Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:51 - ಕನ್ನಡ ಸತ್ಯವೇದವು J.V. (BSI)

51 ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ, ಕೊಂದು ಹಾಕಿದನು ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಹೀಗೆ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಕಲ್ಲಿನಿಂದ ಆ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಫಿಲಿಷ್ಟಿಯರು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ದಾವೀದನು ಓಡುತ್ತಾ ಹೋಗಿ ಫಿಲಿಷ್ಟಿಯನ ಪಕ್ಕದಲ್ಲಿ ನಿಂತುಕೊಂಡನು. ದಾವೀದನು ಗೊಲ್ಯಾತನ ಕತ್ತಿಯನ್ನು ಒರೆಯಿಂದ ತೆಗೆದು ಅದೇ ಕತ್ತಿಯಿಂದ ಅವನ ತಲೆಯನ್ನು ಕತ್ತರಿಸಿ ಹಾಕಿದನು. ದಾವೀದನು ಈ ರೀತಿಯಲ್ಲಿ ಗೊಲ್ಯಾತನನ್ನು ಕೊಂದನು. ಫಿಲಿಷ್ಟಿಯರು ತಮ್ಮ ನಾಯಕನು ಸತ್ತದ್ದನ್ನು ನೋಡಿದಾಗ ಹಿಂದಿರುಗಿ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ದಾವೀದನ ಕೈಯಲ್ಲಿ ಖಡ್ಗ ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಖಡ್ಗವನ್ನು ತೆಗೆದುಕೊಂಡು, ಅದನ್ನು ಒರೆಯಿಂದ ಕಿತ್ತು, ಅವನನ್ನು ಕೊಂದು, ಅವನ ತಲೆಯನ್ನು ಕಡಿದುಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತು ಹೋದದ್ದನ್ನು ಕಂಡಾಗ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:51
10 ತಿಳಿವುಗಳ ಹೋಲಿಕೆ  

ಸಿಂಹಗಳ ಬಾಯಿ ಕಟ್ಟಿದರು; ಬೆಂಕಿಯ ಬಲವನ್ನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.


ನೀನು ಏಲಾ ತಗ್ಗಿನಲ್ಲಿ ಕೊಂದುಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು ಏಫೋದಿನ ಹಿಂದೆ ಇಡಲ್ಪಟ್ಟಿದೆ; ಬೇಕಾದರೆ ಅದನ್ನು ತೆಗೆದುಕೋ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ ಎಂದು ಉತ್ತರಕೊಟ್ಟನು. ದಾವೀದನು - ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ, ಅದನ್ನೇ ಕೊಡು ಎಂದು ಹೇಳಿ ತೆಗೆದುಕೊಂಡನು.


ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳಾಗಿರುವದರಿಂದ ಆತನೂ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ಅಡಗಿಸಿಬಿಡುವದಕ್ಕೂ,


ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ಕೂಡಲೆ ಅವನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ಹಿರಿದು ಅದರಿಂದಲೇ ಅವನ ತಲೆಯನ್ನು ಕಡಿದು ಅವನನ್ನು ಸಾಯಿಸಿದನು.


ದಾವೀದನು ಸೌಲನ ಭಯದಿಂದ ಅದೇ ದಿವಸ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.


ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡು ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ ತಮ್ಮ ಎಲ್ಲಾ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.


ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದು ಕೊಂದು ತಲೆತೆಗೆದುಕೊಂಡು ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು