Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:9 - ಕನ್ನಡ ಸತ್ಯವೇದವು J.V. (BSI)

9 ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ತಮ್ಮ ಪರಿಶುದ್ಧರ ಪಾದಗಳನ್ನು ಕಾಯುವರು. ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು. “ತನ್ನ ಶಕ್ತಿಯಿಂದ ಒಬ್ಬನೂ ಜಯಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:9
41 ತಿಳಿವುಗಳ ಹೋಲಿಕೆ  

ಆತನು ನಿನ್ನ ಪಾದಗಳನ್ನು ಕದಲಗೊಡಿಸದಿರಲಿ; ನಿನ್ನನ್ನು ಕಾಯುವವನು ತೂಕಡಿಸದಿರಲಿ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ


ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.


ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದಾಗಲೇ ನಿನ್ನ ಕೃಪೆಯು ನನಗೆ ಆಧಾರವಾಯಿತು.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವದು.


ನಿನ್ನ ಗುಡಾರಕ್ಕೆ ಅಪಾಯವಿಲ್ಲವೆಂದು ನಿನಗೆ ಗೊತ್ತೇ ಇರುವದು; ನಿನ್ನ ಹಟ್ಟಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವದಿಲ್ಲ;


ಆತನು ತನ್ನ ಜನರನ್ನು ಪ್ರೀತಿಸುತ್ತಾನೆ; [ಯೆಹೋವನೇ,] ನಿನ್ನ ಭಕ್ತರೆಲ್ಲರೂ ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣ ಸನ್ನಿಧಾನದಲ್ಲಿ ಕೂತಿರುವರು; ನೀನು ಹೇಳುವ ಆಜ್ಞೆಗಳನ್ನು ಶಿರಸ್ಸಾವಹಿಸುವರು.


ಮನುಷ್ಯನು ತನ್ನ ಮನದಂತೆ ದಾರಿಯನ್ನಾರಿಸಿಕೊಂಡರೂ ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.


ನೀನು ಹೋಗುವಾಗಲೂ ಬರುವಾಗಲೂ ಇಂದಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.


ಇವರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮಂಜೂ ಆಗಿದ್ದಾರೆ; ಇಂಥವರ ಪಾಲಿಗೆ ಕಾರ್ಗತ್ತಲೆ ಇಟ್ಟಿರುವದು.


ಆದರೆ ಆ ರಾಜ್ಯದ ಬಾಧ್ಯಸ್ಥರು ಹೊರಗೆ ಕತ್ತಲೆಗೆ ಹಾಕಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು ಎಂದು ಹೇಳಿದನು.


ಆ ದಿನವು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ.


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು ನಿನ್ನ ಕಾಲು ಪಾಶಕ್ಕೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.


ಅವನ ಜೀವಮಾನವೆಲ್ಲಾ ಅವನ ಊಟದಲ್ಲಿ ಕತ್ತಲು ಕವಿದಿರುವದು; ಅವನಿಗೆ ಕರಕರೆಯು ಶಾನೆ; ರೋಗರೋಷಗಳು ಇದ್ದೇ ಇರುವವು.


ನ್ಯಾಯಮಾರ್ಗವನ್ನು ರಕ್ಷಿಸುತ್ತಾ ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು.


ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನಮಾಡುತ್ತಿದ್ದಾಗ ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.


ಯೇಸು ಕ್ರಿಸ್ತನ ದಾಸನೂ ಯಾಕೋಬನ ತಮ್ಮನೂ ಆಗಿರುವ ಯೂದನು ತಂದೆಯಾದ ದೇವರಲ್ಲಿ ಪ್ರಿಯರಾದವರೂ ಯೇಸು ಕ್ರಿಸ್ತನಿಗಾಗಿ ಕಾಯಲ್ಪಟ್ಟವರೂ ಆಗಿರುವವರಿಗೆ ಬರೆಯುವದೇನಂದರೆ -


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಯೆಹೋವನು ಹೀಗನ್ನುತ್ತಾನೆ - ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರವಿುಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ;


[ಆ ಕಾಲದಲ್ಲಿ ಜನರು ಹೀಗನ್ನುವರು - ] ಸುಮ್ಮನೆ ಕೂತಿರುವದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ; ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.


ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವದು, ಅನ್ಯಾಯವು ಬಾಯಿಮುಚ್ಚಿಕೊಳ್ಳುವದು.


ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ;


ಯೆಹೋವನೇ, ಮೊರೆಯಿಟ್ಟಿದ್ದೇನೆ; ನನಗೆ ಆಶಾಭಂಗಪಡಿಸಬೇಡ. ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ.


ಯೆಹೋವನಾದ ನಾನು ತೋಟಗಾರನು, ಕ್ಷಣಕ್ಷಣವೂ ನೀರು ಹೊಯ್ಯುತ್ತಿದ್ದೇನೆ; ಯಾರೂ ಮುಟ್ಟದ ಹಾಗೆ ಹಗಲಿರುಳೂ ಕಾಯುತ್ತೇನೆ.


ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆ, ನಿನ್ನ ಜೀವದಾಣೆ, ನಿನ್ನ ವಿರೋಧಿಗಳೂ ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.


ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ ಲೋಕದಿಂದಲೇ ಅಟ್ಟಿಬಿಡುವರು.


ಅವರನ್ನು ಒಟ್ಟಿಗೆ ದೂಳಿನಲ್ಲಡಗಿಸಿ ಅಂಧಕಾರಲೋಕದಲ್ಲಿ ಅವರ ಮುಖಕ್ಕೆ ಮುಸುಕು ಹಾಕು.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವದು.


ಇಸ್ರಾಯೇಲ್ಯರನ್ನು ಬೆಳ್ಳಿಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಒಬ್ಬನಾದರೂ ಎಡವುವವನಿರಲಿಲ್ಲ.


ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ; ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.


ಕಸ್ದೀಯರ ನಗರಿಯೇ, ಮೌನವಾಗಿ ಕೂತುಕೋ, ಕತ್ತಲೊಳಗೆ ಹೊಗು, ನೀನು ಇನ್ನು ರಾಜ್ಯಗಳ ರಾಣಿ ಎನಿಸಿಕೊಳ್ಳೆ.


ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನೆವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು