Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:17 - ಕನ್ನಡ ಸತ್ಯವೇದವು J.V. (BSI)

17 ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಫೀಕರಿಸಿದ್ದರಿಂದ ಅವರ ಅಪರಾಧವು ಆತನ ದೃಷ್ಟಿಯಲ್ಲಿ ಅಧಿಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ಸರ್ವೇಶ್ವರನ ನೈವೇದ್ಯವನ್ನು ತುಚ್ಛವಾಗಿ ಕಾಣುತ್ತಿದ್ದುದರಿಂದ ದೇವರ ದೃಷ್ಟಿಯಲ್ಲಿ ಏಲಿಯ ಮಕ್ಕಳ ಪಾಪ ಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನಿಗೆ ಅರ್ಪಿಸುವ ಯಜ್ಞವನ್ನು ಹೊಫ್ನಿ ಮತ್ತು ಫೀನೆಹಾಸರು ತುಚ್ಛೀಕರಿಸುತ್ತಿದ್ದರು. ಇದು ಯೆಹೋವನಿಗೆ ವಿರೋಧವಾದ ಮಹಾ ಪಾಪವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ಯುವಕರ ಪಾಪವು ಯೆಹೋವ ದೇವರ ದೃಷ್ಟಿಯಲ್ಲಿ ಅಧಿಕವಾಗಿತ್ತು. ಏಕೆಂದರೆ ಅವರು ಯೆಹೋವ ದೇವರ ನೈವೇದ್ಯವನ್ನು ತುಚ್ಛವಾಗಿ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:17
11 ತಿಳಿವುಗಳ ಹೋಲಿಕೆ  

ಇನ್ನೊಂದನ್ನು ನಡಿಸುತ್ತೀರಿ - ಯೆಹೋವನ ಯಜ್ಞವೇದಿಯನ್ನು ಕಣ್ಣೀರಿನಿಂದಲೂ ಅಳುವಿಕೆಯಿಂದಲೂ ನರಳಾಟದಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.


ಆದರೆ ಸೊದೋಮ್ ಪಟ್ಟಣದವರು ದುಷ್ಟರೂ ಯೆಹೋವನಿಗೆ ಮಹಾಪರಾಧಿಗಳೂ ಆಗಿದ್ದರು.


ಭೂಲೋಕದವರು ದೇವರ ದೃಷ್ಟಿಗೆ ಕೆಟ್ಟುಹೋಗಿದ್ದರು; ಅನ್ಯಾಯವು ಲೋಕವನ್ನು ತುಂಬಿಕೊಂಡಿತ್ತು.


ತೊಡಕುಗಳು ಬರುವದರಿಂದ ಲೋಕಕ್ಕೆ ಎಷ್ಟೋ ಕೇಡು! ತೊಡಕುಗಳು ಹೇಗಾದರೂ ಬರುವವು. ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ, ಅವನ ಗತಿಯನ್ನು ಏನು ಹೇಳಲಿ!


ಯೆರೂಸಲೇಮು ಹಾಳಾಯಿತು, ಯೆಹೂದದವರು ಬಿದ್ದುಹೋದರು! ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಪ್ರತಿಭಟಿಸುತ್ತವಲ್ಲವೆ.


ನಿನಗೇ ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದಲ್ಲಾ.


ಇದಲ್ಲದೆ ಅವನು ತನ್ನ ಮಗನನ್ನು ಆಹುತಿಕೊಟ್ಟನು. ಕಣಿಹೇಳಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೈತಾಳಿಕರ ಬಳಿಕೆ ಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಅವನು ಅತಿ ಸಾಹಸಿಯಾದ ಬೇಟೆಗಾರನು. ನಿಮ್ರೋದನಂತೆ ಅತಿ ಸಾಹಸಿಯಾದ ಬೇಟೆಗಾರನೆಂದು ಈಗಲೂ ಹೇಳುವದುಂಟಲ್ಲಾ.


ಅರ್ಪಿಸುವವನು - ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದಾಗ ಅವನು - ಈಗಲೇ ಕೊಡಬೇಕು: ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು ಎನ್ನುವನು.


ತನ್ನ ಮಕ್ಕಳು ದೇವದೂಷಕರೆಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿವಿುತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು