Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:6 - ಕನ್ನಡ ಸತ್ಯವೇದವು J.V. (BSI)

6 ಆದರೆ ಅವನು ಕೇನ್ಯರಿಗೆ - ನೀವು ಅಮಾಲೇಕ್ಯರನ್ನು ಬಿಟ್ಟು ಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಾಯೇಲ್ಯರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಅವನು ಕೇನ್ಯರಿಗೆ, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ. ಇಸ್ರಾಯೇಲರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ” ಎಂದು ಹೇಳಿಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಕೇನ್ಯರಿಗೆ ಅವನು, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರ ಅಲ್ಲವೆ?” ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೌಲನು ಕೇನ್ಯದ ಜನರಿಗೆ, “ಅಮಾಲೇಕ್ಯರನ್ನು ತ್ಯಜಿಸಿ ಹೊರಗೆ ಹೋಗಿ, ಆಗ ನಿಮ್ಮನ್ನು ಅಮಾಲೇಕ್ಯರೊಂದಿಗೆ ನಾಶಗೊಳಿಸುವುದಿಲ್ಲ. ಇಸ್ರೇಲರು ಈಜಿಪ್ಟಿನಿಂದ ಹೊರ ಬಂದಾಗ ನೀವು ಅವರಿಗೆ ಅನುಕಂಪ ತೋರಿದ್ದೀರಿ” ಎಂದು ಹೇಳಿದನು. ಆದ್ದರಿಂದ ಕೇನ್ಯರು ಅಮಾಲೇಕ್ಯರನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕೇನ್ಯರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ, ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ, ನೀವು ಅವರ ಮಧ್ಯದಲ್ಲಿಂದ ಹೊರಟು ಹೋಗಿರಿ,” ಎಂದು ಹೇಳಿದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:6
21 ತಿಳಿವುಗಳ ಹೋಲಿಕೆ  

ಕೇನ್ಯನೂ ಮೋಶೆಯ ಮಾವನೂ ಆದ [ಹೋಬಾಬನ] ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.


(ಕೇನ್ಯನಾದ ಹೆಬೆರನು ಮೋಶೆಯ ಮಾವನಾದ ಹೋಬಾಬನ ವಂಶದ ಉಳಿದ ಕೇನ್ಯರನ್ನು ಅಗಲಿ ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರಹಾಕಿಕೊಂಡಿದ್ದನು.)


ನನ್ನ ಮಾತನ್ನು ಕೇಳು, ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ; ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು;


ಆಕೀಷನು ಅವನನ್ನು - ಈಹೊತ್ತು ಯಾವ ಪ್ರಾಂತದವರನ್ನು ಸೂರೆಮಾಡಿಕೊಂಡು ಬಂದಿರಿ ಎಂದು ಕೇಳುವನು. ದಾವೀದನು ಅವನಿಗೆ - ದಕ್ಷಿಣಪ್ರಾಂತದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುವನು.


ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೇ ಆಶೀರ್ವಾದವು; ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಗೇ ಆಶೀರ್ವಾದವು.


ಬಾಬೆಲೇ, ನಿನ್ನ ಜೀವವು ಅಪೇಕ್ಷಿಸಿದ ಹಣ್ಣುಹಂಪಲುಗಳು ನಿನ್ನನ್ನು ಬಿಟ್ಟುಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವದೆಲ್ಲವೂ ನಾಶವಾಗಿ ನಿನ್ನನ್ನು ಬಿಟ್ಟುಬಿಟ್ಟವು. ಅವು ಇನ್ನು ಮೇಲೆ ಜನರಿಗೆ ಸಿಕ್ಕುವದೇ ಇಲ್ಲ.


ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಅವನು ಅನೇಕಾವರ್ತಿ ನನ್ನನ್ನು ಆದರಿಸಿದನು;


ಆದದರಿಂದ ಅನ್ಯಜನರ ಮಧ್ಯದಲ್ಲಿಂದ ಹೊರಟು ಬಂದು ಪ್ರತ್ಯೇಕವಾಗಿರಿ; ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.


ಬೇರೆ ಅನೇಕವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು - ವಕ್ರಬುದ್ಧಿಯುಳ್ಳ ಈ ಸಂತತಿಯವರಿಂದ ತಪ್ಪಿಸಿಕೊಳ್ಳಿರಿ ಎಂದು ಅವರನ್ನು ಎಚ್ಚರಿಸಿದನು.


ಮೂಢರೇ, [ಮೂಢತ್ವವನ್ನು] ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ ಎಂದು ಪ್ರಬೋಧಿಸುತ್ತಾಳೆ.


ಯಾಬೇಚಿನಲ್ಲಿ ವಾಸಿಸುವ ಕುಲಕರಣಿ ಕುಟುಂಬದವರಾದ ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು ಇವರು ರೇಕಾಬನ ಮನೆಯವರ ಮೂಲಪುರುಷನಾಗಿರುವ ಹಮತನಿಂದ ಉತ್ಪನ್ನರಾದ ಕೇನ್ಯರು.


ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು. ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರೂ ಸಾಯುವವರ ಹಾಹಾಕಾರವನ್ನು ಕೇಳಿ - ಭೂವಿುಯು ನಮ್ಮನ್ನೂ ನುಂಗೀತೆಂದು ಓಡಿಹೋದರು.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -


ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೆ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚಿ ನೋಡುತ್ತಿದ್ದನು.


ರಾಕಾಲಿನವರು, ಎರಹ್ಮೇಲ್ಯರು, ಕೇನ್ಯರು,


ಅಂದರೆ ಕೇನಿಯರೂ ಕೆನಿಜೀಯರೂ ಕದ್ಮೋನಿಯರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು