Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:20 - ಕನ್ನಡ ಸತ್ಯವೇದವು J.V. (BSI)

20 ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ದೆವಾಚ್ಯಾ ಲೆಕಾನ್ ಹ್ಯಾ ಜಗಾಕ್ ಯೆವ್ನ್ ಅಮಿ ಖರ್ಯಾ ದೆವಾಕ್ ವಳ್ಕುನ್ ಘೆಯ್ ಸಾರ್ಕೆ ಅಮ್ಕಾ ಬುದ್ದ್ ದಿಲ್ಯಾನ್ ಮನುನ್ ಅಮ್ಕಾ ಗೊತ್ತ್ ಹಾಯ್, ಅನಿ ದೆವಾಚ್ಯಾ ಲೆಕಾ ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಅಮಿ ಹಾವ್, ಹ್ಯೊಚ್ ಖರ್ಯಾ ದೆವಾಚ್ಯಾ ವಾಂಗ್ಡಾ ಅಮಿ ಹಾತ್, ಹ್ಯೊಚ್ ಖರೊ ದೆವ್ ಅನಿ ಶಾಶ್ವತ್ ಜಿವ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:20
53 ತಿಳಿವುಗಳ ಹೋಲಿಕೆ  

ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಆಮೇಲೆ ಅವರು ಶಾಸ್ತ್ರವಚನಗಳನ್ನು ತಿಳುಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದು


ಯೇಸು ಅವನಿಗೆ - ಫಿಲಿಪ್ಪನೇ, ನಾನು ಇಷ್ಟು ದಿವಸ ನಿಮ್ಮ ಸಂಗಡ ಇದ್ದರೂ ನೀನು ಇನ್ನೂ ನನ್ನನ್ನು ಅರಿತುಕೊಳ್ಳಲಿಲ್ಲವೇ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ನಮಗೆ ತಂದೆಯನ್ನು ತೋರಿಸೆಂದು ನೀನು ಹೇಳುವದು ಹೇಗೆ?


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ಇಸ್ರಾಯೇಲ್ಯರ ಅರಸನೂ ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಆದಿ, ಅಂತವೂ ನಾನೇ; ನಾನು ಹೊರತು ಯಾವ ದೇವರೂ ಇಲ್ಲ.


ಯೇಸುವು ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


ತೋಮನು ಆತನಿಗೆ - ನನ್ನ ಸ್ವಾಮೀ, ನನ್ನ ದೇವರು! ಎಂದು ಹೇಳಿದನು.


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ; ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.


ಅಬ್ರಹಾಮ ಇಸಾಕ ಯಾಕೋಬರು ಅವರ ಪಿತೃಗಳೇ. ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದವನು, ಆತನು ಎಲ್ಲಾದರ ಮೇಲೆ ಒಡೆಯನೂ ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


ನಾನೂ ತಂದೆಯೂ ಒಂದಾಗಿದ್ದೇವೆ ಅಂದನು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಪ್ರೇರಿಸುವಂಥವನು ದೇವರ ಆತ್ಮನೇ ಎಂದು ತಿಳಿದುಕೊಳ್ಳುವದಕ್ಕೆ ಲಕ್ಷಣವೇನಂದರೆ - ಮನುಷ್ಯನಾಗಿ ಬಂದ ಯೇಸು ಕ್ರಿಸ್ತನನ್ನು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾದದ್ದು.


ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.


ಮಗನ ವಿಷಯದಲ್ಲಿಯಾದರೋ - ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ;


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ; ನಾನು ಲೋಕದವನಲ್ಲದೆ ಇರುವ ಪ್ರಕಾರ ಇವರೂ ಲೋಕದವರಲ್ಲ; ಆದಕಾರಣ ಲೋಕವು ಇವರ ಮೇಲೆ ದ್ವೇಷ ಮಾಡಿ ಅದೆ.


ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ;


ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;


ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -


ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ, ಅದರ ವಿಷಯದಲ್ಲಿ ಸಾಕ್ಷಿಹೇಳುತ್ತೇವೆ.


ಇದರಲ್ಲಿ ನನ್ನ ಉದ್ದೇಶವೇನಂದರೆ - ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ನೇಮನಿಷ್ಠೆಗಳ ಫಲವಾಗಿರುವ ಸ್ವನೀತಿಯನ್ನಾಶ್ರಯಿಸದೆ ಕ್ರಿಸ್ತನನ್ನು ನಂಬುವದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿ ಕಾಣಿಸಿಕೊಳ್ಳಬೇಕೆಂಬದೇ.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ನೀವು ನನ್ನಲ್ಲಿ ನೆಲೆಗೊಂಡಿರ್ರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲಕೊಡಲಾರದೋ ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.


ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು.


ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ ಬೋಧನೆಯು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿರುತ್ತೀರಿ.


ನೀವು ದೇವರ ಪ್ರೀತಿಯಲ್ಲಿ ನೆಲೆಗೊಂಡು ನಿಂತು ಅದರ ಅಗಲ ಉದ್ದ ಎತ್ತರ ಆಳ ಎಷ್ಟೆಂಬದನ್ನು ದೇವಜನರೆಲ್ಲರೊಂದಿಗೆ ಗ್ರಹಿಸಲೂ


ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ನೀತಿಸ್ವರೂಪನಾದ ತಂದೆಯೇ, ಲೋಕವಂತೂ ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ; ಮತ್ತು ಇವರು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ತಿಳುಕೊಂಡಿದ್ದಾರೆ.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಅವನಿಗಾಗುವದು.


ಯೇಸು ಅವರಿಗೆ - ದೇವರು ನಿಮ್ಮ ತಂದೆಯಾಗಿದ್ದರೆ, ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆತನೇ ನನ್ನನ್ನು ಕಳುಹಿಸಿದ್ದಾನೆ.


ತಾನು ದೇವರ ಮಗನಿಗೆ ಸೇರಿದವನಲ್ಲವೆನ್ನುವವನು ತಂದೆಗೆ ಸೇರಿದವನಲ್ಲ; ತಾನು ಮಗನಿಗೆ ಸೇರಿದವನೆಂದು ಒಪ್ಪಿಕೊಳ್ಳುವವನು ತಂದೆಗೂ ಸೇರಿದವನಾಗಿದ್ದಾನೆ.


ಯೇಸುವು ದೇವರ ಮಗನೆಂದು ನಂಬಿದವರೇ ಅಲ್ಲದೆ ಲೋಕವನ್ನು ಜಯಿಸುವವರು ಇನ್ನಾರಿದ್ದಾರೆ?


ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಬೇಡಿದವುಗಳು ಆತನಿಂದ ನಮಗೆ ದೊರೆತವೆಂಬದೂ ನಮಗೆ ಗೊತ್ತಾಗಿದೆ.


ದೇವರಿಂದ ಹುಟ್ಟಿರುವವನು ಪಾಪಮಾಡುವವನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದಾತನು ಅವನನ್ನು ಕಾಪಾಡುವನು; ಕೆಡುಕನು ಅವನನ್ನು ಹಿಡಿಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು