Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:11 - ಕನ್ನಡ ಸತ್ಯವೇದವು J.V. (BSI)

11 ಸೌಲನು ಕೂಡಲೆ ದೂತರನ್ನು ಕರಿಸಿ - ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ - ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೌಲನು ಕೂಡಲೇ ದೂತರನ್ನು ಕರಿಸಿ ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸೌಲನು ಕೂಡಲೆ ದೂತರನ್ನು ಕರೆಯಿಸಿ, “ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕು,” ಎಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀವು ಈ ರಾತ್ರಿಯೇ ತಪ್ಪಿಸಿಕೊಳ್ಳದೆ ಇದ್ದರೆ ನಾಳೆ ಬೆಳಿಗ್ಗೆ ಹತರಾಗುವಿರಿ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸೌಲನು ದಾವೀದನ ಮನೆಗೆ ತನ್ನ ಜನರನ್ನು ಕಳುಹಿಸಿದನು. ಅವರು ದಾವೀದನ ಮನೆಯನ್ನು ಕಾಯ್ದರು. ಅವರು ರಾತ್ರಿಯೆಲ್ಲಾ ಅಲ್ಲಿಯೇ ಇದ್ದರು. ಅವರು ದಾವೀದನನ್ನು ಬೆಳಿಗ್ಗೆ ಕೊಲ್ಲಲು ಕಾಯುತ್ತಿದ್ದರು. ಆದರೆ ದಾವೀದನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯೇ ಓಡಿಹೋಗಿ, ನಿನ್ನ ಜೀವವನ್ನು ಕಾಪಾಡಿಕೋ. ಇಲ್ಲವಾದರೆ, ನಿನ್ನನ್ನು ಅವರು ಕೊಂದುಬಿಡುತ್ತಾರೆ” ಎಂದು ಎಚ್ಚರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ದಾವೀದನನ್ನು ಕಾದುಕೊಂಡಿದ್ದು, ಉದಯದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ, ನಾಳೆ ಹತನಾಗುವಿ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:11
5 ತಿಳಿವುಗಳ ಹೋಲಿಕೆ  

ಸಂಸೋನನು ಬಂದಿರುವದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು; ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.


ಅವನು ಅವನನ್ನು ಹಿಡಿದು ತರುವದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪರವಶವಾಗಿ ಮಾತಾಡುವದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವದನ್ನೂ ಕಂಡಾಗ ದೇವರ ಆತ್ಮವು ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.


ಅದಕ್ಕೆ ದಾವೀದನು - ಒಳ್ಳೇದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಆದರೆ ನೀನು ಒಂದು ಮಾಡಬೇಕು. ನನ್ನನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರಕೊಂಡು ಬರಬೇಕು; ಹಾಗೆ ಕರಕೊಂಡು ಬಾರದಿದ್ದರೆ ನೀನು ನನ್ನ ಮೋರೆಯನ್ನು ನೋಡಕೂಡದು ಎಂದು ಉತ್ತರ ಕೊಟ್ಟನು.


ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ; ಆದದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು