Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:13 - ಕನ್ನಡ ಸತ್ಯವೇದವು J.V. (BSI)

13 ನನ್ನ ತಂದೆಯು ನಿನಗೆ ಕೇಡುಮಾಡ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ. ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ತಂದೆಯು ನಿನಗೆ ಕೇಡುಮಾಡುವ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ, ನೀನು ತಪ್ಪಿಸಿಕೊಂಡು ಸುರಕ್ಷಿತವಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ, ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನನ್ನ ತಂದೆ ನಿನಗೆ ಕೇಡುಮಾಡಲು ಮನಸ್ಸುಮಾಡಿದ್ದಾರೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ, ಸರ್ವೇಶ್ವರ ನನಗೆ ಏನು ಬೇಕಾದರೂ ಮಾಡಲಿ. ಅವರು ನನ್ನ ತಂದೆಯೊಂದಿಗೆ ಇದ್ದಹಾಗೆ ನಿನ್ನೊಂದಿಗೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ತಂದೆಯು ನಿನಗೆ ಕೇಡುಮಾಡಬೇಕೆಂದಿದ್ದರೆ, ಅದನ್ನು ನಾನು ನಿನಗೆ ತಿಳಿಸಿ, ನೀನು ಸುರಕ್ಷಿತವಾಗಿರಲು ಅವಕಾಶ ಮಾಡಿಕೊಡುತ್ತೇನೆ. ಈ ಕಾರ್ಯವನ್ನು ನಾನು ಮಾಡದೆ ಹೋದರೆ ಯೆಹೋವನು ನನ್ನನ್ನು ದಂಡಿಸಲಿ. ಯೆಹೋವನು ನನ್ನ ತಂದೆಯ ಜೊತೆಯಲ್ಲಿದ್ದಂತೆ ನಿನ್ನ ಜೊತೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ನಿನಗೆ ಕೇಡು ಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ, ಅದನ್ನು ನಿನಗೆ ತಿಳಿಸಿ ನೀನು ಸಮಾಧಾನದಿಂದ ಹೋಗುವಹಾಗೆ ನಿನ್ನನ್ನು ಕಳುಹಿಸುವೆನು. ಯೆಹೋವ ದೇವರು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:13
22 ತಿಳಿವುಗಳ ಹೋಲಿಕೆ  

ಶಿಲ್ಪಿಗರೂ ಬಡಗಿಯವರೂ ಬಂಗಾರ ಬೆಳ್ಳಿ ತಾಮ್ರ ಕಬ್ಬಿಣಗಳ ಎಲ್ಲಾ ತರದ ಕೆಲಸವನ್ನು ಮಾಡುವದರಲ್ಲಿ ಜಾಣರೂ ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವದಕ್ಕಾಗುವದಿಲ್ಲ. ಏಳು, ಕೆಲಸಕ್ಕೆ ಕೈಹಾಕು; ಯೆಹೋವನು ನಿನ್ನ ಸಂಗಡ ಇರಲಿ ಎಂದು ಹೇಳಿದನು.


ನನ್ನ ಮಗನೇ, ನೀನು ಕೃತಾರ್ಥನಾಗುವಂತೆಯೂ ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.


ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಗೂ ತಪ್ಪಿಸುವನು ಎನ್ನಲು ಸೌಲನು ದಾವೀದನಿಗೆ - ಹೋಗು; ಯೆಹೋವನು ನಿನ್ನ ಸಂಗಡ ಇರಲಿ ಎಂದು ಹೇಳಿ


ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂದಳು.


ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನು.


ಆಗ ಏಲಿಯು ಅವನಿಗೆ - ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಬೇಡ; ಮುಚ್ಚಿದರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ ಎಂದು ಹೇಳಲು


ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿ ಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ದೂತರು ಬಂದು ಈ ಮಾತುಗಳನ್ನು ಬೆನ್ಹದದನಿಗೆ ತಿಳಿಸಿದಾಗ ಅವನು ಅಹಾಬನಿಗೆ - ಸಮಾರ್ಯಪಟ್ಟಣದ ನಾಶನದಿಂದುಂಟಾಗುವ ಧೂಳು ಲೆಕ್ಕವಿಲ್ಲದ ನನ್ನ ಸೈನಿಕರ ಹಿಡಿತುಂಬವಷ್ಟಿದ್ದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದನು.


ಆಕೆಯು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದಳು.


ಅಮಾಸನಿಗೆ - ನೀನೂ ನನ್ನ ರಕ್ತ ಸಂಬಂಧಿಯಾಗಿದ್ದೀ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂಬದಾಗಿಯೂ ತಿಳಿಸಿರಿ ಎಂದು ಹೇಳಿಕಳುಹಿಸಿದನು.


ಆದರೂ ನನ್ನ ಕೃಪೆಯು ಸೌಲನನ್ನು ಬಿಟ್ಟುಹೊದ ಹಾಗೆ ಅವನನ್ನು ಬಿಟ್ಟುಹೋಗುವದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ!


ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು - ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ ಎಂದು ಆಣೆಯಿಟ್ಟು ಹೇಳಿದನು.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ ಎಂದು ಪ್ರತಿಜ್ಞೆಮಾಡಿದ್ದನು.


ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದದರಿಂದ ಸೌಲನು ದಾವೀದನಿಗೆ ಭಯಪಟ್ಟು


ಸೌಲನು ಇಸ್ರಾಯೇಲ್ಯರ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದದ್ದನ್ನು ನಡಿಸು; ದೇವರು ನಿನ್ನ ಸಂಗಡ ಇದ್ದಾನೆ.


ನೀನು ಅಡಗಿಕೊಂಡಿರುವ ಹೊಲಕ್ಕೆ ನಾನೂ ಬಂದು ನನ್ನ ತಂದೆಯ ಬಳಿಯಲ್ಲಿ ನಿಂತು ನಿನ್ನ ವಿಷಯ ಅವನೊಡನೆ ಮಾತಾಡಿ ಗೊತ್ತಾಗುವದನ್ನು ನಿನಗೆ ತಿಳಿಸುವೆನು ಎಂದು ಹೇಳಿದನು.


ಅವರಿಬ್ಬರೂ ಅಡವಿಗೆ ಹೋದ ಮೇಲೆ ಯೋನಾತಾನನು ದಾವೀದನಿಗೆ - ಇಸ್ರಾಯೇಲ್‍ದೇವರಾದ ಯೆಹೋವನೇ ಸಾಕ್ಷಿ; ನಾನು ನಾಳೆ ಇಲ್ಲವೆ ನಾಡದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತಾಡಿ ನಿನ್ನ ಮೇಲೆ ಅವನಿಗೆ ದಯವುಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಯಪಡಿಸುವೆನು.


ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು;


ಆತನು ನನ್ನ ಒಡೆಯನಾದ ಅರಸನ ಸಂಗಡ ಇದ್ದ ಪ್ರಕಾರ ಸೊಲೊಮೋನನ ಸಂಗಡಲೂ ಇದ್ದು ರಾಜ್ಯವನ್ನು ನನ್ನ ಒಡೆಯನೂ ಅರಸನೂ ಆದ ನಿನ್ನ ಕಾಲದಲ್ಲಿದ್ದದ್ದಕ್ಕಿಂತ ಅಭಿವೃದ್ಧಿಮಾಡಲಿ ಎಂದು ನುಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು