊಳ್ಳಿರಿ. ಏಕೆಂದರೆ ಮಾಂಸದಲ್ಲಿ ಬಾಧೆಪಟ್ಟವರು ಪಾಪಮಾಡುವುದನ್ನು ನಿಲ್ಲಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಕ್ರಿಸ್ತ್ ಆಂಗಾ ಮಾಸಾನ್ ಹೊತ್ತ್ಯಾ ತನ್ನಾ ತೆನಿ ಕಸ್ಟ್ ಖಾಲ್ಯಾನ್ ತುಮಿಬಿ ತೆಚ್ಯಾ ಸಾರ್ಕೆಚ್ ಮನುನ್ ಯವ್ಜುನ್ ಘೆವ್ನ್ ತುಮ್ಕಾ ತುಮಿ ಘಟ್ಟ್ ಕರುನ್ಗೆವಾ, ಕಶ್ಯಾಕ್ ಮಟ್ಲ್ಯಾರ್, ಆಂಗಾ ಮಾಸಾನಿ ಕಸ್ಟ್ ಸೊಸ್ತಲೊ ಪಾಪಾತ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:1
17 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ ಸ್ವೇಚ್ಫಾಭಿಲಾಷೆ ಸಹಿತ ಶಿಲುಬೆಗೆ ಹಾಕಿದವರು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನಷ್ಟೆ.


ಆದದರಿಂದ ಕಠಿನ ಯುದ್ಧವು ನಡೆಯುವ ದಿವಸದಲ್ಲಿ ಆ ವೈರಿಗಳನ್ನು ಎದುರಿಸುವದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ಜಯಶಾಲಿಗಳಾಗಿ ನಿಲ್ಲುವದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ತೆಗೆದುಕೊಳ್ಳಿರಿ.


ನಿಮ್ಮನ್ನು ತೊಳೆದುಕೊಳ್ಳಿರಿ, ಶುದ್ಧಿಮಾಡಿಕೊಳ್ಳಿರಿ, ನನ್ನ ಕಣ್ಣೆದುರಿನ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿರಿ;


ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.


ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲೇ ಬದುಕುವದು ಹೇಗೆ?


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಆತನನ್ನು ಆಲೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.


ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರವಿುಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರವಿುಸಿಕೊಂಡಿದ್ದಾನೆ.


ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು [ನಿನ್ನ ವಿುಂಡರಿಗೆ] ಇನ್ನು ಹಣಕೊಡದಿರುವಿ.


ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು.


ಆದದರಿಂದ ನೀವು ಈಗ ನಾನು ನಿಮಗೆ ಹೇಳುವ ಆತನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು ಎಂದು ಹೇಳಿದನು.


ಆತನು ಕೈಬತ್ತಿದ್ದವನಿಗೆ - ಎದ್ದು ನಡುವೆ ಬಾ ಎಂದು ಹೇಳಿ ಅವರಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು