Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:11 - ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದ್ದರಿಂದ ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ ಮತ್ತು ಸಮುವೇಲ ಎಂಬವರನ್ನು ಕಳುಹಿಸಿದನು. ನಿಮ್ಮನ್ನು ಸುತ್ತುವರಿದಿದ್ದ ಶತ್ರುಗಳಿಂದ ಯೆಹೋವನು ರಕ್ಷಿಸಿದನು. ನೀವು ಸುರಕ್ಷಿತವಾಗಿ ವಾಸಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೋವ ದೇವರು ಯೆರುಬ್ಬಾಳನನ್ನೂ, ಬಾರಾಕನನ್ನೂ, ಯೆಫ್ತಾಹನನ್ನೂ, ಸಮುಯೇಲನನ್ನೂ ಕಳುಹಿಸಿ, ನಿಮ್ಮ ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರುಗಳ ಕೈಯಿಂದ ಬಿಡಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:11
13 ತಿಳಿವುಗಳ ಹೋಲಿಕೆ  

ಆ ದಿವಸದಲ್ಲಿ ಅವನು - ಬಾಳನು ತನ್ನ ಯಜ್ಞವೇದಿಯನ್ನು ಕೆಡವಿದವನೊಡನೆ ತಾನೇ ವ್ಯಾಜ್ಯವಾಡಲಿ ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳನೆಂಬ ಹೆಸರಾಯಿತು.


ಆಕೆಯು ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನಿಗೆ - ನಿಶ್ಚಯವಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನಿನಗೆ - ಎದ್ದು ನಫ್ತಾಲಿ ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ಯೆಹೋವನು ಅವನನ್ನು ಚೆನ್ನಾಗಿ ನೋಡಿ - ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಾಯೇಲ್ಯರನ್ನು ವಿುದ್ಯಾನ್ಯರಿಂದ ಬಿಡಿಸು ಎಂದು ಹೇಳಿದನು.


ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರಿಗಿ ಇಸ್ರಾಯೇಲ್ಯರ ಪ್ರಾಂತದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.


ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.


ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು.


ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ - ಬಾಳನಿಗೋಸ್ಕರ ನೀವು ವ್ಯಾಜ್ಯವಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯವಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಅವನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿ ಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯವಾಡಲಿ ಎಂದನು.


ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟುಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಇಳುಕೊಂಡರು. ಇವರಿಗೆ ಉತ್ತರದಿಕ್ಕಿನಲ್ಲಿ ಮೋರೆ ಗುಡ್ಡದ ಹಿಂದಿನ ತಗ್ಗಿನಲ್ಲಿ ವಿುದ್ಯಾನ್ಯರ ದಂಡಿಳಿದಿತ್ತು.


ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇವಿುಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲ್ಯರಿಗೆ ಗೊತ್ತಾಯಿತು.


ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಇವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮುಂಚಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.


ಊಲಾಮನ ಮಗನು ಬೆದಾನ್. ಇವರು ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನೂ ಆದ ಗಿಲ್ಯಾದನ ಸಂತಾನದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು