Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:5 - ಕನ್ನಡ ಸತ್ಯವೇದವು J.V. (BSI)

5 ಸಮುವೇಲನು ತಿರಿಗಿ - ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ ಎನ್ನಲು ಅವರು - ಹೌದು, ಸಾಕ್ಷಿಯಾಗಿದ್ದಾರೆ ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಮುವೇಲನು ಪುನಃ “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲ ಎಂಬುದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ” ಎಂದನು. ಅವರು, “ಹೌದು, ಯೆಹೋವನೇ ಸಾಕ್ಷಿಯಾಗಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಮುವೇಲನು ಪುನಃ, “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬುದಕ್ಕೆ ಸರ್ವೇಶ್ವರ ಹಾಗು ಅವರ ಅಭಿಷಿಕ್ತನು ಸಾಕ್ಷಿಯಾಗಿದ್ದಾರೆ,” ಎಂದನು. ಅವರು, “ಹೌದು, ಸರ್ವೇಶ್ವರ ಸಾಕ್ಷಿ ಆಗಿದ್ದಾರೆ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಮುವೇಲನು ಇಸ್ರೇಲರಿಗೆ, “ನಿಮ್ಮ ಮಾತುಗಳಿಗೆಲ್ಲ ಯೆಹೋವನೇ ಸಾಕ್ಷಿ. ಯೆಹೋವನಿಂದ ಆಯ್ಕೆಯಾದ ರಾಜನೂ ಈ ದಿನ ಸಾಕ್ಷಿಯಾಗಿದ್ದಾನೆ. ನೀವು ನನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲವೆನ್ನುವುದಕ್ಕೆ ಈ ಇಬ್ಬರು ಸಾಕ್ಷಿಗಳಾಗಿದ್ದಾರೆ” ಎಂದು ಹೇಳಿದನು. ಜನರು, “ಹೌದು, ಯೆಹೋವನೇ ಸಾಕ್ಷಿ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅವನು ಅವರಿಗೆ, “ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬುದಕ್ಕೆ ಯೆಹೋವ ದೇವರೇ ನಿಮಗೆ ಸಾಕ್ಷಿಯಾಗಿದ್ದಾರೆ. ಅವರ ಅಭಿಷಿಕ್ತನು ಈ ಹೊತ್ತು ಸಾಕ್ಷಿಯಾಗಿದ್ದಾನೆ,” ಎಂದನು. ಅದಕ್ಕವರು, “ಸಾಕ್ಷಿಯಾಗಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:5
14 ತಿಳಿವುಗಳ ಹೋಲಿಕೆ  

ಕದ್ದದ್ದು ಎತ್ತಾದರೂ ಕತ್ತೆಯಾದರೂ ಆಡುಕುರಿಯಾದರೂ ಸರಿಯೇ ಅದು ಜೀವದಿಂದಲೇ ಕಳ್ಳನ ಬಳಿಯಲ್ಲಿ ಸಿಕ್ಕಿದರೆ ಅವನು ಎರಡರಷ್ಟು ಈಡುಕೊಡಬೇಕು.


ಇಲ್ಲವಾದ್ದರಿಂದ ನಾನು ಹಿರೀಸಭೆಯ ಎದುರಿನಲ್ಲಿ ನಿಂತಿದ್ದಾಗ ನನ್ನಲ್ಲಿ ಅಕ್ರಮವನ್ನೇನಾದರೂ ಕಂಡಿದ್ದರೆ ಇವರೇ ಹೇಳಲಿ.


ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು - ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಾಣಬರುವದಿಲ್ಲ; ಆತ್ಮವಾಗಲಿ ದೇವದೂತನಾಗಲಿ ಅವನ ಸಂಗಡ ಮಾತಾಡಿದ್ದರೂ ಮಾತಾಡಿರಬಹುದು ಎಂದು ವಾಗ್ವಾದಮಾಡಿದರು.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ನನ್ನಲ್ಲಿ ದೋಷವಿದೆಯೆಂದು ನನ್ನ ಬುದ್ಧಿಗೆ ತೋರುವದಿಲ್ಲವಾದರೂ ದೋಷವಿಲ್ಲದವನೆಂಬ ನಿರ್ಣಯವು ಇದರಿಂದಾಗುವದಿಲ್ಲ; ನನ್ನನ್ನು ವಿಚಾರಣೆಮಾಡುವವನು ಕರ್ತನೇ.


ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ.


ಪಿಲಾತನು - ಸತ್ಯವಂದರೇನು? ಅಂದನು. ಇದನ್ನು ಹೇಳಿ ಪಿಲಾತನು ತಿರಿಗಿ ಯೆಹೂದ್ಯರ ಬಳಿಗೆ ಹೊರಕ್ಕೆ ಬಂದು - ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸುವದಿಲ್ಲ.


ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ ರಾತ್ರಿ ವೇಳೆ ವಿಚಾರಿಸಿದರೂ ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವದಿಲ್ಲ; ನನ್ನ ಬಾಯಲ್ಲಿಯೂ ತಪ್ಪಿಲ್ಲ.


ಯೆಹೋವನು ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನನ್ನು ಕುರಿತು - ನಿನ್ನ ಮೇಲೆಯೂ ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ; ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಯಥಾರ್ಥವನ್ನಾಡಿದಂತೆ ನೀವು ಆಡಲಿಲ್ಲ.


ಆದರೆ ದಾವೀದನು - ಅವನನ್ನು ಕೊಲ್ಲಬೇಡ; ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಎಣಿಸಲ್ಪಡುವನೋ ಅಂದನು.


ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ ನಮ್ಮಿಂದ ಏನಾದರೂ ಕಸಕೊಂಡದ್ದಾಗಲಿ ಇರುವದಿಲ್ಲ ಎಂದು ಉತ್ತರಕೊಟ್ಟರು.


ಮತ್ತು ಲಾಬಾನನು - ನೀನು ನನ್ನ ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ ಅಂದನು.


ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು