Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:17 - ಕನ್ನಡ ಸತ್ಯವೇದವು J.V. (BSI)

17 ಲೋಕವೂ ಅದರ ಆಶೆಯೂ ಗತಿಸಿ ಹೋಗುತ್ತವೆ; ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಲೋಕವೂ ಅದರ ವ್ಯಾಮೋಹವೂ ಗತಿಸಿಹೋಗುವುವು. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಚಿರಂಜೀವಿಯಾಗಿ ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಲೋಕವು ಮತ್ತು ಜನರು ಬಯಸುವಂಥವುಗಳು ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತಕ್ಕನುಸಾರವಾಗಿ ಮಾಡುವವನು ಸದಾಕಾಲ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹ್ಯೊ ಜಗ್, ಅನಿ ಲೊಕಾ ಆಶಾ ಕರ್ತಲೆ ಸಗ್ಳೆ ನಾಸ್ ಹೊವ್ನ್ ಜಾತಾ; ಖರೆ ದೆವಾಚ್ಯಾ ಮನಾ ಸಾರ್ಕೆ ಚಲ್ತಲೊ ಸದಾ ಸರ್ವತಾಕ್ ಜಿವನ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:17
28 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು; ಯಾಕಂದರೆ ಈ ಪ್ರಪಂಚದ ತೋರಿಕೆಯು ಗತಿಸಿ ಹೋಗುತ್ತಾ ಅದೆ.


ಯಾಕಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪದ ವಶದಿಂದ ತಪ್ಪಿಸಿಕೊಂಡವನಾಗಿ ಉಳಿದಿರುವ ತನ್ನ ಜೀವಮಾನಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವದಕ್ಕೆ ಪ್ರಯತ್ನಮಾಡುವನು.


ದೇವರ ಚಿತ್ತವನ್ನು ನೆರವೇರಿಸಿ ವಾಗ್ದಾನದ ಫಲವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಬೇಕು.


ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.


ದೇವರ ಚಿತ್ತವೇನಂದರೆ ನೀವು ಶುದ್ಧರಾಗಿ ಇರಬೇಕೆಂಬದೇ. ಆದದರಿಂದ ಹಾದರಕ್ಕೆ ದೂರವಾಗಿರಬೇಕು.


ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ನಿನ್ನ ಚಿತ್ತದಂತೆ ನಡಕೊಳ್ಳುವದನ್ನು ನನಗೆ ಕಲಿಸು; ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಮಟ್ಟನೆಲದಲ್ಲಿ ನಡಿಸಲಿ.


ನನ್ನನ್ನು ಸ್ವಾಮೀ, ಸ್ವಾಮೀ ಅನ್ನುವವರೆಲ್ಲರು ಪರಲೋಕರಾಜ್ಯದಲ್ಲಿ ಸೇರುವರೆಂದು ನೆನಸಬೇಡಿರಿ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ಪರಲೋಕರಾಜ್ಯಕ್ಕೆ ಸೇರುವನು.


ನಿಮ್ಮ ಜೀವಮಾನವು ಎಂಥದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹಬೆಯಂತಿರುತ್ತೀರಿ.


ಪರಲೋಕದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಹಿರಿಯರು ಮನ್ನಾ ತಿಂದರೂ ಸತ್ತರು; ಇದು ಹಾಗಲ್ಲ; ಈ ರೊಟ್ಟಿಯನ್ನು ತಿನ್ನುವವನು ಸದಾಕಾಲ ಜೀವಿಸುವನು ಎಂದು ಹೇಳಿದನು.


ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು ಎಂದು ಕೇಳಿದ್ದಕ್ಕೆ ಅವರು - ಮೊದಲನೆಯವನೇ ಅಂದರು. ಆಗ ಯೇಸು ಅವರಿಗೆ - ಭ್ರಷ್ಟರೂ ಸೂಳೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ; ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿ ಬಂದ ದೇವರ ಚಿತ್ತ.


ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.


ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.


ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಸಂದುಹೋಯಿತು; ನಮ್ಮ ವರುಷಗಳು ನಿಟ್ಟುಸಿರಿನಂತೆ ತೀರಿಹೋದವು.


ನರರು ನಿಜವಲ್ಲದ ಮಾಯಾರೂಪದಿಂದ ಸಂಚರಿಸುವವರು; ಅವರು ಸುಮ್ಮ ಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವದೋ ತಾವೇ ತಿಳಿಯರು.


ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತೀ; ಅವು ಮಾರ್ಪಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು