Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:12 - ಕನ್ನಡ ಸತ್ಯವೇದವು J.V. (BSI)

12 ಪ್ರಿಯರೇ, ನೀವು ಪರಿಶೋಧನೆಗಾಗಿ ಪುಟಕ್ಕೆ ಹಾಕಲ್ಪಟ್ಟದ್ದಕ್ಕೆ ಆಶ್ಚರ್ಯಪಡಬೇಡಿರಿ; ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪ್ರಿಯರೇ, ಪರಿಶೋಧನೆಗೆಂದು ನಿಮಗೆ ಬಂದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸಂಭವಿಸಿಬಿಟ್ಟಿತೆಂದು ವಿಸ್ಮಯಪಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಸ್ನೇಹಿತರೇ, ನೀವು ಈಗ ಅನುಭವಿಸುತ್ತಿರುವ ಸಂಕಟಗಳ ವಿಷಯದಲ್ಲಿ ಆಶ್ಚರ್ಯಪಡದಿರಿ. ಅವು ನಿಮ್ಮ ನಂಬಿಕೆಯನ್ನು ಪರೀಕ್ಷಿಸುತ್ತಿವೆ. ವಿಪರೀತವಾದದ್ದು ನಿಮಗೆ ಸಂಭವಿಸುತ್ತಿದೆಯೆಂದು ಯೋಚಿಸದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪ್ರಿಯರೇ, ನಿಮ್ಮನ್ನು ಶೋಧಿಸಲು ಬರುವ ಅಗ್ನಿಪರೀಕ್ಷೆಗೆ ನೀವು ಆಶ್ಚರ್ಯಪಡಬೇಡಿರಿ. ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿತೆಂದು ಯೋಚಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾಜ್ಯಾ ಪ್ರೆಮಾಚ್ಯಾ ವಾಂಗ್ಡಿಯಾನು, ತುಮಿ ಅತ್ತಾ ಸೊಸುಲಾಗಲ್ಯಾ ತರಾಸಾಚ್ಯಾ ವಿಶಯಾತ್ ಅಜಾಪ್ ಹೊವ್ ನಕಾಸಿ, ತೆ ತುಮ್ಚೊ ವಿಶ್ವಾಸ್ ಪರಿಕ್ಷಾ ಕರ್ತಾ ಸೊಸುಕ್ ಹೊಯ್ನಸಲೊ ತರಾಸ್ ತುಮ್ಕಾ ಹೊವ್ಲಾ ಮನುನ್ ಚಿಂತುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:12
11 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವದಕ್ಕೆ ಮನಸ್ಸುಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂದು ನಿಮಗೆ ತಿಳಿದದೆಯಲ್ಲಾ.


ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು; ಅದರಿಂದ ಜನರು ಶೋಧಿಸಲ್ಪಟ್ಟು ಶುದ್ಧಹೊಂದಿ ಶುಭ್ರರಾಗುವರು; ಅಂತ್ಯವು ಕ್ಲುಪ್ತಕಾಲದಲ್ಲೇ ಆಗುವದು.


ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.


ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.


ತಾವು ಮಾಡುವ ಅಪರಿವಿುತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.


ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡಿಸಬೇಕೆಂತಲೂ ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ತಗ್ಗಿನಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷ್ಯಕ್ಕೆ ತರುವನು; ಆ ಹಿಂಸಕರಿಗಿಂತ ಮಹೋನ್ನತನು ಇದ್ದಾನಲ್ಲಾ.


ಪ್ರಿಯರೇ, ಪ್ರವಾಸಿಗಳೂ ಪರದೇಶಸ್ಥರೂ ಆಗಿರುವ ನೀವು ನಿಮ್ಮ ಆತ್ಮದ ಮೇಲೆ ಯುದ್ಧಮಾಡುವ ಶಾರೀರಿಕ ಅಭಿಲಾಷೆಗಳಿಗೆ ದೂರವಾಗಿರಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು