Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:13 - ಕನ್ನಡ ಸತ್ಯವೇದವು J.V. (BSI)

13 ತಂದೆಗಳೇ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆಯುತ್ತೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ. ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬರೆಯುತಿಹೆನು ತಂದೆಗಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಆದಿಯಿಂದಿರುವಾತನನ್ನು. ಬರೆಯುತಿಹೆನು ಯುವಜನರಿರಾ, ಇದನ್ನು ಏಕೆನೆ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ತಂದೆಗಳೇ, ಆದಿಯಿಂದ ಇರುವಾತನನ್ನು ನೀವು ತಿಳಿದಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯುವಕರೇ, ನೀವು ಕೆಡುಕನನ್ನು ಸೋಲಿಸಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಂದೆಗಳೇ, ಆದಿಯಿಂದ ಇರುವ ದೇವರನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಬಾಬಾನು, ಆರಂಬಾಕ್ನಾ ಹೊತ್ತ್ಯಾಕ್ ತುಮಿ ಕಳ್ವುನ್ ಘೆಟಲ್ಲ್ಯಾಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ. ದಾಂಡ್ಗ್ಯಾ ಲೊಕಾನು ತುಮಿ ಬುರ್ಶ್ಯಾಕ್ ಹರ್ವಲ್ಲ್ಯಾ ಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ. ಪೊರಾನು, ತುಮಿ ಬಾಬಾಕ್ ಒಳ್ಕುನ್ ಘೆಟಲ್ಲ್ಯಾಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:13
36 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಅರಿತಿದ್ದರೆ ನನ್ನ ತಂದೆಯನ್ನೂ ಅರಿಯುತ್ತಿದ್ದಿರಿ; ಈಗಿನಿಂದ ಆತನನ್ನು ಅರಿತುಕೊಂಡಿದ್ದೀರಿ; ಆತನನ್ನು ನೋಡಿದ್ದೀರಲ್ಲಾ ಎಂದು ಹೇಳಿದನು.


ತಂದೆಗಳೇ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿರುವದರಿಂದಲೂ ನಿಮಗೆ ಬರೆದಿದ್ದೇನೆ.


ಪ್ರಿಯರಾದ ಮಕ್ಕಳೇ, ನೀವಂತೂ ದೇವರಿಂದ ಹುಟ್ಟಿದವರಾಗಿದ್ದೀರಿ; ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಹೆಚ್ಚಿನವನಾಗಿರುವದರಿಂದ ನೀವು ಆ ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ.


ನಾವು ನಿಮಗೆ ಪ್ರಸಿದ್ಧಿಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನಸ್ಸಿಟ್ಟು ನೋಡಿ ಕೈಯಿಂದ ಮುಟ್ಟಿದ್ದೇವೆ.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಇಂಥವನೆಂದು ತಂದೆಯೇ ಹೊರತು ಇನ್ಯಾವನೂ ತಿಳಿದವನಲ್ಲ; ತಂದೆ ಇಂಥವನೆಂದು ಮಗನೇ ಹೊರತು ಇನ್ನಾವನೂ ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ ಅಂದನು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ದೇವರಿಂದ ಹುಟ್ಟಿರುವವನು ಪಾಪಮಾಡುವವನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದಾತನು ಅವನನ್ನು ಕಾಪಾಡುವನು; ಕೆಡುಕನು ಅವನನ್ನು ಹಿಡಿಯುವದಿಲ್ಲ.


ಕೆಡುಕನಿಂದ ಹುಟ್ಟಿ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಯಾವ ಕಾರಣದಿಂದ ಅವನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಗೆ ಸರಿಯಾದವುಗಳೂ ಆಗಿದ್ದದರಿಂದಲೇ.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಪ್ರಿಯರಾದ ಮಕ್ಕಳೇ, ಕ್ರಿಸ್ತನ ಹೆಸರಿನ ನಿವಿುತ್ತ ನಿಮ್ಮ ಪಾಪಗಳು ಕ್ಷವಿುಸಲ್ಪಟ್ಟಿರುವದರಿಂದ ನಿಮಗೆ ಬರೆಯುತ್ತೇನೆ.


ನನ್ನ ಪ್ರಿಯರಾದ ಮಕ್ಕಳೇ, ನೀವು ಪಾಪಮಾಡದಂತೆ ಈ ಮಾತುಗಳನ್ನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.


ಹಾಗೆಯೇ ಎಲ್ಲಾ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಯೌವನಸ್ಥರನ್ನು ಎಚ್ಚರಿಸು.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವದರಿಂದ ಇಂಥದನ್ನು ನಿಮಗೆ ಮಾಡುವರು.


ಯೇಸು ಅವನಿಗೆ - ಫಿಲಿಪ್ಪನೇ, ನಾನು ಇಷ್ಟು ದಿವಸ ನಿಮ್ಮ ಸಂಗಡ ಇದ್ದರೂ ನೀನು ಇನ್ನೂ ನನ್ನನ್ನು ಅರಿತುಕೊಳ್ಳಲಿಲ್ಲವೇ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ನಮಗೆ ತಂದೆಯನ್ನು ತೋರಿಸೆಂದು ನೀನು ಹೇಳುವದು ಹೇಗೆ?


ಅವರು - ನಿನ್ನ ತಂದೆ ಎಲ್ಲಿದ್ದಾನೆ? ಎಂದು ಕೇಳಲು ಯೇಸು - ನೀವು ನನ್ನನ್ನೂ ತಿಳಿದಿಲ್ಲ, ನನ್ನ ತಂದೆಯನ್ನೂ ತಿಳಿದಿಲ್ಲ; ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ತಿಳಿದಿರುವಿರಿ ಅಂದನು.


ಹೊಲವಂದರೆ ಈ ಲೋಕ; ಒಳ್ಳೆಯ ಬೀಜವಂದರೆ ಪರಲೋಕ ರಾಜ್ಯದವರು; ಹಣಜಿ ಅಂದರೆ ಸೈತಾನನವರು;


ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ.


ಅವನು ನನ್ನಲ್ಲಿ ಆಸಕ್ತನಾಗಿರುವದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವದರಿಂದ ಅವನನ್ನು ಉದ್ಧರಿಸುವೆನು.


ಬೆಟ್ಟಗಳು ಉಂಟಾಗುವದಕ್ಕಿಂತ, ಭೂವಿುಯೂ ಅದರ ದೇಶಗಳೂ ನಿರ್ಮಾಣವಾಗುವದಕ್ಕಿಂತ ಮುಂಚಿನಿಂದ ಯುಗಯುಗಾಂತರಗಳಲ್ಲಿಯೂ ನೀನೇ ದೇವರು.


ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ


ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದು ಲೋಕವು ನಂಬುವದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಪ್ರಕಾರ ಅವರೂ ನಮ್ಮಲ್ಲಿ ಇರಬೇಕೆಂತಲೂ ಕೇಳಿಕೊಳ್ಳುತ್ತೇನೆ.


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು, ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;


ಪ್ರಾಯಸ್ಥರಾದ ಸ್ತ್ರೀಪುರುಷರೂ ಮುದುಕರೂ ಹುಡುಗರೂ


ಆದರೆ ನಿಮ್ಮ ಮಾತು ಹೌದಾದರೆ ಹೌದು, ಅಲ್ಲವಾದರೆ ಅಲ್ಲ, ಎಂದಿರಲಿ; ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬಂದದ್ದು.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು