Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:27 - ಕನ್ನಡ ಸತ್ಯವೇದವು J.V. (BSI)

27 ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ಕ್ರಿಸ್ತ ಯೇಸುವಿನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುತ್ತದೆ. ಆದುದರಿಂದ ಬೇರೆ ಯಾರೂ ನಿಮಗೆ ಬೋಧಿಸುವ ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಬೋಧಿಸುವುದು. ಆ ಬೋಧನೆಯು ಸುಳ್ಳಲ್ಲ, ಸತ್ಯವಾದದ್ದು. ಆದ್ದರಿಂದ ಅದು ನಿಮಗೆ ಬೋಧಿಸಿದ ಪ್ರಕಾರವೇ, ಕ್ರಿಸ್ತ ಯೇಸುವಿನಲ್ಲಿ ನೀವು ನೆಲೆಗೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಕ್ರಿಸ್ತಾನ್ ತುಮ್ಚ್ಯಾ ವರ್ತಿ ಅಪ್ನಾಚೊ ಪವಿತ್ರ್ ಆತ್ಮೊ ವೊತ್ಲ್ಯಾನಾಯ್ ತೆಚೊ ಪವಿತ್ರ್ ಆತ್ಮೊ ತುಮ್ಚ್ಯಾ ವಾಂಗ್ಡಾ ರ್‍ಹಾತಾನಾ, ಶಿಕ್ವುತಲ್ಯಾಚಿ ತುಮ್ಕಾ ಗರಜ್ ನಾ, ತೊಚ್ ತುಮ್ಕಾ ಶಿಕ್ವುತಾ ಅನಿ ತೆಚೆ ಶಿಕಾಪ್ ಖರೆ, ಝುಟೆ ನ್ಹಯ್.ತೆನಿ ತುಮ್ಕಾ ಶಿಕ್ವಲ್ಲ್ಯಾ ಸಾರ್ಕೆ ತುಮಿ ಕ್ರಿಸ್ತಾಚ್ಯಾ ವಾಂಗ್ಡಾ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:27
28 ತಿಳಿವುಗಳ ಹೋಲಿಕೆ  

ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.


ಇವುಗಳನ್ನು ಮಾನುಷಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ದೇವರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮಸಂಬಂಧವಾದವುಗಳನ್ನು ಆತ್ಮನಿಗೆ ಯುಕ್ತವಾದ ರೀತಿಯಲ್ಲಿ ವಿವರಿಸುತ್ತೇವೆ.


ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನವ್ಮಿುಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ನಿಜವಾಗಿ ದೇವರ ವಾಕ್ಯವೇ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.


ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ, ಆತನು ಇವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ಬಲ್ಲೆವು.


ಪ್ರಿಯರಾದ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.


ನೀವು ಪುನರ್ಜನ್ಮ ಹೊಂದಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ, ನಾಶವಾಗದ ಬೀಜದಿಂದಲೇ ಉಂಟಾದದ್ದು. ಅದು ದೇವರ ಸದಾಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.


ಆದದರಿಂದ ನೀವು ಕರ್ತನಾದ ಯೇಸುವೆಂಬ ಕ್ರಿಸ್ತನನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದುಕೊಳ್ಳಿರಿ.


ಆ ಸಹಾಯಕನು ಯಾರಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದರಿಂದ ಆತನನ್ನು ಹೊಂದಲಾರದು. ನೀವು ಆತನನ್ನು ಬಲ್ಲಿರಿ; ಹೇಗಂದರೆ ನಿಮ್ಮ ಬಳಿಯಲ್ಲಿ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.


ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶವನ್ನು ಹೊಂದಿದಿರಲ್ಲಾ.


ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇವಿುಸಲ್ಪಟ್ಟೆನು. ನಾನು ಇಂಥವನೆಂಬದು ಸುಳ್ಳಲ್ಲ, ಸತ್ಯವೇ.


ಕೆಟ್ಟವರು ನ್ಯಾಯವನ್ನು ಗ್ರಹಿಸರು; ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ಅವರೆಲ್ಲರು ದೇವರಿಂದ ಶಿಕ್ಷಿತರಾಗಿರುವರು ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದದೆ; ತಂದೆಯಿಂದ ಕೇಳಿ ಕಲಿತವರೆಲ್ಲರು ನನ್ನ ಬಳಿಗೆ ಬರುತ್ತಾರೆ.


ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು; ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.


ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ದಯಪಾಲಿಸಿರುವ ಕೃಪಾವರಗಳನ್ನು ತಿಳುಕೊಳ್ಳುವದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದೆವು.


ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ;


ಸಹೋದರಸ್ನೇಹ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದು ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ.


ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. [ಮೋಶೆ] ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.


ಅವನ ಕಾಣಿಕೆ ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು