Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:34 - ಕನ್ನಡ ಸತ್ಯವೇದವು J.V. (BSI)

34 ಆಗ ದಾವೀದನು ಅವನಿಗೆ - ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿದ್ದಾಗ ಸಿಂಹವಾಗಲಿ ಕರಡಿಯಾಗಲಿ ಬಂದು ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಗ ದಾವೀದನು ಅವನಿಗೆ, “ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿರುವಾಗ ಸಿಂಹವಾಗಲಿ, ಕರಡಿಯಾಗಲಿ ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು ಬಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆಗ ದಾವೀದನು, “ತಮ್ಮ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿದ್ದಾಗ ಸಿಂಹವಾಗಲಿ ಅಥವಾ ಕರಡಿಯಾಗಲಿ ಬಂದು ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ದಾವೀದನು ಸೌಲನಿಗೆ, “ನಾನು ನಿನ್ನ ಸೇವಕ. ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿದ್ದೆ. ಸಿಂಹವಾಗಲಿ ಕರಡಿಯಾಗಲಿ ಬಂದು ಕುರಿಮಂದೆಯಿಂದ ಕುರಿಗಳನ್ನು ಹಿಡಿದುಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ದಾವೀದನು ಸೌಲನಿಗೆ, “ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿರುವ ಕುರಿಮರಿಯನ್ನು ಹಿಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:34
18 ತಿಳಿವುಗಳ ಹೋಲಿಕೆ  

ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು;


ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ನೀನು ಅವನೊಡನೆ ಕಾದಾಡಲಾರಿ; ನೀನು ಇನ್ನೂ ಹುಡುಗನು. ಅವನಾದರೋ ಚಿಕ್ಕಂದಿನಿಂದಲೇ ಯುದ್ಧವೀರನು ಎಂದು ಹೇಳಿದನು.


ನಾನು ಒಡನೆ ಅದನ್ನು ಬೆನ್ನಟ್ಟಿ ಹೊಡೆದು ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆನು. ಅದು ಹಿಂದಿರುಗಿ ನನ್ನ ಮೇಲೆ ಬಿದ್ದರೆ ಅದನ್ನು ಗದ್ದಹಿಡಿದು ಬಡಿದು ಕೊಂದುಹಾಕುತ್ತಿದ್ದೆನು.


ಯೆಹೋವನು ಇಂತೆನ್ನುತ್ತಾನೆ - ಸಿಂಹದ ಬಾಯೊಳಗಿಂದ ಎರಡು ಕಾಲುಗಳಾಗಲಿ ಕಿವಿಯ ತುಂಡಾಗಲಿ ಹೇಗೆ ಕುರುಬನಿಂದ ರಕ್ಷಿಸಲ್ಪಡುವದೋ ಹಾಗೆಯೇ ಸಮಾರ್ಯದೊಳಗೆ ಗದ್ದುಗೆಯ ಮೂಲೆಯಲ್ಲಿಯೂ ಮಂಚದ ಪಟ್ಟೇದಿಂಬುಗಳಲ್ಲಿಯೂ ಒರಗಿಕೊಳ್ಳುವ ಇಸ್ರಾಯೇಲ್ಯರ [ಸ್ವಲ್ಪಭಾಗ ಮಾತ್ರ] ರಕ್ಷಿಸಲ್ಪಡುವದು.


ಕಾಡುಮೃಗಗಳು ಕೊಂದ ಪಶುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ಬದಲುಕೊಟ್ಟೆನು; ಹಗಲಾಗಲಿ ಇರುಳಾಗಲಿ ಕದ್ದುಹೋದದ್ದರ ಲೆಕ್ಕವನ್ನು ನನ್ನಿಂದಲೇ ತೆಗೆದುಕೊಂಡಿ;


ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವದಕ್ಕೋಸ್ಕರ ಬೇತ್ಲೆಹೇವಿುಗೆ ಹೋದನು.


ನಿನ್ನ ತಂದೆಯೂ ಅವನ ಜನರೂ ಶೂರರಾಗಿದ್ದಾರೆಂದೂ ಈಗ ಅವರು ಮರಿಯನ್ನು ಕಳಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದೂ ನಿನಗೆ ಗೊತ್ತುಂಟಲ್ಲಾ; ಇದಲ್ಲದೆ ಅವನು ಯುದ್ಧನಿಪುಣನು; ಜನರ ಮಧ್ಯದಲ್ಲಿ ರಾತ್ರಿ ಕಳೆಯುವದಿಲ್ಲ.


ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡಿಸಿದನು. ದೃಷ್ಟಾಂತ - ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.


ಅನೇಕ ಶೂರಕೃತ್ಯಗಳನ್ನು ನಡಿಸಿದ ಕಬ್ಜಯೇಲಿನವನಾದ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.


ಹಳೇ ದಿನಗಳನ್ನು ನೆನಸಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ.


ಮಂದೆಯ ಕುರುಬನು ಸುತ್ತುಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಎಲ್ಲಾ ಸ್ಥಳಗಳಿಂದ ಅವುಗಳನ್ನು ಬಿಡಿಸಿ


ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಶೇಷಜನವಾಗಿ ನಿಲ್ಲುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.


ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ಏರ್ಪಡಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರುಮಾಡುವನು.


ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರೀಹಿಂಡನ್ನು ಕಾಯುತ್ತಿರಲಾಗಿ


ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ಯಾಕಂದರೆ ಉಪದ್ರವದಿಂದ ತಾಳ್ಮೆ ಹುಟ್ಟುತ್ತದೆ, ತಾಳ್ಮೆಯಿಂದ ಅನುಭವಸಿದ್ಧಿ ಹುಟ್ಟುತ್ತದೆ, ಅನುಭವದಿಂದ ನಿರೀಕ್ಷಣ ಹುಟ್ಟುತ್ತದೆಂದು ಬಲ್ಲೆವು.


ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು