Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:5 - ಕನ್ನಡ ಸತ್ಯವೇದವು J.V. (BSI)

5 ಅಲ್ಲಿಂದ ಫಿಲಿಷ್ಟಿಯರ ಠಾಣವಿರುವ ದೇವಗಿರಿಯನ್ನು ಮುಟ್ಟಿದಾಗ ಮುಂಗಡೆಯಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಲ್ಲಿಂದ ದೇವಗಿರಿಯನ್ನು ಮುಟ್ಟಿದಾಗ ಫಿಲಿಷ್ಟಿಯರ ದಂಡುಪ್ರದೇಶವನ್ನು ಕಾಣುವೆ; ಮುಂಗಡೆಯಲ್ಲಿ ಸ್ವರಮಂಡಲ, ತಮ್ಮಟೆ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಗಳ ಒಂದು ಗುಂಪನ್ನು ಕಾಣುವೆ. ಅವರು ಪರವಶರಾಗಿ ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಂತರ ನೀನು ಗಿಬಿಯತ್ ಎಲೋಹಿಮಿಗೆ ಹೋಗುವೆ. ಅಲ್ಲಿ ಒಂದು ಫಿಲಿಷ್ಟಿಯರ ಕೋಟೆಯಿದೆ. ನೀನು ಆ ಪಟ್ಟಣಕ್ಕೆ ಬಂದಾಗ, ಪ್ರವಾದಿಗಳ ಗುಂಪೊಂದು ಹೊರಬರುತ್ತದೆ. ಈ ಪ್ರವಾದಿಗಳು ಆರಾಧನಾ ಸ್ಥಳದಿಂದ ಇಳಿದು ಬರುತ್ತಾರೆ, ಅವರು ಪ್ರವಾದಿಸುತ್ತಿರುತ್ತಾರೆ. ಅವರು ಸ್ವರಮಂಡಲವನ್ನೂ ದಮ್ಮಡಿಯನ್ನೂ ಕೊಳಲನ್ನೂ ಕಿನ್ನರಿಯನ್ನೂ ನುಡಿಸುತ್ತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:5
27 ತಿಳಿವುಗಳ ಹೋಲಿಕೆ  

ಈಗ ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರಕೊಂಡು ಬನ್ನಿರಿ ಎಂದು ಹೇಳಿದನು. (ವಾದ್ಯಗಳ ಸ್ವರವನ್ನು ಕೇಳುವಾಗೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.)


ಅವನು ಅವನನ್ನು ಹಿಡಿದು ತರುವದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪರವಶವಾಗಿ ಮಾತಾಡುವದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವದನ್ನೂ ಕಂಡಾಗ ದೇವರ ಆತ್ಮವು ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.


ಬೇರೆ ಇಸ್ರಾಯೇಲ್ಯರನ್ನು ಅವರವರ ಮನೆಗಳಿಗೆ ಕಳುಹಿಸಿದನು. ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಠಾಣವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಈ ಸಂಗತಿಯು ಎಲ್ಲಾ ಇಬ್ರಿಯರಿಗೂ ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು.


ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಲಿಯವರು ಇದನ್ನು ಕಂಡು ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿತೆಂದು ತಿಳಿದುಕೊಂಡು ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು.


ಅಲ್ಲಿನ ಪ್ರವಾದಿಮಂಡಲಿಯವರು ಅವನನ್ನು ಎದುರುಗೊಂಡು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ಕರೆದುಕೊಳ್ಳುವನೆಂದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು - ಗೊತ್ತುಂಟು, ಸುಮ್ಮನಿರ್ರಿ ಎಂದು ಉತ್ತರಕೊಟ್ಟನು.


ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು. ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಎದುರುಗೊಂಡು ಅವನನ್ನು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು -


ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವದನ್ನು ಕಂಡನು. ದೇವರ ಆತ್ಮವು ಅವನ ಮೇಲೆ ಬಂದದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು.


ಪ್ರೀತಿಯನ್ನು ಅಭ್ಯಾಸಮಾಡಿಕೊಳ್ಳಿರಿ. ಆದರೂ ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅವುಗಳೊಳಗೆ ವಿಶೇಷವಾಗಿ ಪ್ರವಾದಿಸುವ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.


ನಾನು ಧರ್ಮರಹಸ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಡಾರ್ಥವನ್ನು ಪ್ರಕಟಿಸುವೆನು.


ಹೇಮಾನ್‍ಯೆದುತೂನರ ಹತ್ತಿರ ವಾದ್ಯಗಾರರಿಗೋಸ್ಕರ ತುತೂರಿ ತಾಳ ಮೊದಲಾದ ದೇವಕೀರ್ತನಾಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳೂ ದ್ವಾರಪಾಲಕರಾಗಿ ನೇವಿುಸಲ್ಪಟ್ಟರು.


ಅವರಲ್ಲಿ ಆಸಾಫನು ಪ್ರಧಾನನು; ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ ಕಿನ್ನರಿ ಮೊದಲಾದ ವಾದ್ಯಗಳನ್ನು ಬಾರಿಸುವವರು; ಆಸಾಫನು ತಾಳಹೊಡೆಯುವನು.


ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತೂರಿ ಇವುಗಳ ಧ್ವನಿಯೊಡನೆ ಪೂರ್ಣಾಸಕ್ತಿಯಿಂದ ಗೀತಗಳನ್ನು ಹಾಡುತ್ತಾ ದೇವರ ಮುಂದೆ ನರ್ತನ ಮಾಡುತ್ತಾ ಹೋದರು.


ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ - ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರವ ಈ ಸ್ಥಳವು ಬಲು ಇಕ್ಕಟ್ಟಾಗಿದೆ.


ಎಲೀಷನು ತಿರಿಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿ ಮಂಡಲಿಯವರು ತನ್ನ ಮುಂದೆ ಕೂಡಿ ಬರಲು ಅವನು ತನ್ನ ಸೇವಕನಿಗೆ - ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆಮಾಡು ಎಂದು ಆಜ್ಞಾಪಿಸಿದನು.


ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನರ್ಪಿಸುವದರಿಂದ ಅವನು ಈಗಲೇ ಇಲ್ಲಿಗೆ ಬಂದನು; ಬೇಗನೆ ಹೋಗಿರಿ.


ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು.


ಅವರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಅವರಲ್ಲಿ ಎರಡು ಸಾವಿರ ಜನರನ್ನು ವಿುಕ್ಮಾಷಿನಲ್ಲಿಯೂ ಬೇತೇಲಿನ ಗುಡ್ಡದಲ್ಲಿಯೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು.


ಬೇತ್ಲೆಹೇವಿುನಲ್ಲಿ ಒಂದು ಕಾವಲುದಂಡನ್ನು ಇಟ್ಟಿದ್ದರು.


ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ ರಾತ್ರಿಯಲ್ಲಿ ನಿನ್ನ ಸತ್ಯತೆಯನ್ನೂ ವರ್ಣಿಸುವದು ಉಚಿತವಾಗಿದೆ.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ, ಅವರನ್ನು ಲಕ್ಷಿಸಲಿಲ್ಲ.


ಪ್ರವಾದಿ ಮಂಡಲಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು