Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:10 - ಕನ್ನಡ ಸತ್ಯವೇದವು J.V. (BSI)

10 ಆಗ ಅವರು ಆತನಿಗೆ - ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು ಎಂದು ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಅವರು, “ನಾವು ಸರ್ವೇಶ್ವರನಾದ ನಿಮ್ಮನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸಿರಿ; ನಾವು ಇನ್ನು ಮುಂದೆ ನಿಮ್ಮನ್ನೇ ಪೂಜಿಸಿ, ಸೇವೆಮಾಡುತ್ತೇವೆ,” ಎಂದು ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ನಿಮ್ಮ ಪೂರ್ವಿಕರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟು, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಸುಳ್ಳುದೇವರಾದ ಬಾಳನ ಮತ್ತು ಸುಳ್ಳುದೇವತೆಯಾದ ಅಷ್ಟೋರೆತಳ ಸೇವೆ ಮಾಡಿ ಪಾಪಮಾಡಿದ್ದೇವೆ. ಆದರೆ ಈಗ ನಮ್ಮನ್ನು ಶತ್ರುಗಳಿಂದ ರಕ್ಷಿಸು; ಆಗ ನಾವು ನಿನ್ನ ಸೇವೆಮಾಡುತ್ತೇವೆ’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇವರು ಅವರ ಸಂಗಡ ಯುದ್ಧಮಾಡಿದರು. ಆದ್ದರಿಂದ ಅವರು ಯೆಹೋವ ದೇವರಿಗೆ ಮೊರೆಯಿಟ್ಟು, ‘ನಾವು ಯೆಹೋವ ದೇವರಾದ ನಿಮ್ಮನ್ನು ಬಿಟ್ಟು ಬಾಳನನ್ನೂ, ಅಷ್ಟೋರೆತನನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀವು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸಿರಿ; ನಾವು ನಿಮ್ಮ ಸೇವೆ ಮಾಡುವೆವು,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:10
18 ತಿಳಿವುಗಳ ಹೋಲಿಕೆ  

ಆಗ ಅವರು ಯೆಹೋವನಿಗೆ - ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿನಗೆ ವಿರುದ್ಧವಾಗಿ ಪಾಪ ಮಾಡಿದ್ದೇವೆ ಎಂದು ಮೊರೆಯಿಡಲು ಆತನು ಅವರಿಗೆ -


ಅವರು ಯೆಹೋವನನ್ನು ಬಿಟ್ಟು ಬಾಳ್ ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದದರಿಂದ


ಇಸ್ರಾಯೇಲ್ಯರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು; ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.


ಇಸ್ರಾಯೇಲ್ಯರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.


ಯೆಹೋವನೇ, [ನಿನ್ನ ಜನರು] ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಆಶ್ರಯಿಸಿದರು, ನಿನ್ನ ಶಿಕ್ಷೆಗೆ ಗುರಿಯಾಗಿ ಜಪಮಾಡಿದರು.


ಆದರೆ ಆತನು ಕಷ್ಟದಲ್ಲಿದ್ದ ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.


ಮಂಜೂಷವು ಕಿರ್ಯತ್ಯಾರೀವಿುಗೆ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷಗಳು ಕಳೆದುಹೋದವು; ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ಯೆಹೋವನನ್ನೇ ಹಂಬಲಿಸುತ್ತಿದ್ದರು.


ಇಸ್ರಾಯೇಲ್ಯರು ವಿುದ್ಯಾನ್ಯರ ಕಾಟವನ್ನು ಸಹಿಸಲಾರದೆ ಯೆಹೋವನಿಗೆ ಮೊರೆಯಿಟ್ಟಾಗ


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷಗಳ ತನಕ ಬಲವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲ್ಯರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.


ಗಿಲ್ಯಾದಿನ ಅರ್ಧಭಾಗವೂ ಓಗನ ರಾಜಧಾನಿಗಳಾಗಿದ್ದ ಬಾಷಾನಿನ ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧಜನರಿಗೆ ಸಿಕ್ಕಿದವು.


ಈ ಇಸ್ರಾಯೇಲ್ಯರು ಬಾಳನ ಪ್ರತಿಮೆಗಳನ್ನು ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಅವರು ಅಲ್ಲಿ ಕೂಡಿಬಂದು ನೀರು ಸೇದಿ ಯೆಹೋವನ ಮುಂದೆ ಹೊಯ್ದು ಆ ದಿವಸ ಉಪವಾಸವಿದ್ದು - ನಿನಗೆ ದ್ರೋಹಿಗಳಾಗಿದ್ದೇವೆಂದು ಆತನಿಗೆ ಅರಿಕೆ ಮಾಡಿದರು. ಸಮುವೇಲನು ವಿುಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು