Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:5 - ಕನ್ನಡ ಸತ್ಯವೇದವು J.V. (BSI)

5 ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ ಎಂದು ಹೇಳಿ ಇಷಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು, “ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ” ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೌದು, ಶುಭಕರವಾಗಿದೆ; ಸರ್ವೇಶ್ವರನಿಗೆ ಬಲಿಯನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ಶುದ್ಧರಾಗಿ ನನ್ನ ಜೊತೆಯಲ್ಲಿ ಬಲಿಯರ್ಪಣೆಗೆ ಬನ್ನಿ,” ಎಂದು ಹೇಳಿ ಜೆಸ್ಸೆಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಬಲಿಯರ್ಪಣೆಗೆ ಆಮಂತ್ರಿಸಿದನು. ಅವರು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಮುವೇಲನು, “ಹೌದು, ಶುಭಕರವಾಗಿದೆ. ನಾನು ಯೆಹೋವನಿಗೆ ಯಜ್ಞವನ್ನು ಅರ್ಪಿಸಲು ಬಂದಿದ್ದೇನೆ. ನೀವೆಲ್ಲ ಸಿದ್ಧರಾಗಿ ಯಜ್ಞಕಾರ್ಯಕ್ಕಾಗಿ ನನ್ನೊಂದಿಗೆ ಬನ್ನಿ” ಎಂದು ಹೇಳಿದನು. ಸಮುವೇಲನು ಇಷಯನನ್ನೂ ಅವನ ಮಕ್ಕಳನ್ನೂ ಸಿದ್ಧಗೊಳಿಸಿದನು. ನಂತರ ಸಮುವೇಲನು ಅವರನ್ನು ಯಜ್ಞದಲ್ಲಿ ಭಾಗಿಗಳಾಗಲು ಆಹ್ವಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದಕ್ಕವನು, “ಸಮಾಧಾನವೇ, ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನನ್ನ ಸಂಗಡ ಯಜ್ಞಮಾಡುವುದಕ್ಕೆ ಬನ್ನಿರಿ,” ಎಂದನು. ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧಮಾಡಿ, ಅವರನ್ನು ಯಜ್ಞಮಾಡುವುದಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:5
16 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋಶುವನು ಜನರಿಗೆ - ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು ಎಂದು ಹೇಳಿದನು.


ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ಅರಿಕೆಮಾಡಲಾಗಿ ಯೆಹೋವನು ಅವನಿಗೆ ಹೇಳಿದ್ದೇನಂದರೆ - ನೀನು ಜನರ ಬಳಿಗೆ ಹೋಗಿ ಈ ಹೊತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು;


ಪ್ರತಿಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.


ನೀನು ಅವರಿಗೆ - ಇಸ್ರಾಯೇಲ್ಯರೇ, ನಾಳೆಗೋಸ್ಕರ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದುಂಟು. ನೀವು ಅದನ್ನು ತೆಗೆದುಹಾಕುವವರೆಗೂ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಅನ್ನುತ್ತಾನೆ.


ಜನರನ್ನು ಒಟ್ಟಿಗೆ ಬರಮಾಡಿರಿ, ಕೂಟವನ್ನು ಏರ್ಪಡಿಸಿರಿ, ವೃದ್ಧರನ್ನು ಕೂಡಿಸಿರಿ, ಮಕ್ಕಳನ್ನೂ ಮೊಲೆಕೂಸುಗಳನ್ನೂ ಸೇರಿಸಿರಿ; ವಧೂವರರೂ ತಮ್ಮ ಕಲ್ಯಾಣಗೃಹದಿಂದ ಹೊರಟುಬರಲಿ.


ಔತಣ ಸರದಿ ತೀರಿದನಂತರ ಯೋಬನು ತನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು ಎಂದು ಅವರನ್ನು ಕರಿಸಿ ಶುದ್ಧಿಪಡಿಸಿ ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುತ್ತಿದ್ದನು.


ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಇಲ್ಲವೆ ಒರಳಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು.


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ - ನಿಮ್ಮಲ್ಲಿರುವ ಅನ್ಯದೇವರುಗಳನ್ನು ತಳ್ಳಿಬಿಟ್ಟು ನಿಮ್ಮನ್ನು ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿರಿ; ನಾವು ಬೇತೇಲಿಗೆ ಹೊರಟುಹೋಗೋಣ.


ಆ ದಿವಸ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನೂ ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.


ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ; ಯೆಹೋವನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಮಡಿಮಾಡಿದ್ದಾನೆ.


ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆಯು ಅವನನ್ನು - ನೀನು ಸಮಾಧಾನದಿಂದ ಬಂದಿರುತ್ತೀಯೋ ಎಂದು ಕೇಳಲು ಅವನು - ಹೌದು, ಸಮಾಧಾನದಿಂದ ಬಂದೆನು ಎಂದನು.


ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು