Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:17 - ಕನ್ನಡ ಸತ್ಯವೇದವು J.V. (BSI)

17 ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬದನ್ನು ತೋರಿಸಿಕೊಡುವನು ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ಸರ್ವೇಶ್ವರನಿಗೆ ಮೊರೆಯಿಡುತ್ತೇನೆ; ಈಗ ಗೋದಿಯ ಸುಗ್ಗಿಕಾಲವಾಗಿದ್ದರೂ ಗುಡುಗನ್ನೂ ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತಮ್ಮ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬುದನ್ನು ಅವರು ತೋರಿಸಿಕೊಡುವರು,” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈಗ ಗೋಧಿಯ ಸುಗ್ಗಿಕಾಲ. ನಾನು ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ. ಆತನು ಗುಡುಗನ್ನು ಮತ್ತು ಮಳೆಯನ್ನು ಕಳುಹಿಸಲೆಂದು ನಾನು ಪ್ರಾರ್ಥಿಸುತ್ತೇನೆ. ರಾಜನು ಬೇಕೆಂದು ನೀವು ಕೇಳಿದ್ದು ಯೆಹೋವನಿಗೆ ವಿರುದ್ಧವಾಗಿ ನೀವು ಮಾಡಿದ ಎಂತಹ ಕೆಟ್ಟಕಾರ್ಯವಾಗಿದೆ ಎಂಬದನ್ನು ನಿಮಗೇ ತಿಳಿಯುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದರಿಂದ, ಯೆಹೋವ ದೇವರ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತನವು ಹೆಚ್ಚಾಗಿದೆ ಎಂದು ತಿಳಿದುಕೊಂಡು ನೋಡುವ ಹಾಗೆ, ನಾನು ಯೆಹೋವ ದೇವರಿಗೆ ಮೊರೆಯಿಡುವೆನು. ಆಗ ಅವರು ಗುಡುಗನ್ನೂ, ಮಳೆಯನ್ನೂ ಕಳುಹಿಸುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:17
13 ತಿಳಿವುಗಳ ಹೋಲಿಕೆ  

ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳಿಕೆಗೆ ಬೇಡವೆನ್ನುತ್ತಾರೆ.


ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ ಮೂಢನಿಗೆ ಮಾನ ಹಾಗೆ ಸರಿಯಲ್ಲ.


ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ಆತನ ಯಾಜಕರಲ್ಲಿ ಮೋಶೆ ಆರೋನರೂ ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿಕೊಂಡಾಗೆಲ್ಲಾ ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.


ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಿಗೆ ಒಂದು ವಿಜ್ಞಾಪನೆ ಮಾಡಿದನು. ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನಿಲ್ಲಿರಿ! ಎಂದು ಇಸ್ರಾಯೇಲ್ಯರ ಸಮಕ್ಷದಲ್ಲಿ ಆಜ್ಞಾಪಿಸಲು


ಸಮುವೇಲನು ತಿರಿಗಿ ಅವರಿಗೆ - ಇಸ್ರಾಯೇಲ್ಯರೆಲ್ಲರೂ ವಿುಚ್ಪೆಯಲ್ಲಿ ಕೂಡಿ ಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು ಅನ್ನಲು


ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇವಿುಸಿಕೊಡು ಎಂಬ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಲು ಆತನು ಅವನಿಗೆ -


ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇವಿುಸಿದ್ದಾನೆ.


ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪವು ಕೂಡಿತು; ಆದದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ ಎಂದು ವಿಜ್ಞಾಪಿಸಲು ಅವನು -


ಮರುದಿನದಲ್ಲಿ ಮೋಶೆ ಜನರಿಗೆ - ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು; ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆಯು ನನ್ನ ಮೂಲಕ ದೊರಕೀತು ಎಂದು ಹೇಳಿದನು.


ಯೆಹೋವನ ವಿರೋಧಿಗಳು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂವಿುಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇವಿುಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು