Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:11 - ಕನ್ನಡ ಸತ್ಯವೇದವು J.V. (BSI)

11 ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:11
25 ತಿಳಿವುಗಳ ಹೋಲಿಕೆ  

ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವದಕ್ಕೆ ಪ್ರಾರಂಭಿಸುವನು ಅಂದನು.


ಅವನು ತನ್ನ ಹರಕೆಯ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.


ನೀನು ದೇವರಿಗೆ ಹರಕೆಯನ್ನು ಕಟ್ಟಿದರೆ ಅದನ್ನು ತೀರಿಸಲು ತಡಮಾಡಬೇಡ; ಆತನು ಮೂಢರಿಗೆ ಒಲಿಯನು; ನಿನ್ನ ಹರಕೆಯನ್ನು ಒಪ್ಪಿಸು.


ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು - ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ; ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ರೂಬೇನೆಂದು ಹೆಸರಿಟ್ಟಳು.


ನಾನು ಕುಗ್ಗಿರುವದನ್ನೂ ಕಷ್ಟಪಡುವದನ್ನೂ ನೋಡಿ ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.


ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ


ಆಮೇಲೆ ದೇವರು ರಾಹೇಲಳನ್ನು ನೆನಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.


ಇದಲ್ಲದೆ ಅವನು ಯೆಹೋವನಿಗೆ - ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವದಾದರೆ


ತಾನು ಪ್ರತಿಷ್ಠಿಸಿಕೊಂಡಿರುವ ದಿನಗಳಲ್ಲೆಲ್ಲಾ ಅವನು ಯೆಹೋವನಿಗೆ ಮೀಸಲಾಗಿಯೇ ಇರಬೇಕು.


ಯಾಕೋಬನು ಅಲ್ಲಿ - ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ಆಹಾರವನ್ನೂ ಉಡುವದಕ್ಕೆ ವಸ್ತ್ರವನ್ನೂ ಕೊಟ್ಟು


ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು ಎಂದು ಹೇಳಿದನು.


ಇಸ್ರಾಯೇಲ್ಯರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು - ನಾವು ಈ ಜನವನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ ಅಂದರು.


ಯಾಜಕನು ದೋಷಪರಿಹಾರಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಇನ್ನೊಂದನ್ನೂ ಸಮರ್ಪಿಸಿ ಶವಸೋಂಕಿದವನಿಗೋಸ್ಕರ ದೋಷಪರಿಹಾರಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು.


ಯೆಹೋವನು ತಮ್ಮನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತೆಗೆದುಕೊಂಡನೆಂಬದನ್ನು ಇಸ್ರಾಯೇಲ್ಯರು ಕೇಳಿದಾಗ ತಲೆಬಾಗಿ ನಮಸ್ಕರಿಸಿದರು.


ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.


ಬಹು ದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನನ್ನು ಕುರಿತು -


ಆಕೆಯು ಬಲು ಹೊತ್ತಿನವರೆಗೆ ಯೆಹೋವನ ಮುಂದೆ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಆಕೆಯ ಬಾಯನ್ನೇ ನೋಡುತ್ತಿದ್ದನು.


ಮಗನು ಮೊಲೆಬಿಡುವವರೆಗೂ ನಾನು ಬರುವದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುವೆನು ಎಂದು ಹೇಳಿದಳು.


ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ;


ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು ಎಂದು ಹೇಳಿದಳು. ಆಮೇಲೆ ಅವರು ಯೆಹೋವನಿಗೆ ನಮಸ್ಕರಿಸಿದರು.


ಏಲಿಯು ಎಲ್ಕಾನನಿಗೆ - ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ತಿರಿಗಿ ಸ್ವಸ್ಥಳಕ್ಕೆ ಹೋಗುತ್ತಿದ್ದರು.


ಏನು, ಕಂದಾ! ನನ್ನ ಗರ್ಭಪುತ್ರನೇ, ಏನು! ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ!


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ [ಅವುಗಳನ್ನು ಬಿಡಿಸುವದಕ್ಕೆ] ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೇಗಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು