Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:20 - ಕನ್ನಡ ಸತ್ಯವೇದವು J.V. (BSI)

20 ಅವನು ಅವನನ್ನು ಹಿಡಿದು ತರುವದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪರವಶವಾಗಿ ಮಾತಾಡುವದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವದನ್ನೂ ಕಂಡಾಗ ದೇವರ ಆತ್ಮವು ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ದಾವೀದನನ್ನು ಹಿಡಿದು ತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪ್ರವಾದಿಸುತ್ತಿರುವುದನ್ನೂ, ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನು ಕಂಡಾಗ, ದೇವರ ಆತ್ಮವು ಅವರ ಮೇಲೆಯೂ ಬಂದಿತು. ಅವರೂ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕೂಡಲೆ ಅವನನ್ನು ಹಿಡಿದುತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿಸಮೂಹವು ಪರವಶವಾಗಿ ಮಾತಾಡುವುದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನೂ ಕಂಡರು. ಆಗ ದೇವರ ಆತ್ಮ ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದಾವೀದನನ್ನು ಬಂಧಿಸಿ ತರಲು ಸೌಲನು ಜನರನ್ನು ಕಳುಹಿಸಿದನು. ಆದರೆ ಆ ಜನರು ಪಾಳೆಯಕ್ಕೆ ಬರುವಷ್ಟರಲ್ಲಿ ಪ್ರವಾದಿಗಳು ಅಲ್ಲಿ ಪ್ರವಾದಿಸುತ್ತಿದ್ದರು. ಸಮುವೇಲನು ಅವರ ನಾಯಕನಾಗಿ ನಿಂತಿದ್ದನು. ದೇವರಾತ್ಮವು ಸಂದೇಶಕರ ಮೇಲೆ ಬಂದದ್ದರಿಂದ ಅವರೂ ಪ್ರವಾದಿಸಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದನು. ಪ್ರವಾದಿಗಳ ಗುಂಪು ಪ್ರವಾದಿಸುವುದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುಯೇಲನು ನಿಂತಿರುವುದನ್ನೂ ಕಂಡಾಗ, ದೇವರ ಆತ್ಮ ಸೌಲನ ದೂತರ ಮೇಲೆ ಬಂದಿತು, ಅವರೂ ಸಹ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:20
13 ತಿಳಿವುಗಳ ಹೋಲಿಕೆ  

ಜನರು ಆತನ ವಿಷಯವಾಗಿ ಗುಜುಗುಜು ಆಡಿದ ಈ ಮಾತುಗಳನ್ನು ಫರಿಸಾಯರು ಕೇಳಲು ಮಹಾಯಾಜಕರೂ ಫರಿಸಾಯರೂ ಆತನನ್ನು ಹಿಡಿಯುವದಕ್ಕೆ ಓಲೇಕಾರರನ್ನು ಕಳುಹಿಸಿದರು.


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು, ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;


ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವದನ್ನು ಕಂಡನು. ದೇವರ ಆತ್ಮವು ಅವನ ಮೇಲೆ ಬಂದದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು.


ಸೌಲನ ದೂತರು ದಾವೀದನನ್ನು ಹಿಡಿಯುವದಕ್ಕೆ ಬಂದಾಗ ಅವಳು - ಅವನಿಗೆ ಸ್ವಸ್ಥವಿಲ್ಲವೆಂದು ಹೇಳಿ ಕಳುಹಿಸಿದಳು.


ಸೌಲನು ಕೂಡಲೆ ದೂತರನ್ನು ಕರಿಸಿ - ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ - ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ ಎಂದು ಹೇಳಿ


ಪ್ರವಾದಿಸುವವರಾದರೋ ಮನುಷ್ಯರ ಸಂಗಡ ಮಾತಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುತ್ತಾನೆ.


ಅವನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲ್ಯರು ಅವನಿಗೆ ಕಾಣಿಸಿದರು.


ದಾವೀದನು ರಾಮದ ಮಠದಲ್ಲಿರುವದು ಸೌಲನಿಗೆ ಗೊತ್ತಾಗಲು


ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು; ಇವರೂ ಪರವಶರಾದರು. ಮೂರನೆಯ ಸಾರಿ ಇನ್ನು ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಇವರೂ ಪರವಶರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು