Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:11 - ಕನ್ನಡ ಸತ್ಯವೇದವು J.V. (BSI)

11 ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಶಿಕಾಪಾ ಕರ್ತಲೊ ದೆವಾಚಿ ಗೊಸ್ಟಿಯಾಚ್ ಶಿಕ್ವುಂದಿತ್, ಸೆವಾ ಕರ್ತಲೊ ಮಾನುಸ್ ದೆವಾನ್ ದಯಾ ಕರುನ್ ದಿಲ್ಲ್ಯಾ ಬಳಾವೈನಾ ಸೆವಾ ಕರುಂದಿತ್, ತುಮಿ ಅಸೆ ಕರ್ಲ್ಯಾರ್ ತುಮ್ಚ್ಯಾ ಹರ್ ಎಕ್ ಕಾಮಾತ್ನಿ ಬಿ ಜೆಜುಕ್ರಿಸ್ತಾ ವೈನಾ ದೆವಾಕ್ ಹೊಗ್ಳಾಪ್ ಹೊತಾ, ಅಧಿಕಾರ್ ಅನಿ ಮಹಿಮಾ ಸದಾ ಸರ್ವತಾಕ್ ತೆಜೆಚ್ ಹೊಂವ್ದಿ ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:11
47 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನೀವು ಉಂಡರೂ ಕುಡಿದರೂ ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಘನತೆಗಾಗಿ ಮಾಡಿರಿ.


ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ.


ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.


ಅವನೇ ಸೀನಾಯಿಬೆಟ್ಟದಲ್ಲಿ ತನ್ನೊಡನೆ ಮಾತಾಡಿದ ದೂತನಿಗೂ ನಮ್ಮ ಪಿತೃಗಳಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಮಧ್ಯಸ್ಥನಾಗಿದ್ದು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.


ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು. ಮೊದಲನೇದಾಗಿ ದೈವೋಕ್ತಿಗಳು ಅವರ ವಶಕ್ಕೆ ಒಪ್ಪಿಸಲ್ಪಟ್ಟವು.


ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ನಿಮ್ಮ ಸಂಭಾಷಣೆ ಯಾವಾಗಲೂ ಇಂಪಾಗಿಯೂ ರಸವತ್ತಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರಹೇಳಬೇಕೋ ಅದನ್ನು ತಿಳಿದುಕೊಳ್ಳುವಿರಿ.


ವರಗಳಲ್ಲಿ ಬೇರೆ ಬೇರೆ ವಿಧಗಳುಂಟು, ದೇವರಾತ್ಮನು ಒಬ್ಬನೇ;


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ಶಕ್ತನಾಗಿರುವ ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಎಲ್ಲಾ ಕಾಲಕ್ಕಿಂತ ಮೊದಲೂ [ಇದ್ದ ಹಾಗೆ] ಈಗಲೂ ಯಾವಾಗಲೂ ಇರಲಿ. ಆಮೆನ್.


ಕಾಲವನ್ನು ನೋಡಿದರೆ ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ; ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು; ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಇರಲಿ. ಆಮೆನ್.


ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.


ದೇವರು ನನಗೆ ಕೃಪೆಯಿಂದ ಒಪ್ಪಿಸಿದ ಕೆಲಸವನ್ನು ನಡಿಸಿ ನಾನು ಪ್ರವೀಣಶಿಲ್ಪಿಯಂತೆ ಅಸ್ತಿವಾರ ಹಾಕಿದೆನು, ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಪ್ರತಿಯೊಬ್ಬನು ತಾನು ಅದರ ಮೇಲೆ ಎಂಥದನ್ನು ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ನಿನ್ನ ರಾಜ್ಯವು ಶಾಶ್ವತವಾಗಿದೆ; ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವದು.


ಆತನಿಗೆ ಆಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನವಾಗಿದೆ.


ಯೇಸು ಕ್ರಿಸ್ತನನ್ನು ಒಡೆಯನೆಂದು ಪ್ರತಿಜ್ಞೆಮಾಡಿ ತಂದೆಯಾದ ದೇವರಿಗೆ ಘನವನ್ನು ಸಲ್ಲಿಸುವರು.


ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಕ್ರಿಸ್ತನಿಗೆ ಭಯಪಡುವವರಾಗಿದ್ದು


ನೀವು ನಿಮ್ಮ ಸ್ವಂತ ಸೊತ್ತಲ್ಲ; ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು; ಆದಕಾರಣ ನಿಮ್ಮ ದೇಹದಲ್ಲಿ ದೇವರ ಪ್ರಭಾವವನ್ನು ಪ್ರಕಾಶಪಡಿಸಿರಿ.


ಸಮಸ್ತವು ಆತನಿಂದ ಉತ್ಪತ್ತಿಯಾಗಿ ಆತನಿಂದ ನಡೆಯುತ್ತಾ ಆತನಿಗಾಗಿ ಇರುತ್ತದೆ; ಆತನಿಗೇ ಸದಾಕಾಲವೂ ಸ್ತೋತ್ರ. ಆಮೆನ್.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. ಆಗ ನಾನು ಪರಾತ್ಪರನನ್ನು ಕೊಂಡಾಡಿ ಸದಾ ಜೀವಿಸುವಾತನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ನಿಲ್ಲುವದು;


ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳಿಕೆಯು ತಲತಲಾಂತರಕ್ಕೂ ನಿಲ್ಲುವದು.


ಇವರು ನನ್ನ ಆಲೋಚನಾಸಭೆಯಲ್ಲಿ ನಿಂತಿದ್ದರೆ ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ ಅವರನ್ನು ಅವರ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು.


ಸರಳರಾಗಿಯೂ ನಿರ್ಮಲರಾಗಿಯೂ ಯೇಸು ಕ್ರಿಸ್ತನ ಮೂಲಕವಾಗಿರುವ ಸುನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಕಾಣಿಸಿಕೊಂಡು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ತರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಈ ಸಹಾಯದಿಂದ ತೋರಿಬಂದ ನಿಮ್ಮ ಯೋಗ್ಯಭಾವವನ್ನು ಅವರು ನೋಡುವಾಗ ನೀವು ಮಾಡಿದ್ದ ಪ್ರತಿಜ್ಞೆಗೆ ಸರಿಯಾಗಿ ಕ್ರಿಸ್ತನ ಸುವಾರ್ತೆಯನ್ನು ಅನುಸರಿಸಿದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.


ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.


ಅವನು ಹೊರಗೆ ಹೋದ ಮೇಲೆ ಯೇಸು - ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ, ಮತ್ತು ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.


ದೇವರು ನನಗೆ ಕೃಪೆಮಾಡಿದ ಸೇವೆಯನ್ನು ನಡಿಸಿ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ವಿಶ್ವಾಸ ಬಲವನ್ನು ಕೊಟ್ಟನೋ ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ಭಾವಿಸಿಕೊಳ್ಳಬೇಕು.


ಆದರೆ ನಾವು ದೇವರ ವಾಕ್ಯವನ್ನು ಕಲಬೆರಿಕೆಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಉಪದೇಶ ಹೊಂದಿದವರಿಗೆ ತಕ್ಕ ಹಾಗೆ ಕ್ರಿಸ್ತನ ಅನ್ಯೋನ್ಯತೆಯಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತಾಡುತ್ತೇವೆ.


ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದದ್ದೆಂಬದನ್ನೂ ನೀವು ತಿಳುಕೊಳ್ಳುವಂತೆ ಅನುಗ್ರಹಿಸಲಿ.


ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನಲ್ಲಾ ಎಂದು ಯೋಚಿಸುವವರಾಗಿ ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತಾಡುತ್ತೇವೆ.


ನೀನಾದರೋ ಸ್ವಸ್ಥಬೋಧನೆಗೆ ಅನುಗುಣವಾಗಿ ಉಪದೇಶಮಾಡು.


ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.


ಅವರು ಯಾವ ರೀತಿಯಿಂದ ನಡೆದುಕೊಂಡು ಪ್ರಾಣಬಿಟ್ಟರೆಂಬದನ್ನು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು