Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:5 - ಕನ್ನಡ ಸತ್ಯವೇದವು J.V. (BSI)

5 ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ಆತನಲ್ಲಿದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಯಾವನಾದರೂ ದೇವರ ವಾಕ್ಯಕ್ಕೆ ವಿಧೇಯನಾಗಿದ್ದರೆ, ದೇವರ ಮೇಲೆ ಅವನಿಗಿರುವ ಪ್ರೀತಿಯು ಪರಿಪೂರ್ಣವಾಗಿದೆ. ನಾವು ದೇವರನ್ನು ಅನುಸರಿಸುತ್ತಿದ್ದೇವೆ ಎಂಬುದನ್ನು ಇದರಿಂದಲೇ ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯಾವನಾದರೂ ದೇವರ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ದೇವರಲ್ಲಿದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ಜೆ ತರ್ ದೆವಾಚ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲ್ಲ್ಯಾರ್ ದೆವಾಚ್ಯಾ ವರ್ತಿ ಹೊತ್ತೊ ತೆಚೊ ಪ್ರೆಮ್ ಪರಿಪುರ್ನ್ ಹೊತಾ ಅನಿ ಹೆಚ್ಯಾ ವೈನಾ ಅಮಿ ದೆವಾಚ್ಯಾ ವಾಂಗ್ಡಾ ಎಕ್ವಟ್ಟಾನ್ ಹಾಂವ್ ಮನ್ತಲೆ ಕಳುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:5
32 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು.


ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣಿಸಿಕೊಳ್ಳುವೆನು ಎಂದು ಹೇಳಿದನು.


ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಕೂಗಿದಳು. ಆತನು - ಹಾಗನ್ನಬೇಡ, ದೇವರ ವಾಕ್ಯವನ್ನು ಕೇಳಿ ಅದಕ್ಕೆ ಸರಿಯಾಗಿ ನಡಕೊಳ್ಳುವವರೇ ಧನ್ಯರು ಅಂದನು.


ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ, ಆತನು ಇವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ಬಲ್ಲೆವು.


ಆತನ ಕಟ್ಟಳೆಗಳನ್ನು ಕೈಕೊಂಡು ಸಂಪೂರ್ಣಮನಸ್ಸಿನಿಂದ ಆತನನ್ನು ಹುಡುಕುವವರು ಭಾಗ್ಯವಂತರು.


ಇದರಲ್ಲಿ ದೇವರ ಆಜ್ಞೆಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ತೋರಿಬರುತ್ತದೆ.


ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ತಿಳಿದುಕೊಳ್ಳುತ್ತೇವೆ.


ನಾನು ದ್ರಾಕ್ಷೇ ಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನೇ ಬಹಳ ಫಲಕೊಡುವನು; ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.


ಪ್ರೀತಿಯು ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯು ಯಾತನೆಯನ್ನು ಹೊಂದುತ್ತಾ ಇರುವದು; ಪೂರ್ಣಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.


ನಿನಗೇ ಮೊರೆಯಿಟ್ಟಿದ್ದೇನೆ; ರಕ್ಷಿಸು. ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.


ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟು


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಪ್ರವರ್ತಿಸಿ ಆ ಕ್ರಿಯೆಗಳಿಂದಲೇ ಸಿದ್ಧಿಗೆ ಬಂತೆಂಬದು ಕಾಣಬರುತ್ತದಲ್ಲಾ.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ಇರುತ್ತಾನೆ; ನಾನು ಅವನಲ್ಲಿ ಇರುತ್ತೇನೆ.


ಆಜ್ಞೆಯನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸನು; ಕಾಲವೂ ನ್ಯಾಯತೀರ್ಪೂ ಉಂಟೆಂಬದು ಜ್ಞಾನಿಯ ಬುದ್ಧಿಗೆ ಗೊತ್ತು;


ಯಾವಾಗಲೂ ನ್ಯಾಯವನ್ನು ಕಾಪಾಡುವವರೂ ನೀತಿಯನ್ನು ಪಾಲಿಸುವವರೂ ಧನ್ಯರು.


ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.


ನಿನ್ನ ನೇಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡಿಸಬೇಕೆಂದು ನೀನೇ ಆಜ್ಞಾಪಿಸಿರುತ್ತೀ.


ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು; ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು.


ಅವರು ತನ್ನ ವಿಧಿಗಳನ್ನು ಕೈಕೊಂಡು ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬದೇ ಆತನ ಉದ್ದೇಶ. ಯಾಹುವಿಗೆ ಸ್ತೋತ್ರ!


ನ್ಯಾಯತೀರ್ಪಿನ ದಿನದಲ್ಲಿ ನಮಗಿರುವ ಧೈರ್ಯದಲ್ಲಿಯೇ ಆತನ ಪ್ರೀತಿಯು ನಮ್ಮೊಳಗೆ ಸಿದ್ಧಿಗೆ ಬಂತು. ಯಾಕಂದರೆ ಕ್ರಿಸ್ತನು ಎಂಥವನಾಗಿದ್ದಾನೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ.


ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು