Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:18 - ಕನ್ನಡ ಸತ್ಯವೇದವು J.V. (BSI)

18 ದೇವರಿಂದ ಹುಟ್ಟಿರುವವನು ಪಾಪಮಾಡುವವನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದಾತನು ಅವನನ್ನು ಕಾಪಾಡುವನು; ಕೆಡುಕನು ಅವನನ್ನು ಹಿಡಿಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರಿಂದ ಹೊಸದಾಗಿ ಹುಟ್ಟಿದವನು ಪಾಪದಲ್ಲೇ ಮುಂದುವರಿಯುವುದಿಲ್ಲವೆಂದು ನಮಗೆ ತಿಳಿದಿದೆ. ದೇವರ ಮಗನಾದ ಯೇಸು ಅವನನ್ನು ಸುರಕ್ಷಿತವಾಗಿ ಕಾಪಾಡುತ್ತಾನೆ. ಕೆಡುಕನು ಅವನಿಗೆ ಕೇಡುಮಾಡಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದೆವಾಕ್ನಾ ಜಲ್ಮಲ್ಲೊ ಪಾಪ್ ಕರಿನಾ ಮನುನ್ ಅಮ್ಕಾ ಗೊತ್ತ್ ಹಾಯ್. ದೆವಾಕ್ನಾ ಜಲ್ಮಲ್ಲೊ ಅಪ್ನಾಕ್ ಅಪ್ನಿ ರಾಕುನ್ ಘೆತಾ, ಸೈತಾನ್ ತೆಕಾ ಆಪ್ಡುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:18
35 ತಿಳಿವುಗಳ ಹೋಲಿಕೆ  

ದೇವರಿಂದ ಹುಟ್ಟಿದವನು ಪಾಪಮಾಡನು; ದೇವರ ಜೀವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡುವವನಾಗಿರಲಾರನು.


ಯಾಕಂದರೆ ದೇವರಿಂದ ಹುಟ್ಟಿರುವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥದು ನಮ್ಮ ನಂಬಿಕೆಯೇ.


ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ಯೇಸುವು ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ಯಾಕಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಕ್ರಿಸ್ತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.


ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.


ನೀವು ಪುನರ್ಜನ್ಮ ಹೊಂದಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ, ನಾಶವಾಗದ ಬೀಜದಿಂದಲೇ ಉಂಟಾದದ್ದು. ಅದು ದೇವರ ಸದಾಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.


ಆತನು ನೀತಿವಂತನಾಗಿದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.


ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ; ನನ್ನ ಪ್ರೀತಿಯಲ್ಲಿ ನೆಲೆಗೊಂಡಿರ್ರಿ.


ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ.


ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.


ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.


ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.


ಪ್ರಿಯರಾದ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.


ನಾವಂತೂ ದೇವರಿಂದ ಹುಟ್ಟಿದವರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಂದ ಹುಟ್ಟದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯವನ್ನು ಬೋಧಿಸುವ ಆತ್ಮ, ಅದು ಸುಳ್ಳನ್ನು ಬೋಧಿಸುವ ಆತ್ಮ ಎಂದು ಇದರಿಂದಲೇ ತಿಳುಕೊಳ್ಳುತ್ತೇವೆ.


ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ಏನು ಬೇಕಾದರೂ ಬೇಡಿಕೊಳ್ಳಿರಿ, ಅದು ನಿಮಗೆ ದೊರೆಯುವದು.


ಇವರು ರಕ್ತಸಂಬಂಧದಿಂದಾಗಲಿ ಕಾಮದಿಂದಾಗಲಿ ಪುರುಷಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ; ಅದರೊಳಗಿಂದ ಜೀವಧಾರೆಗಳು ಹೊರಡುವವು.


ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು; ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕುಕ್ಕೆಹಾಕಿಕೊಂಡಿರುವೆನು ಅಂದುಕೊಂಡೆನು.


ಕೆಡುಕನಿಂದ ಹುಟ್ಟಿ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಯಾವ ಕಾರಣದಿಂದ ಅವನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಗೆ ಸರಿಯಾದವುಗಳೂ ಆಗಿದ್ದದರಿಂದಲೇ.


ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ನೀವು ನನ್ನಲ್ಲಿ ನೆಲೆಗೊಂಡಿರ್ರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲಕೊಡಲಾರದೋ ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.


ಇನ್ನು ನಾನು ನಿಮ್ಮ ಸಂಗಡ ಬಹಳ ಮಾತುಗಳನ್ನಾಡುವದಿಲ್ಲ, ಯಾಕಂದರೆ ಇಹಲೋಕಾಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ಯಾವದೊಂದೂ ನನ್ನಲ್ಲಿಲ್ಲ;


ಆತನು ತನ್ನ ಸುಚಿತ್ತದ ಪ್ರಕಾರ ಸತ್ಯಬೋಧನೆಯ ವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಆತನ ಸೃಷ್ಟಿಗಳಲ್ಲಿ ಪ್ರಥಮಫಲದಂತಾದೆವು.


ಅವರು ಆತನ ಮಾರ್ಗದಲ್ಲಿ ನಡೆಯುತ್ತಾರೆ; ಅನ್ಯಾಯಮಾಡುವದೇ ಇಲ್ಲ.


ಆದರೆ ನಿಮ್ಮ ಮಾತು ಹೌದಾದರೆ ಹೌದು, ಅಲ್ಲವಾದರೆ ಅಲ್ಲ, ಎಂದಿರಲಿ; ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬಂದದ್ದು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಬೇಡಿದವುಗಳು ಆತನಿಂದ ನಮಗೆ ದೊರೆತವೆಂಬದೂ ನಮಗೆ ಗೊತ್ತಾಗಿದೆ.


ನಾವು ದೇವರಿಂದ ಹುಟ್ಟಿದವರೆಂದೂ ಲೋಕವೆಲ್ಲವು ಕೆಡುಕನ ವಶದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಬಿತ್ತಬೇಕಾದ ಬೀಜದ ಮೇಲೆ ಈ ಜಂತುಗಳ ಹೆಣ ಬಿದ್ದರೆ ಆ ಬೀಜವು ಅಶುದ್ಧವಾಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು