Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:33 - ಕನ್ನಡ ಸತ್ಯವೇದವು J.V. (BSI)

33 ನಾನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದುಹಾಕದೆ ಒಬ್ಬನನ್ನಾದರೂ ಉಳಿಸಿದರೆ ಅವನು ನಿನ್ನ ಕಣ್ಗೇಡಿಗೂ ಮನೋವ್ಯಥೆಗೂ ಕಾರಣನಾಗುವನು. ನಿನ್ನ ಸಂತಾನದವರೆಲ್ಲರೂ ಕತ್ತಿಯಿಂದ ಸಂಹೃತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಾನು ನಿನ್ನ ಸಂತಾನವನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕದೆ, ಒಬ್ಬನನ್ನಾದರೂ ಉಳಿಸಿದರೆ ಅವನು ನಿನ್ನ ಕಣ್ಣೀರಿಗೂ ಮತ್ತು ಮನೋವ್ಯಥೆಗೂ ಕಾರಣನಾಗುವನು. ನಿನ್ನ ಸಂತಾನದವರೆಲ್ಲರೂ ಕತ್ತಿಯಿಂದ ಸಂಹಾರವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನನ್ನ ಸಾನ್ನಿಧ್ಯ ಸೇವೆಯಿಂದ ನಿಮ್ಮಲ್ಲಿ ಒಬ್ಬನನ್ನು ಉಳಿಸಿ ಮಿಕ್ಕವರನ್ನು ತೆಗೆದುಹಾಕುವೆನು. ಉಳಿಸಲಾದವನು ಕೂಡ ಕುರುಡನಾಗಿ ನಿನ್ನ ವ್ಯಥೆಗೆ ಕಾರಣನಾಗುವನು. ನಿನ್ನ ಸಂತಾನದವರೆಲ್ಲರು ಕತ್ತಿಯಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನನ್ನ ಯಜ್ಞವೇದಿಕೆಯ ಬಳಿಯಲ್ಲಿ ಯಾಜಕಸೇವೆ ಮಾಡುವುದಕ್ಕಾಗಿ ನಾನು ಒಬ್ಬನನ್ನು ಉಳಿಸಿಕೊಳ್ಳುವೆನು. ಅವನು ಬಹುಮುಪ್ಪಿನವರೆಗೂ ಬದುಕುವನು. ಅವನ ಕಣ್ಣುಗಳು ಕಾಣದೆ ಹೋಗುವವರೆಗೂ ಬಲಹೀನನಾಗುವವರೆಗೂ ಅವನು ಬದುಕುವನು. ಉಳಿದ ನಿನ್ನ ಸಂತತಿಯವರೆಲ್ಲಾ ಖಡ್ಗದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನನ್ನ ಬಲಿಪೀಠದ ಸೇವೆಯಿಂದ ನಾನು ತೆಗೆದು ಬಿಡದ ಮನುಷ್ಯನು, ನಿನ್ನ ಕಣ್ಣುಗಳನ್ನು ಕುಂದಿಸಿ, ನಿನ್ನ ಹೃದಯವನ್ನು ವೇದನೆ ಪಡಿಸುವುದಕ್ಕೆ ಇರುವನು. ನಿನ್ನ ಮನೆಯ ಸಂತತಿಯವರೆಲ್ಲಾ ಯೌವನ ಪ್ರಾಯದಲ್ಲಿಯೇ ಖಡ್ಗದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:33
9 ತಿಳಿವುಗಳ ಹೋಲಿಕೆ  

ರಾಜನಾಗಿ ಹೋರಿಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೇನಾಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ.


ಅವನು ಚೆರೂಯಳ ಮಗನಾದ ಯೋವಾಬನನ್ನೂ ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನಿಗೆ ಸಹಾಯಕರಾದರು.


ನಾನು ನಿಮಗೆ ಮಾಡುವದೇನಂದರೆ - ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜ ಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.


ನಿನ್ನ ವೈರಿಯು ನನ್ನ ಮಂದಿರದಲ್ಲಿ ಸೇವೆಮಾಡುವದನ್ನು ನೋಡುವಿ. ಇಸ್ರಾಯೇಲ್ಯರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವದೇ ಇಲ್ಲ.


ಇದೆಲ್ಲಾ ನೆರವೇರುವದೆಂಬದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಫೀನೆಹಾಸರು ಒಂದೇ ದಿವಸದಲ್ಲಿ ಸಾಯುವದೇ ಗುರುತಾಗಿರುವದು.


ಆದದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ - ನೀನು ಹೋಗಿ ಅವರನ್ನು ಕೊಲ್ಲು ಎಂದು ಆಜ್ಞಾಪಿಸಲು ಅವನು ನಾರು ಬಟ್ಟೆಯ ಏಫೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಮಂದಿ ಯಾಜಕರನ್ನು ಆ ದಿವಸ ಕೊಂದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು