Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:20 - ಕನ್ನಡ ಸತ್ಯವೇದವು J.V. (BSI)

20 ಆಗ ಸೌಲನು ಸಮುವೇಲನಿಗೆ - ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಸೌಲನು ಸಮುವೇಲನಿಗೆ, “ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಸೌಲನು ಸಮುವೇಲನಿಗೆ, “ಏನು? ನಾನು ಸರ್ವೇಶ್ವರನ ಮಾತನ್ನು ಕೇಳಲಿಲ್ಲವೇ? ಅವರು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದದುತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸೌಲನು, “ಆದರೆ ನಾನು ಯೆಹೋವನಿಗೆ ವಿಧೇಯನಾದೆ. ಆತನು ಕಳುಹಿಸಿದಲ್ಲಿಗೆ ನಾನು ಹೋಗಿ ಅಮಾಲೇಕ್ಯರೆಲ್ಲರನ್ನು ನಾಶಗೊಳಿಸಿದೆ. ಆದರೆ ಒಬ್ಬನನ್ನೇ ನಾನು ತಂದೆನು. ಅವನೇ ರಾಜನಾದ ಅಗಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಸೌಲನು ಸಮುಯೇಲನಿಗೆ, “ಹೌದು, ನಾನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ಯೆಹೋವ ದೇವರು ನನ್ನನ್ನು ಕಳುಹಿಸಿದ ಮಾರ್ಗವಾಗಿ ಹೋಗಿ, ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು, ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:20
12 ತಿಳಿವುಗಳ ಹೋಲಿಕೆ  

ಸೌಲನು ಅವನನ್ನು ಕಂಡು - ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು ಅಂದನು.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ - ದೇವರೇ, ಸುಲುಕೊಳ್ಳುವವರೂ ಅನ್ಯಾಯಗಾರರೂ ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ; ಆದದರಿಂದ ನಿನಗೆ ಸ್ತೋತ್ರಮಾಡುತ್ತೇನೆ.


ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವದಕ್ಕೆ ಅಪೇಕ್ಷಿಸಿ - ನನ್ನ ನೆರೆಯವನು ಯಾರು ಎಂದು ಯೇಸುವನ್ನು ಕೇಳಲು


ಆ ಯೌವನಸ್ಥನು ಆತನನ್ನು - ಇವೆಲ್ಲಕ್ಕೂ ಸರಿಯಾಗಿ ನಡಕೊಂಡಿದ್ದೇನೆ; ಇನ್ನೇನು ಕಡಿಮೆಯಾಗಿರಬಹುದು? ಎಂದು ಕೇಳಲು,


ಏನು! ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವಿಯೋ?


[ನೀತಿಯಿಂದ] ನನಗೇನು ಪ್ರಯೋಜನವಾಯಿತು. ಪಾಪಮಾಡದೆ ಇದ್ದದರಿಂದ ನನಗಾದ ಹೆಚ್ಚು ಲಾಭವೇನು ಅಂದುಕೊಳ್ಳುವದು


ಯೋಬನು - ನಾನು ನೀತಿವಂತನು, ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ.


ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನೂ ಪಾಪವಿಲ್ಲ.


ಅವರ ಅರಸನಾದ ಅಗಾಗನನ್ನು ಸಜೀವಿಯಾಗಿ ಹಿಡಿದು ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಶಿಶುಗಳನ್ನೂ ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ ಅಂದನು.


ನೀನು ಯೆಹೋವನ ಮಾತನ್ನು ಕೇಳಲಿಲ್ಲ; ಆತನು ಅಮಾಲೇಕ್ಯರ ಮೇಲೆ ಉಗ್ರಕೋಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದದರಿಂದಲೇ ಯೆಹೋವನು ಈಗ ನಿನಗೆ ಹೀಗೆ ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು