Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:15 - ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ - ಯಾಜಕನಿಗೋಸ್ಕರ ಕರಿಯತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವದಿಲ್ಲ; ಅವನಿಗೆ ಹಸೀ ಮಾಂಸವೇ ಬೇಕು ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವುದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ, “ಯಾಜಕನಿಗೋಸ್ಕರ ಸುಡತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವುದಿಲ್ಲ; ಅವನಿಗೆ ಹಸಿಮಾಂಸವೇ ಬೇಕು” ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ, ಕೊಬ್ಬನ್ನು ಹೋಮಮಾಡುವುದಕ್ಕೆ ಮುಂಚೆಯೇ ಯಾಜಕನ ಆಳು ಬಂದು ಬಲಿಯರ್ಪಿಸುತ್ತಿದ್ದವನಿಗೆ, “ಹುರಿಯತಕ್ಕ ಮಾಂಸವನ್ನು ಯಾಜಕನಿಗೆ ಕೊಡು; ನೀವು ಬೇಯಿಸಿದ ಮಾಂಸವನ್ನು ಅವರು ತೆಗೆದುಕೊಳ್ಳುವುದಿಲ್ಲ; ಅವರಿಗೆ ಹಸಿ ಮಾಂಸವೇ ಬೇಕು,” ಎನ್ನುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಏಲಿಯ ಮಕ್ಕಳು ಈ ರೀತಿ ಮಾಡುತ್ತಿರಲಿಲ್ಲ. ಯಜ್ಞವೇದಿಕೆಯ ಮೇಲೆ ಕೊಬ್ಬನ್ನು ಹೋಮ ಮಾಡುವುದಕ್ಕಿಂತ ಮೊದಲೇ ಅವರ ಸೇವಕರು ಯಜ್ಞಗಳನ್ನು ಅರ್ಪಿಸುವ ಜನರ ಬಳಿಗೆ ಹೋಗುತ್ತಿದ್ದರು. ಯಾಜಕನ ಸೇವಕನು, “ಯಾಜಕನಿಗೆ ಕರಿದು ಕೊಡಲು ಸ್ವಲ್ಪ ಮಾಂಸವನ್ನು ಕೊಡಿ. ಬೇಯಿಸಿದ ಮಾಂಸವನ್ನು ಯಾಜಕನು ನಿಮ್ಮಿಂದ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಕೊಬ್ಬನ್ನು ಬಲಿ ಅರ್ಪಿಸುವುದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು, ಬಲಿಯನ್ನು ಅರ್ಪಿಸುವವನ ಸಂಗಡ, “ಯಾಜಕನಿಗೆ ಸುಡುವುದಕ್ಕೆ ಮಾಂಸವನ್ನು ಕೊಡು. ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತೆಗೆದುಕೊಳ್ಳುವುದಿಲ್ಲ. ಅದು ಹಸಿಯಾಗಿರಬೇಕು,” ಎನ್ನುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:15
8 ತಿಳಿವುಗಳ ಹೋಲಿಕೆ  

ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅದು ಸುಗಂಧ ಹೋಮರೂಪವಾಗಿ ಯೆಹೋವನಿಗೆ ಆಹಾರವಾಗಿರುವದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು, ಅವರು ಪ್ರಪಂಚದ ಕಾರ್ಯಗಳ ಮೇಲೆ ಮನಸ್ಸಿಡುವವರು. ನಾವಾದರೋ ಪರಲೋಕಸಂಸ್ಥಾನದವರು;


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು ನಿಮ್ಮ ಪ್ರೇಮಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ; ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ನೋಡಿಕೊಳ್ಳುವ ಕುರುಬರಾಗಿದ್ದಾರೆ. ಇವರು ಗಾಳಿಯಿಂದ ಹೊಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ, ಎಲೆಗಳುದುರಿ ಹಣ್ಣುಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ,


ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು; ಅದನ್ನೆಲ್ಲಾ ತಲೆ ತೊಡೆ ಹೊಟ್ಟೆಯೊಳಗಣವುಗಳು ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು.


ಅದನ್ನು ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೋಸ್ಕರ ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು.


ಅರ್ಪಿಸುವವನು - ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದಾಗ ಅವನು - ಈಗಲೇ ಕೊಡಬೇಕು: ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು ಎನ್ನುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು