Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:8 - ಕನ್ನಡ ಸತ್ಯವೇದವು J.V. (BSI)

8 ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿವಸಗಳಾದನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯವರೆಗೆ ಕಾದುಕೊಂಡಿರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿವಸಗಳಾದ ನಂತರ ನಾನು ದಹನಬಲಿಗಳನ್ನೂ ಶಾಂತಿಸಮಾಧಾನಬಲಿಗಳನ್ನೂ ಸಮರ್ಪಿಸುವುದಕ್ಕಾಗಿ ಅಲ್ಲಿಗೆ ಬಂದು ನೀನು ಮಾಡಬೇಕಾದುದನ್ನು ನಿನಗೆ ತಿಳಿಸುವೆನು; ಅಲ್ಲಿಯವರೆಗೆ ಕಾದುಕೊಂಡಿರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನನಗಿಂತ ಮೊದಲು ನೀನು ಗಿಲ್ಗಾಲಿಗೆ ಹೋಗು. ನಾನು ನಿನ್ನನ್ನು ಅಲ್ಲಿ ಭೇಟಿಯಾಗುತ್ತೇನೆ. ನಾನು ಅಲ್ಲಿ ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಅರ್ಪಿಸುತ್ತೇನೆ. ಆದರೆ ನೀನು ಏಳು ದಿನಗಳವರೆಗೆ ಕಾಯಲೇಬೇಕು. ಅನಂತರ ನಾನು ನಿನ್ನ ಬಳಿಗೆ ಬಂದು ನೀನು ಮಾಡಬೇಕಾದದ್ದನ್ನು ತಿಳಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದು ಹೋಗಬೇಕು. ನಾನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:8
7 ತಿಳಿವುಗಳ ಹೋಲಿಕೆ  

ಸೌಲನು ಫಿಲಿಷ್ಟಿಯರ ಠಾಣವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲ್ಯರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.


ಆದರೆ ಸಮುವೇಲನು ಅವನಿಗೆ - ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರ ಶೋಕವನ್ನುಂಟುಮಾಡಿತು; ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದು ಹಾಕಿದನು.


ಆ ಸಮಾಧಾನಯಜ್ಞಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನೂ ವಪೆಯನ್ನೂ


ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನನ್ನು ದಾಟಿ ಯೆರಿಕೋವಿನ ಪೂರ್ವ ಪ್ರಾಂತದಲ್ಲಿರುವ ಗಿಲ್ಗಾಲೆಂಬಲ್ಲಿ ಇಳುಕೊಂಡರು.


ಬೆನ್ಯಾಮೀನ್ ಕುಲದ ಗೇರನ ಮಗನೂ ಬಹುರೀವಿುನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು