Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:15 - ಕನ್ನಡ ಸತ್ಯವೇದವು J.V. (BSI)

15 ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ ಯೆಹೋವನಿಗೆ ಸಮಾಧಾನಯಜ್ಞಗಳನ್ನು ಸಮರ್ಪಿಸಿ ಸೌಲನೊಡನೆ ಬಹಳವಾಗಿ ಆನಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರೆಲ್ಲರು ಅಲ್ಲಿಗೆ ಹೋಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಘೋಷಿಸಿ ಸ್ಥಿರಪಡಿಸಿದರು. ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಗಳನ್ನು ಸಮರ್ಪಿಸಿದರು. ಸೌಲನೊಡನೆ ಸೇರಿ ಬಹಳವಾಗಿ ಆನಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರೆಲ್ಲ ಗಿಲ್ಗಾಲಿಗೆ ಹೋದರು. ಅಲ್ಲಿ ಯೆಹೋವನ ಸಮ್ಮುಖದಲ್ಲಿ ಜನರೆಲ್ಲ ಸೌಲನನ್ನು ರಾಜನನ್ನಾಗಿ ಮಾಡಿದರು. ಅವರೆಲ್ಲರು ಯೆಹೋವನಿಗೆ ಸಮಾಧಾನಯಜ್ಞಗಳನ್ನು ಅರ್ಪಿಸಿದರು. ಸೌಲನು ಮತ್ತು ಇಸ್ರೇಲರೆಲ್ಲಾ ಒಂದು ದೊಡ್ಡ ಉತ್ಸವವನ್ನೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ, ಆ ಸ್ಥಳದಲ್ಲಿ ಯೆಹೋವ ದೇವರ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ, ಯೆಹೋವ ದೇವರಿಗೆ ಸಮಾಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲರೂ ಬಹಳವಾಗಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:15
12 ತಿಳಿವುಗಳ ಹೋಲಿಕೆ  

ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿವಸಗಳಾದನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯವರೆಗೆ ಕಾದುಕೊಂಡಿರು ಎಂದು ಹೇಳಿದನು.


ಸಮುವೇಲನು ಇಸ್ರಾಯೇಲ್ಯರನ್ನು ವಿುಚ್ಪೆಗೆ ಕರಿಸಿ ಯೆಹೋವನ ಸನ್ನಿಧಿಯಲ್ಲಿ ಕೂಡಿಸಿಕೊಂಡು


ಹೀಗೆ ಹೇಳದೆ ನೀವು ಅಹಂಭಾವದಿಂದ ಹೊಗಳಿಕೊಳ್ಳುತ್ತೀರಿ. ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ.


ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬದನ್ನು ತೋರಿಸಿಕೊಡುವನು ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಡಲು


ಹೀಗೆ ಸಮುವೇಲನು ಎಷ್ಟು ಹೇಳಿದರೂ ಜನರು ಕೇಳದೆ - ಅದಿರಲಿ; ನಮಗೆ ಅರಸನನ್ನು ಕೊಡು;


ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟನು.


ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ - ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಲಾಲಿಸಿ ನಿಮಗೊಬ್ಬ ಅರಸನನ್ನು ನೇವಿುಸಿದೆನು.


ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದಕುಲದವರು ಅವನನ್ನು ಎದುರುಗೊಳ್ಳುವದಕ್ಕೂ ಯೊರ್ದನ್ ಹೊಳೆಯನ್ನು ದಾಟಿಸುವದಕ್ಕೂ ಗಿಲ್ಗಾಲಿಗೆ ಬಂದರು.


ಆಗ ಸಮುವೇಲನು ಎಲ್ಲಾ ಜನರಿಗೆ - ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ ಎನ್ನಲು ಜನರೆಲ್ಲರೂ - ಅರಸನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು