Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:12 - ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದದರಿಂದ ಸೌಲನು ದಾವೀದನಿಗೆ ಭಯಪಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದುದರಿಂದ ಸೌಲನು ದಾವೀದನಿಗೆ ಭಯಪಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಸೌಲನನ್ನು ತ್ಯಜಿಸಿ ದಾವೀದನೊಂದಿಗೆ ಇದ್ದರು. ಈ ಕಾರಣಕ್ಕಾಗಿ ಸೌಲನು ದಾವೀದನಿಗೆ ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಸೌಲನನ್ನು ಬಿಟ್ಟು ದಾವೀದನ ಜೊತೆಗಿದ್ದನು. ಆದ್ದರಿಂದ ಸೌಲನು ದಾವೀದನಿಗೆ ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸೌಲನು ದಾವೀದನಿಗೆ ಭಯಪಟ್ಟನು. ಏಕೆಂದರೆ ಯೆಹೋವ ದೇವರು ಅವನ ಸಂಗಡ ಇದ್ದರು. ಸೌಲನ ಕಡೆಯಿಂದ ಹೊರಟು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:12
23 ತಿಳಿವುಗಳ ಹೋಲಿಕೆ  

ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.


ಸೌಲನು ಇದನ್ನು ನೋಡಿ ಅವನಿಗೆ ಬಹಳವಾಗಿ ಹೆದರಿಕೊಂಡನು.


ಆಗ ಸಮುವೇಲನು ಸೌಲನನ್ನು - ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದಿ ಎಂದು ಕೇಳಿದನು. ಅದಕ್ಕೆ ಸೌಲನು - ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಬಿಟ್ಟು ದೂರಹೋಗಿದ್ದಾನೆ; ಆತನು ನನಗೆ ಪ್ರವಾದಿಗಳಿಂದಾಗಲಿ ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು ಅಂದನು.


ಸೇವಕರಲ್ಲೊಬ್ಬನು ಅವನಿಗೆ - ಬೇತ್ಲೆಹೇವಿುನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲವನೂ ಪರಾಕ್ರಮಶಾಲಿಯೂ ರಣಶೂರನೂ ವಾಕ್ಚತುರನೂ ಸುಂದರನೂ ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆಂದು ತಿಳಿಸಿದನು.


ಪೌಲನು ಸುನೀತಿ ದಯೆ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ - ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರಿಸುವೆನು ಎಂದು ಹೇಳಿದನು.


ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು.


ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯಹಿಡಿದದ್ದರಿಂದ ಅವರು ಯೇಸುವನ್ನು - ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ಹೆರೋದನು ಯೋಹಾನನನ್ನು ನೀತಿವಂತನೆಂದೂ ದೇವಭಕ್ತನೆಂದೂ ತಿಳಿದು ಅಂಜಿಕೊಂಡು ಅವನಿಗೆ ಯಾವ ಅಪಾಯವೂ ಬಾರದಂತೆ ಇಟ್ಟಿದ್ದನು. ಇದಲ್ಲದೆ ಯೋಹಾನನು ಹೇಳಿದ್ದನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಬಹು ಗಲಿಬಿಲಿ ಹುಟ್ಟಿದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಯಾವನೂ ಉಳಿಯದೆ ಇರುವ ತನಕ ಅವರಿಗೆ ಪುತ್ರಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!


ಭಯಪಡುವದಕ್ಕೆ ಕಾರಣವಿಲ್ಲದಿದ್ದರೂ ಅವರು ಫಕ್ಕನೆ ಭಯಭ್ರಾಂತರಾದರು; ನಿಮಗೆ ಮುತ್ತಿಗೆಹಾಕಿದವರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅಪಜಯಪಡಿಸಿದಿರಿ.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.


ಆಗ ಸೌಲನು ಅವನಿಗೆ - ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು ದೈವೋತ್ತರವನ್ನು ತಿಳಿಸಿದ್ದೇಕೆ ಎಂದು ಕೇಳಲು ಅವನು -


ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಇದು ಸೌಲನಿಗೆ ತಿಳಿದಾಗ ಅವನಿಗೆ ಸಂತೋಷವಾಯಿತು.


ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇವಿುಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ ಎಂದು ಕೇಳಲು ಅವನು -


ನನ್ನ ತಂದೆಯು ನಿನಗೆ ಕೇಡುಮಾಡ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ. ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.


ಯೆಹೋವನು ಯೆಹೂದ್ಯರ ಸಂಗಡ ಇದ್ದದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದದರಿಂದ ಅವರನ್ನು ಹೊರಡಿಸುವದು ಆಗಲಿಲ್ಲ.


ಆಗ ಅವಳು - ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆಂದು ಕೂಗಲು ಅವನು ಎಚ್ಚತ್ತು - ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.


ಸಮುವೇಲನು ದೊಡ್ಡವನಾಗುತ್ತಾ ಬಂದನಷ್ಟೆ. ಯೆಹೋವನು ಅವನೊಡನೆ ಇದ್ದದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.


ಸೇನಾಧೀಶ್ವರನಾದ ಯೆಹೋವದೇವರು ಅವನ ಸಂಗಡ ಇದ್ದದರಿಂದ ಅವನು ಅಭಿವೃದ್ಧಿಹೊಂದುತ್ತಾ ಹೋದನು.


ಇವನು ಬಾಳ್‍ದೇವರುಗಳನ್ನು ಅವಲಂಬಿಸದೆ ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಇವನ ಸಂಗಡ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು